<p><strong>ಮಳವಳ್ಳಿ:</strong> ‘ಮಳವಳ್ಳಿಯಲ್ಲಿ ಡಿ.18ರಿಂದ ಒಂದು ವಾರಗಳ ಕಾಲ ನಡೆಯುವ ಶಿವರಾತ್ರೀಶ್ವರ ಶಿವಯೋಗಿಯವರ ಜಯಂತ್ಯುತ್ಸವವು ಸರ್ವಧರ್ಮದವರು ಒಗ್ಗೂಡಿ ಆಚರಣೆ ಮಾಡುವ ಮೂಲಕ ಉತ್ತಮ ಸಂದೇಶ ನೀಡಬೇಕು’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕರೆ ನೀಡಿದರು.</p>.<p>ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಯವರ 1066ನೇ ಜಯಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದ ಟಿಎಪಿಸಿಎಂಎಸ್ ಮುಂಭಾಗ ನಿವೇಶನದಲ್ಲಿ ಮಂಗಳವಾರ ನಡೆದ ಸರ್ವಧರ್ಮದವರ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಜಯಂತ್ಯುತ್ಸವದಲ್ಲಿ ಉಳಿದ ಹಣದ ಜೊತೆಗೆ ಮಠದ ಸಂಪನ್ಮೂಲವನ್ನು ಸೇರಿಸಿ ತಾಲ್ಲೂಕಿನ ಐತಿಹಾಸಿಕ ಸ್ಥಳವೊಂದನ್ನು ಅಭಿವೃದ್ಧಿಪಡಿಸಲಾಗುವುದು. ಜವಾಬ್ದಾರಿಗಳ ಹಂಚಿಕೆಗೆ ತಂಡಗಳ ಒಳಗೊಂಡಂತೆ ಸಮಿತಿ ರಚಿಸಲಾಗುವುದು. ಸಮಿತಿಯಲ್ಲಿ ಸೇರಿಸಿಲ್ಲ ಎಂಬ ಬೇಸರವಿಲ್ಲದೇ ಎಲ್ಲರೂ ಶ್ರೀಮಠದ ಭಕ್ತರೆಂದು ತಿಳಿದು ಯಶಸ್ವಿಗೆ ಕೈಜೋಡಿಸಬೇಕು’ ಎಂದು ಹೇಳಿದರು.</p>.<p>ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ‘ಡಿಸೆಂಬರ್ ತಿಂಗಳಿನಲ್ಲಿ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿ ಅವರ 1066ನೇ ಜಯಂತ್ಯುತ್ಸವ ಮಳವಳ್ಳಿಯಲ್ಲಿ ನಡೆಯುತ್ತಿರುವುದು ನಮ್ಮೆಲ್ಲರ ಹೆಮ್ಮೆ, ಮಹೋತ್ಸವವು ಭಕ್ತಿ, ಭಾವೈಕ್ಯದಿಂದ, ಜಾತ್ಯತೀತವಾಗಿ ನಡೆಯಲಿದೆ’ ಎಂದು ಹೇಳಿದರು.</p>.<p>ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ‘ಎರಡನೇ ಬಾರಿಗೆ ಜಿಲ್ಲೆಯಲ್ಲಿ ಜಯಂತ್ಯುತ್ಸವ ಆಚರಣೆ ಭಾಗ್ಯ ಸಿಕ್ಕಿದೆ. ಯಾವುದೇ ಗೊಂದಲವಾಗದಂತೆ ನಾನು ಮತ್ತು ಮರಿತಿಬ್ಬೇಗೌಡ ಕೊಂಡಿಯಾಗಿ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.</p>.<p>ಮಾಜಿ ಶಾಸಕ ಕೆ.ಅನ್ನದಾನಿ, ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಮಾಜಿ ಸಚಿವ ಬಿ.ಸೋಮಶೇಖರ್ ಮಾತನಾಡಿದರು.</p>.<p>ಶ್ರೀರಂಗಪಟ್ಟಣ ಬಿಜೆಪಿ ಮುಖಂಡ ಸಚ್ಚಿದಾನಂದ ಮಾತನಾಡಿ, ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು. ₹5 ಲಕ್ಷದ ಚೆಕ್ ಅನ್ನು ನೀಡಿದರು.