ಇಬ್ಬರು ವೈದ್ಯರು, ನಾಲ್ವರು ನರ್ಸ್ಗಳು, 10 ಮಂದಿ ಆಶಾಕಾರ್ತೆಯರ ತಂಡ ಗ್ರಾಮದಲ್ಲೇ ಇದೆ. ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸುತ್ತಿದ್ದಾರೆ. ಪೊಲೀಸರ ತಂಡ ಕೂಡ ಗ್ರಾಮದಲ್ಲಿದ್ದು ಜನರು ಭಯಪಡದಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.