<p>ಮೇಲುಕೋಟೆ: ಲಾಕ್ಡೌನ್ ಜಾರಿಯಾಗಿ 85 ದಿನಗಳ ನಂತರ ಇಲ್ಲಿಯ ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಸೋಮವಾರ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸುರಕ್ಷತಾ ಕ್ರಮಕ್ಕೆ ಆದ್ಯತೆ ನೀಡಲಾಗಿದೆ.</p>.<p>ದೇವರ ದರ್ಶನಕ್ಕೆ ಮಾತ್ರ ಮುಜರಾಯಿ ಇಲಾಖೆ ಅವಕಾಶ ಕಲ್ಪಿಸಿದೆ. ಬಂಡೀಕಾರರು ಮತ್ತು ಇತರ ನೌಕರ ವರ್ಗ ಚೆಲುವನಾರಾಯಣಸ್ವಾಮಿ ಮತ್ತು ಯೋಗನರಸಿಂಹಸ್ವಾಮಿ ದೇವಾಲಯದ ಒಳಾಂಗಣ ಮತ್ತು ಪ್ರವೇಶದ್ವಾರಗಳನ್ನು ತೊಳೆದು ಸ್ಯಾನಿಟೈಸ್ ಮಾಡಿದರು. ಭಕ್ತರು ಅಂತರ ಕಾಯ್ದುಕೊಳ್ಳಲು ದೇವಾಲಯದ ಒಳಾಂಗಣ ಮತ್ತು ಕೈಸಾಲೆಯ ಸುತ್ತ 6 ಅಡಿ ಅಂತರಕ್ಕೊಂದರಂತೆ ವೃತ್ತಾಕಾರದ ಗುರುತು ಮಾಡಿದರು.</p>.<p>ಸೋಮವಾರ ಬೆಳಿಗ್ಗೆಯಿಂದ ದೇವಾಲಯ ಪ್ರವೇಶಿಸುವ ಪ್ರತಿಯೊಬ್ಬರಿಗೂ ಸ್ಯಾನಿಟೈಸರ್ ನೀಡಿ, ಸ್ಕ್ರೀನಿಂಗ್ ಒಳಪಡಿಸಲಾಗುತ್ತದೆ. ಪ್ರವೇಶದ್ವಾರದ ಬಳಿ ದೇಗುಲದ ಸಿಬ್ಬಂದಿ ಹಾಗೂ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಭಕ್ತರ ಮಾಹಿತಿಗಾಗಿ ಕೋವಿಡ್ 19 ಸಂಬಂಧ ಬ್ಯಾನರ್ ಅಳವಡಿಸಲಾಗುತ್ತಿದೆ.</p>.<p>ಇಲಾಖೆಯ ನಿಯಮದಂತೆ 65 ವರ್ಷ ಮೇಲ್ಪಟ್ಟ, 10 ವರ್ಷದೊಳಗಿನ ಮಕ್ಕಳಿಗೆ ಹಾಗೂ ಮಾಸ್ಕ್ ಧರಿಸದವರಿಗೆ ಕಡ್ಡಾಯವಾಗಿ ಪ್ರವೇಶ ನಿಷೇಧಿಸಲಾಗಿದೆ.</p>.<p>ದೇಗುಲದಲ್ಲಿ ಭಕ್ತರಿಗೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.30 (ಪೂಜಾ ಸಮಯ ಹೊರತು ಪಡಿಸಿ ) ಮತ್ತು ಸಂಜೆ 4 ರಿಂದ 6 ರವರೆಗೆ ದರ್ಶನಕ್ಕೆ ಅವಕಾಶವಿದೆ. ನಂತರ ದೇಗುಲಕ್ಕೆ ಪ್ರವೇಶ ಇರುವುದಿಲ್ಲ.</p>.<p>ಬೆಟ್ಟದ ನರಸಿಂಹನ ದೇಗುಲದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30 ದರ್ಶನ ಇರುತ್ತದೆ. ಆದರೆ ಸಂಜೆಯ ಪೂಜೆಯ ವೇಳೆ ಎರಡೂ ದೇಗುಲದಲ್ಲಿ ಭಕ್ತರಿಗೆ ದರ್ಶನ ಇರುವುದಿಲ್ಲ, ರಜಾದಿನಗಳಂದು 1.30 ರವರಗೆ ದರ್ಶನಕ್ಕೆ ಅವಕಾಶವಿದೆ. ಮಂಗಳಾರತಿ, ತೀರ್ಥಪ್ರಸಾದ ವಿತರಣೆ ಸೇರಿದಂತೆ ಯಾವುದೇ ಪೂಜೆಗೆ ಅವಕಾಶವಿಲ್ಲ.</p>.<p>ಭಕ್ತರು ತೆಂಗಿನಕಾಯಿ ಹೂ, ಹಣ್ಣು ಸೇರಿದಂತೆ ಭಕ್ತರು ಯಾವುದೇ ಪೂಜಾ ಸಾಮಗ್ರಿ ತರಬಾರದು. ಸುಗಮ ದರ್ಶನಕ್ಕೆ ಸಹಕಾರ ನೀಡಬೇಕು ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನಂಜೇಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೇಲುಕೋಟೆ: ಲಾಕ್ಡೌನ್ ಜಾರಿಯಾಗಿ 85 ದಿನಗಳ ನಂತರ ಇಲ್ಲಿಯ ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಸೋಮವಾರ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸುರಕ್ಷತಾ ಕ್ರಮಕ್ಕೆ ಆದ್ಯತೆ ನೀಡಲಾಗಿದೆ.