ಅವ್ಯವಹಾರ ಬೆಳಕಿಗೆ ಬಂದ ವಾರದ ನಂತರ ಮನ್ಮುಲ್ ವ್ಯವಸ್ಥಾಪಕ ನಿರ್ದೇಶಕ ಚಂದ್ರಶೇಖರ್ ಅವರನ್ನು ತರಾತುರಿಯಲ್ಲಿ ವರ್ಗಾವಣೆ ಮಾಡಲಾಗಿದೆ. ಹಾಲಿನ ಗುಣಮಟ್ಟ ಪರೀಕ್ಷೆ ವೇಳೆ ತಪ್ಪೆಸಗಿರುವ ಆರೋಪದ ಮೇಲೆ ಇತರ 6 ಮಂದಿಯನ್ನು ಅಮಾನತು ಮಾಡಲಾಗಿದೆ. ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಶೋಕ್ ಅವರನ್ನು ನೇಮಕ ಮಾಡಲಾಗಿದೆ.