</p>.<p>ಸಭೆಯ ಅಧ್ಯಕ್ಷತೆ ವಹಿಸಿದ್ದ ಕನಕಪುರದ ದೇಗುಲ ಮಠದ ಕಿರಿಯ ಚನ್ನಬಸವಸ್ವಾಮೀಜಿ ಮಾತನಾಡಿ, ‘ಮಳವಳ್ಳಿಯಲ್ಲಿ ನಡೆಯುವ ಶ್ರೀಗಳ ಜಯಂತಿ ನಾಡಿನಲ್ಲಿ ಮಾದರಿಯಂತಿರಬೇಕು ’ ಎಂದರು.</p>.<p>ಗೌರಿಶಂಕರಸ್ವಾಮೀಜಿ, ಬಿಜೆಪಿ ಮುಖಂಡ ಜಿ.ಮುನಿರಾಜು, ಮನ್ ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಸದಸ್ಯ ಟಿ.ನಂದಕುಮಾರ್, ಮುಖಂಡರಾದ ಯಮದೂರು ಸಿದ್ದರಾಜು, ಬಿ.ರವಿ ಕಂಸಾಗರ, ವಿ.ಪಿ.ನಾಗೇಶ್, ಜಯರಾಮು, ಎಂ.ಎನ್.ಕೃಷ್ಣ, ಚಿಕ್ಕಲಿಂಗಯ್ಯ, ಟಿ.ಸಿ.ಚೌಡಯ್ಯ, ಕೆ.ಜೆ.ದೇವರಾಜು, ಬಿ.ಎಸ್.ರಾಮಚಂದ್ರು, ಸಿದ್ದೇಗೌಡ, ಅಶೋಕ್ ಕುಮಾರ್ ಪಾಲ್ದೊಂಡಿಗರು.</p>.<div><blockquote>ಸುತ್ತೂರು ಮಠ ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸುವೆ. ಭಾವೈಕ್ಯದ ಸಂಕೇತದ ಜಯಂತ್ಯುತ್ಸವ ಜಾತ್ಯತೀತವಾಗಿ ನಡೆದು ರಾಜ್ಯಕ್ಕೆ ಮಾದರಿಯಾಗಲಿದೆ.</blockquote><span class="attribution">-ಪಿ.ಎಂ.ನರೇಂದ್ರಸ್ವಾಮಿ, ಶಾಸಕ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ‘ಮಳವಳ್ಳಿಯಲ್ಲಿ ಡಿ.18ರಿಂದ ಒಂದು ವಾರಗಳ ಕಾಲ ನಡೆಯುವ ಶಿವರಾತ್ರೀಶ್ವರ ಶಿವಯೋಗಿಯವರ ಜಯಂತ್ಯುತ್ಸವವು ಸರ್ವಧರ್ಮದವರು ಒಗ್ಗೂಡಿ ಆಚರಣೆ ಮಾಡುವ ಮೂಲಕ ಉತ್ತಮ ಸಂದೇಶ ನೀಡಬೇಕು’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕರೆ ನೀಡಿದರು.</p>.<p>ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಯವರ 1066ನೇ ಜಯಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದ ಟಿಎಪಿಸಿಎಂಎಸ್ ಮುಂಭಾಗ ನಿವೇಶನದಲ್ಲಿ ಮಂಗಳವಾರ ನಡೆದ ಸರ್ವಧರ್ಮದವರ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಜಯಂತ್ಯುತ್ಸವದಲ್ಲಿ ಉಳಿದ ಹಣದ ಜೊತೆಗೆ ಮಠದ ಸಂಪನ್ಮೂಲವನ್ನು ಸೇರಿಸಿ ತಾಲ್ಲೂಕಿನ ಐತಿಹಾಸಿಕ ಸ್ಥಳವೊಂದನ್ನು ಅಭಿವೃದ್ಧಿಪಡಿಸಲಾಗುವುದು. ಜವಾಬ್ದಾರಿಗಳ ಹಂಚಿಕೆಗೆ ತಂಡಗಳ ಒಳಗೊಂಡಂತೆ ಸಮಿತಿ ರಚಿಸಲಾಗುವುದು. ಸಮಿತಿಯಲ್ಲಿ ಸೇರಿಸಿಲ್ಲ ಎಂಬ ಬೇಸರವಿಲ್ಲದೇ ಎಲ್ಲರೂ ಶ್ರೀಮಠದ ಭಕ್ತರೆಂದು ತಿಳಿದು ಯಶಸ್ವಿಗೆ ಕೈಜೋಡಿಸಬೇಕು’ ಎಂದು ಹೇಳಿದರು.</p>.