<p><strong>ಮಂಡ್ಯ</strong>: ಇತಿಹಾಸ ಪ್ರಸಿದ್ಧ ಮೇಲುಕೋಟೆ ವೈರಮುಡಿ ಕಿರೀಟಧಾರಣೆ ಮಾ.28ರಂದು ನಡೆಯಲಿದ್ದು, ವೈರಮುಡಿ ಬ್ರಹ್ಮೋತ್ಸವ ಸಂಬಂಧ ವಿವಿಧ ಇಲಾಖೆಯೊಡನೆ ಸಭೆ ನಡೆಸಿ ಅಗತ್ಯ ಸಿದ್ಧತೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಅವರು, ಮೇಲುಕೋಟೆ ಚಲುವ ನಾರಾಯಣಸ್ವಾಮಿ ದೇವಾಲಯದಲ್ಲಿ 2026ನೇ ಸಾಲಿನ ವೈರಮುಡಿ ಬ್ರಹ್ಮೋತ್ಸವ ಮಾ.23ರಿಂದ ಪ್ರಾರಂಭವಾಗಿ ಏಪ್ರಿಲ್ 4ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದರು.</p>.<p>ಇದರ ಭಾಗವಾಗಿ ಮಾರ್ಚ್ 28ರಂದು ಶ್ರೀ ವೈರಮುಡಿ ಕಿರೀಟಧಾರಣೆ ಉತ್ಸವ ನೆಡೆಯಲಿದೆ. ಶ್ರೀಕ್ಷೇತ್ರದಲ್ಲಿ ಕೈಗೊಳ್ಳಬೇಕಾಗಿರುವ ಪೂರ್ವಸಿದ್ಧತೆ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ವಿವಿಧ ಇಲಾಖೆಗಳೊಂದಿಗೆ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ವೈರಮುಡಿ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಭಕ್ತರು ಮತ್ತು ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದ್ದು, ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಭದ್ರತೆಗಾಗಿ ಸುಮಾರು 1,210 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ವತಿಯಿಂದ ಮೇಲುಕೋಟೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ಪ್ರಮುಖ ಪಟ್ಟಣ, ನಗರ ಭಾಗಗಳಿಂದ 140 ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮುಂಗಡ ಸೀಟು ಕಾಯ್ದಿರಿಸುವ ವ್ಯವಸ್ಥೆ ಹಾಗೂ ಮಂಡ್ಯ ನಗರದಿಂದ ನಿರಂತರ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.</p>.<p>ಎರಡು ದಿನ ಪ್ರಸಾದ ವ್ಯವಸ್ಥೆ: ಮೇಲುಕೋಟೆಗೆ ಬರುವ ಭಕ್ತರಿಗೆ ದೇವಾಲಯದ ದಾಸೋಹ ಭವನದಲ್ಲಿ ವೈರಮುಡಿ ಬ್ರಹ್ಮೋತ್ಸವ ನಡೆಯುವ ದಿನ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಮಾ.28ರಂದು ಬೆಳಿಗೆ 8 ಗಂಟೆಯಿಂದ ಮಾ.29 ರಂದು ಬೆಳಿಗ್ಗೆ 8 ಗಂಟೆಯವರೆಗೆ ನಿರಂತರವಾಗಿ ಭಕ್ತರಿಗೆ ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರಕ್ಕೆ ಬರುವ ಪುರುಷ ಮತ್ತು ಮಹಿಳಾ ಭಕ್ತರಿಗೆ ಪ್ರತ್ಯೇಕವಾಗಿ ತಾತ್ಕಾಲಿಕ ಶೌಚಾಲಯ ಹಾಗೂ ಪ್ರಮುಖ ಸ್ಥಳಗಳಲ್ಲಿ ಟ್ಯಾಂಕರ್ ಮೂಲಕ ಹಾಗೂ ಹೆಚ್ಚುವರಿ ತಾತ್ಕಾಲಿಕ ನಲ್ಲಿ ಅಳವಡಿಸಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ತುರ್ತು ಆರೋಗ್ಯ ಸೇವೆಗೆ ಆರು ಆಂಬುಲೆನ್ಸ್ ಸಹ ನಿಯೋಜಿಸಲಾಗಿದೆ ಎಂದು ವಿವರಿಸಿದರು.</p>.<p>ವೈರಮುಡಿ ಪೆಟ್ಟಿಗೆ ಸಂಚಾರ: ಮಾ.28 ರಂದು ಬೆಳಿಗ್ಗೆ 7 ಗಂಟೆಗೆ ವೈರಮುಡಿ ಪೆಟ್ಟಿಗೆಯನ್ನು ಜಿಲ್ಲಾ ಖಜಾನೆಯಿಂದ ತಂದು ಲಕ್ಷ್ಮೀಜನಾರ್ದನಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಹೆದ್ದಾರಿ ಮೂಲಕ ಇಂಡುವಾಳು, ಕಾಳೇನಹಳ್ಳಿ, ರಾಗಿಮುದ್ದನಹಳ್ಳಿ, ಕೆ.ಶೆಟ್ಟಿಹಳ್ಳಿ, ಬಾಬುರಾಯನಕೊಪ್ಪಲು ಬನ್ನಿಮಂಟಪ, ಕಿರಂಗೂರು, ದರಸಗುಪ್ಪೆ, ಪಾಂಡವಪುರ ಹರಳಹಳ್ಳಿ, ಬನಘಟ್ಟ ಕೆ.