ಮೈಸೂರು ದೊರೆ ಮುಮ್ಮುಡಿ ಶ್ರೀಕೃಷ್ಣರಾಜ ಒಡೆಯರ್ ಭಕ್ತಿಪೂರ್ವಕವಾಗಿ ವಜ್ರಖಚಿತ ಕೃಷ್ಣರಾಜಮುಡಿ ಹಾಗೂ ಮೈಸೂರು ಲಾಂಛನ ಗಂಡುಬೇರುಂಡ ಪದಕವನ್ನು ಸಮರ್ಪಿಸಿ ಆಷಾಡ ಮಾಸದಲ್ಲಿ ತಮ್ಮದೇ ಹೆಸರಲ್ಲಿ ಬ್ರಹ್ಮೋತ್ಸವ ಆರಂಭಿಸಿದ್ದರು. ಅಂದಿನಿಂದ ಅನೂಚಾನವಾಗಿ ನಡೆದ ಬರುತ್ತಿರುವ ಕೃಷ್ಣರಾಜಮುಡಿ ಬ್ರಹ್ಮೋತ್ಸವ ವೈರಮುಡಿ ಜಾತ್ರಾಮಹೋತ್ಸವ ಮುಂದೂಡಿಕೆಯಾಗಿದ್ದರೂ ಇಂದು ಕೊರೊನಾ ತೀವ್ರತೆಯ ನಡುವೆಯೂ ನಡೆದದ್ದು ಭಕ್ತರಾದ ಮುಮ್ಮುಡಿ ಮಹಾರಾಜರ ಮನಸ್ಸಿನ ಪರಿಶುದ್ಧ ಭಕ್ತಿಗೆ ಸಾಕ್ಷಿಯಾಗುತ್ತದೆ ಎಂದು ದೇವಾಲಯದ ಸ್ಥಾನೀಕರು ಭಕ್ತಿಭಾವ ಪ್ರದರ್ಶಿಸಿದರು.