<p>ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ‘ಡಿಸೆಂಬರ್ ತಿಂಗಳಿನಲ್ಲಿ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿ ಅವರ 1066ನೇ ಜಯಂತ್ಯುತ್ಸವ ಮಳವಳ್ಳಿಯಲ್ಲಿ ನಡೆಯುತ್ತಿರುವುದು ನಮ್ಮೆಲ್ಲರ ಹೆಮ್ಮೆ, ಮಹೋತ್ಸವವು ಭಕ್ತಿ, ಭಾವೈಕ್ಯದಿಂದ, ಜಾತ್ಯತೀತವಾಗಿ ನಡೆಯಲಿದೆ’ ಎಂದು ಹೇಳಿದರು.</p>.<p>ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ‘ಎರಡನೇ ಬಾರಿಗೆ ಜಿಲ್ಲೆಯಲ್ಲಿ ಜಯಂತ್ಯುತ್ಸವ ಆಚರಣೆ ಭಾಗ್ಯ ಸಿಕ್ಕಿದೆ. ಯಾವುದೇ ಗೊಂದಲವಾಗದಂತೆ ನಾನು ಮತ್ತು ಮರಿತಿಬ್ಬೇಗೌಡ ಕೊಂಡಿಯಾಗಿ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.</p>.<p>ಮಾಜಿ ಶಾಸಕ ಕೆ.ಅನ್ನದಾನಿ, ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಮಾಜಿ ಸಚಿವ ಬಿ.ಸೋಮಶೇಖರ್ ಮಾತನಾಡಿದರು.</p>.<p>ಶ್ರೀರಂಗಪಟ್ಟಣ ಬಿಜೆಪಿ ಮುಖಂಡ ಸಚ್ಚಿದಾನಂದ ಮಾತನಾಡಿ, ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು. ₹5 ಲಕ್ಷದ ಚೆಕ್ ಅನ್ನು ನೀಡಿದರು.</p>.<p>ಸಭೆಯ ಅಧ್ಯಕ್ಷತೆ ವಹಿಸಿದ್ದ ಕನಕಪುರದ ದೇಗುಲ ಮಠದ ಕಿರಿಯ ಚನ್ನಬಸವಸ್ವಾಮೀಜಿ ಮಾತನಾಡಿ, ‘ಮಳವಳ್ಳಿಯಲ್ಲಿ ನಡೆಯುವ ಶ್ರೀಗಳ ಜಯಂತಿ ನಾಡಿನಲ್ಲಿ ಮಾದರಿಯಂತಿರಬೇಕು ’ ಎಂದರು.</p>.<p>ಗೌರಿಶಂಕರಸ್ವಾಮೀಜಿ, ಬಿಜೆಪಿ ಮುಖಂಡ ಜಿ.ಮುನಿರಾಜು, ಮನ್ ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಸದಸ್ಯ ಟಿ.ನಂದಕುಮಾರ್, ಮುಖಂಡರಾದ ಯಮದೂರು ಸಿದ್ದರಾಜು, ಬಿ.ರವಿ ಕಂಸಾಗರ, ವಿ.ಪಿ.ನಾಗೇಶ್, ಜಯರಾಮು, ಎಂ.ಎನ್.ಕೃಷ್ಣ, ಚಿಕ್ಕಲಿಂಗಯ್ಯ, ಟಿ.ಸಿ.ಚೌಡಯ್ಯ, ಕೆ.ಜೆ.ದೇವರಾಜು, ಬಿ.ಎಸ್.ರಾಮಚಂದ್ರು, ಸಿದ್ದೇಗೌಡ, ಅಶೋಕ್ ಕುಮಾರ್ ಪಾಲ್ದೊಂಡಿಗರು.</p>.<div><blockquote>ಸುತ್ತೂರು ಮಠ ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸುವೆ. ಭಾವೈಕ್ಯದ ಸಂಕೇತದ ಜಯಂತ್ಯುತ್ಸವ ಜಾತ್ಯತೀತವಾಗಿ ನಡೆದು ರಾಜ್ಯಕ್ಕೆ ಮಾದರಿಯಾಗಲಿದೆ.</blockquote><span class="attribution">-ಪಿ.ಎಂ.ನರೇಂದ್ರಸ್ವಾಮಿ, ಶಾಸಕ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>