</p>.<p>ದೇವರ ದರ್ಶನಕ್ಕೆ ಮಾತ್ರ ಮುಜರಾಯಿ ಇಲಾಖೆ ಅವಕಾಶ ಕಲ್ಪಿಸಿದೆ. ಬಂಡೀಕಾರರು ಮತ್ತು ಇತರ ನೌಕರ ವರ್ಗ ಚೆಲುವನಾರಾಯಣಸ್ವಾಮಿ ಮತ್ತು ಯೋಗನರಸಿಂಹಸ್ವಾಮಿ ದೇವಾಲಯದ ಒಳಾಂಗಣ ಮತ್ತು ಪ್ರವೇಶದ್ವಾರಗಳನ್ನು ತೊಳೆದು ಸ್ಯಾನಿಟೈಸ್ ಮಾಡಿದರು. ಭಕ್ತರು ಅಂತರ ಕಾಯ್ದುಕೊಳ್ಳಲು ದೇವಾಲಯದ ಒಳಾಂಗಣ ಮತ್ತು ಕೈಸಾಲೆಯ ಸುತ್ತ 6 ಅಡಿ ಅಂತರಕ್ಕೊಂದರಂತೆ ವೃತ್ತಾಕಾರದ ಗುರುತು ಮಾಡಿದರು.</p>.<p>ಸೋಮವಾರ ಬೆಳಿಗ್ಗೆಯಿಂದ ದೇವಾಲಯ ಪ್ರವೇಶಿಸುವ ಪ್ರತಿಯೊಬ್ಬರಿಗೂ ಸ್ಯಾನಿಟೈಸರ್ ನೀಡಿ, ಸ್ಕ್ರೀನಿಂಗ್ ಒಳಪಡಿಸಲಾಗುತ್ತದೆ. ಪ್ರವೇಶದ್ವಾರದ ಬಳಿ ದೇಗುಲದ ಸಿಬ್ಬಂದಿ ಹಾಗೂ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಭಕ್ತರ ಮಾಹಿತಿಗಾಗಿ ಕೋವಿಡ್ 19 ಸಂಬಂಧ ಬ್ಯಾನರ್ ಅಳವಡಿಸಲಾಗುತ್ತಿದೆ.</p>.<p>ಇಲಾಖೆಯ ನಿಯಮದಂತೆ 65 ವರ್ಷ ಮೇಲ್ಪಟ್ಟ, 10 ವರ್ಷದೊಳಗಿನ ಮಕ್ಕಳಿಗೆ ಹಾಗೂ ಮಾಸ್ಕ್ ಧರಿಸದವರಿಗೆ ಕಡ್ಡಾಯವಾಗಿ ಪ್ರವೇಶ ನಿಷೇಧಿಸಲಾಗಿದೆ.</p>.<p>ದೇಗುಲದಲ್ಲಿ ಭಕ್ತರಿಗೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.30 (ಪೂಜಾ ಸಮಯ ಹೊರತು ಪಡಿಸಿ ) ಮತ್ತು ಸಂಜೆ 4 ರಿಂದ 6 ರವರೆಗೆ ದರ್ಶನಕ್ಕೆ ಅವಕಾಶವಿದೆ. ನಂತರ ದೇಗುಲಕ್ಕೆ ಪ್ರವೇಶ ಇರುವುದಿಲ್ಲ.</p>.<p>ಬೆಟ್ಟದ ನರಸಿಂಹನ ದೇಗುಲದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30 ದರ್ಶನ ಇರುತ್ತದೆ. ಆದರೆ ಸಂಜೆಯ ಪೂಜೆಯ ವೇಳೆ ಎರಡೂ ದೇಗುಲದಲ್ಲಿ ಭಕ್ತರಿಗೆ ದರ್ಶನ ಇರುವುದಿಲ್ಲ, ರಜಾದಿನಗಳಂದು 1.30 ರವರಗೆ ದರ್ಶನಕ್ಕೆ ಅವಕಾಶವಿದೆ. ಮಂಗಳಾರತಿ, ತೀರ್ಥಪ್ರಸಾದ ವಿತರಣೆ ಸೇರಿದಂತೆ ಯಾವುದೇ ಪೂಜೆಗೆ ಅವಕಾಶವಿಲ್ಲ.</p>.<p>ಭಕ್ತರು ತೆಂಗಿನಕಾಯಿ ಹೂ, ಹಣ್ಣು ಸೇರಿದಂತೆ ಭಕ್ತರು ಯಾವುದೇ ಪೂಜಾ ಸಾಮಗ್ರಿ ತರಬಾರದು. ಸುಗಮ ದರ್ಶನಕ್ಕೆ ಸಹಕಾರ ನೀಡಬೇಕು ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನಂಜೇಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>