<p><strong>ಮೇಲುಕೋಟೆ:</strong> ವಿಶ್ವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆ ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಹಗಲು ಹೊತ್ತಿನಲ್ಲೇ ಚಿರತೆಗಳು ಕಾಣಿಸಿಕೊಂಡಿದ್ದು ಗ್ರಾಮಸ್ಥರು, ಪ್ರವಾಸಿಗರಲ್ಲಿ ಆತಂಕ ಉಂಟು ಮಾಡಿದೆ.</p>.<p>ಸುಮಾರು ದಿನಗಳಿಂದ ಬೆಟ್ಟ, ಪಂಚಕಲ್ಯಾಣಿ, ಧನುಷ್ ಕೋಟೆ, ರಾಯಗೋಪುರ ಸೇರಿದಂತೆ ಪ್ರವಾಸಿತಾಣಗಳ ಬಳಿ ಚಿರತೆಗಳು ಪ್ರತ್ಯಕ್ಷವಾಗುತ್ತಿವೆ. ಇದರಿಂದ ಪ್ರವಾಸಿಗರಲ್ಲಿ ಆತಂಕ ಮನೆ ಮಾಡಿದೆ.</p>.<p>ಜತೆಗೆ ಹೊಸಹಳ್ಳಿ, ಉಳಿಗೆರೆ, ಕಾಡೇನಹಳ್ಳಿ, ನಾಣಾಪುರ, ಬಳ್ಳಿಘಟ್ಟ, ಮದೇನಹಳ್ಳಿ ಗ್ರಾಮಗಳಲ್ಲೂ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನ ಓಡಾಡಲು ಹಾಗೂ ಜಮೀನು, ತೋಟಗಳಲ್ಲಿ ಹೋಗಲು ಭಯಪಡುವಂತಾಗಿದೆ.</p>.<p>ಮೇಲುಕೋಟೆ ದಳವಾಯಿಕೆರೆ ಬಳಿ ಶನಿವಾರ ರೈತರ ಜಮೀನಿನ ಬಳಿ ಚಿರತೆ ದಾಳಿ ಮಾಡಿ ಆಡನ್ನು ಕೊಂದು ಹಾಕಿದೆ. ಗ್ರಾಮದ ಒಳಗೂ ಚಿರತೆ ಬಂದಿದ್ದು ಆತಂಕ ಹೆಚ್ಚಿಸಿದೆ.</p>.<p>‘ಈ ಹಿಂದೆ ‘ಪ್ರಜಾವಾಣಿ’ ‘ಚಿರತೆ ಪ್ರತ್ಯಕ್ಷ’ದ ಬಗ್ಗೆ ವರದಿ ಪ್ರಕಟಿಸಿತ್ತು. ಸ್ಥಳೀಯರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಮನವಿ ಮಾಡಿದರು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನಾದರೂ ಅಧಿಕಾರಿ ಹೆಚ್ಚೆತ್ತುಕೊಳ್ಳಬೇಕು ಎನ್ನುವುದು’ ಸ್ಥಳೀಯರ ಆಗ್ರಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೇಲುಕೋಟೆ:</strong> ವಿಶ್ವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆ ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಹಗಲು ಹೊತ್ತಿನಲ್ಲೇ ಚಿರತೆಗಳು ಕಾಣಿಸಿಕೊಂಡಿದ್ದು ಗ್ರಾಮಸ್ಥರು, ಪ್ರವಾಸಿಗರಲ್ಲಿ ಆತಂಕ ಉಂಟು ಮಾಡಿದೆ.</p>.<p>ಸುಮಾರು ದಿನಗಳಿಂದ ಬೆಟ್ಟ, ಪಂಚಕಲ್ಯಾಣಿ, ಧನುಷ್ ಕೋಟೆ, ರಾಯಗೋಪುರ ಸೇರಿದಂತೆ ಪ್ರವಾಸಿತಾಣಗಳ ಬಳಿ ಚಿರತೆಗಳು ಪ್ರತ್ಯಕ್ಷವಾಗುತ್ತಿವೆ. ಇದರಿಂದ ಪ್ರವಾಸಿಗರಲ್ಲಿ ಆತಂಕ ಮನೆ ಮಾಡಿದೆ.</p>.<p>ಜತೆಗೆ ಹೊಸಹಳ್ಳಿ, ಉಳಿಗೆರೆ, ಕಾಡೇನಹಳ್ಳಿ, ನಾಣಾಪುರ, ಬಳ್ಳಿಘಟ್ಟ, ಮದೇನಹಳ್ಳಿ ಗ್ರಾಮಗಳಲ್ಲೂ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನ ಓಡಾಡಲು ಹಾಗೂ ಜಮೀನು, ತೋಟಗಳಲ್ಲಿ ಹೋಗಲು ಭಯಪಡುವಂತಾಗಿದೆ.</p>.<p>ಮೇಲುಕೋಟೆ ದಳವಾಯಿಕೆರೆ ಬಳಿ ಶನಿವಾರ ರೈತರ ಜಮೀನಿನ ಬಳಿ ಚಿರತೆ ದಾಳಿ ಮಾಡಿ ಆಡನ್ನು ಕೊಂದು ಹಾಕಿದೆ. ಗ್ರಾಮದ ಒಳಗೂ ಚಿರತೆ ಬಂದಿದ್ದು ಆತಂಕ ಹೆಚ್ಚಿಸಿದೆ.</p>.<p>‘ಈ ಹಿಂದೆ ‘ಪ್ರಜಾವಾಣಿ’ ‘ಚಿರತೆ ಪ್ರತ್ಯಕ್ಷ’ದ ಬಗ್ಗೆ ವರದಿ ಪ್ರಕಟಿಸಿತ್ತು. ಸ್ಥಳೀಯರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಮನವಿ ಮಾಡಿದರು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನಾದರೂ ಅಧಿಕಾರಿ ಹೆಚ್ಚೆತ್ತುಕೊಳ್ಳಬೇಕು ಎನ್ನುವುದು’ ಸ್ಥಳೀಯರ ಆಗ್ರಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>