ಹೊಸೂರು ಗೇಟ್, ಟಿ.ಎಸ್.ಛತ್ರ. ಬೆಳ್ಳಾಳೆ, ಅಮ್ಮತಿ, ನ್ಯಾಮನಹಳ್ಳಿ, ಜಕ್ಕನಹಳ್ಳಿ, ಕದಲಗೆರೆಯಲ್ಲಿ ಭಕ್ತರು ಪೂಜೆ ಸಲ್ಲಿಸುವ ಮಾರ್ಗದ ಮೂಲಕ ಪೊಲೀಸ್ ಬಂದೋಬಸ್ತಿನಲ್ಲಿ ಮೇಲುಕೋಟೆಗೆ ತೆಗೆದುಕೊಂಡು ಹೋಗಲಾಗುವುದು ಎಂದರು.</p>.<p>ವೈರಮುಡಿ ತೆಪ್ಪೋತ್ಸವ: ಏ.1ರಂದು ವೈರಮುಡಿ ಬ್ರಹ್ಮೋತ್ಸವ ಅಂಗವಾಗಿ ತೆಪ್ಪೋತ್ಸವ ನಡೆಯಲಿದೆ. ಮೇಲುಕೋಟೆಯ ದೊಡ್ಡ ಕಲ್ಯಾಣಿಗೆ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಕಲ್ಯಾಣಿಯ ವಿವಿಧ ವೇದಿಕೆಗಳಲ್ಲಿ ಮ್ಯಾಂಡಲಿನ್ ವಾದನ, ಗಾಯನ, ಭರತನಾಟ್ಯ, ಚಂಡೆ, ಮದ್ದಳೆ, ನಾದಸ್ವರ ವಾದನ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಕಸ್ಮಿಕ ಅವಘಡಗಳನ್ನು ತಡೆಗಟ್ಟಲು ಕಲ್ಯಾಣಿಯ ಬಳಿ 5 ಈಜುಗಾರರನ್ನು ಜೀವ ರಕ್ಷಕ ಸಾಮಾಗ್ರಿಗಳೊಂದಿಗೆ ನಿಯೋಜಿಸಲಾಗಿದೆ. ವಿಶೇಷ ವಿದ್ಯುತ್ ದೀಪಾಲಂಕಾರ ಮತ್ತು ಹೂವಿನ ಅಲಂಕಾರ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-40-967925521</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಇತಿಹಾಸ ಪ್ರಸಿದ್ಧ ಮೇಲುಕೋಟೆ ವೈರಮುಡಿ ಕಿರೀಟಧಾರಣೆ ಮಾ.28ರಂದು ನಡೆಯಲಿದ್ದು, ವೈರಮುಡಿ ಬ್ರಹ್ಮೋತ್ಸವ ಸಂಬಂಧ ವಿವಿಧ ಇಲಾಖೆಯೊಡನೆ ಸಭೆ ನಡೆಸಿ ಅಗತ್ಯ ಸಿದ್ಧತೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಅವರು, ಮೇಲುಕೋಟೆ ಚಲುವ ನಾರಾಯಣಸ್ವಾಮಿ ದೇವಾಲಯದಲ್ಲಿ 2026ನೇ ಸಾಲಿನ ವೈರಮುಡಿ ಬ್ರಹ್ಮೋತ್ಸವ ಮಾ.23ರಿಂದ ಪ್ರಾರಂಭವಾಗಿ ಏಪ್ರಿಲ್ 4ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದರು.</p>.<p>ಇದರ ಭಾಗವಾಗಿ ಮಾರ್ಚ್ 28ರಂದು ಶ್ರೀ ವೈರಮುಡಿ ಕಿರೀಟಧಾರಣೆ ಉತ್ಸವ ನೆಡೆಯಲಿದೆ. ಶ್ರೀಕ್ಷೇತ್ರದಲ್ಲಿ ಕೈಗೊಳ್ಳಬೇಕಾಗಿರುವ ಪೂರ್ವಸಿದ್ಧತೆ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ವಿವಿಧ ಇಲಾಖೆಗಳೊಂದಿಗೆ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ವೈರಮುಡಿ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಭಕ್ತರು ಮತ್ತು ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದ್ದು, ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಭದ್ರತೆಗಾಗಿ ಸುಮಾರು 1,210 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ವತಿಯಿಂದ ಮೇಲುಕೋಟೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ಪ್ರಮುಖ ಪಟ್ಟಣ, ನಗರ ಭಾಗಗಳಿಂದ 140 ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮುಂಗಡ ಸೀಟು ಕಾಯ್ದಿರಿಸುವ ವ್ಯವಸ್ಥೆ ಹಾಗೂ ಮಂಡ್ಯ ನಗರದಿಂದ ನಿರಂತರ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.</p>.<p>ಎರಡು ದಿನ ಪ್ರಸಾದ ವ್ಯವಸ್ಥೆ: ಮೇಲುಕೋಟೆಗೆ ಬರುವ ಭಕ್ತರಿಗೆ ದೇವಾಲಯದ ದಾಸೋಹ ಭವನದಲ್ಲಿ ವೈರಮುಡಿ ಬ್ರಹ್ಮೋತ್ಸವ ನಡೆಯುವ ದಿನ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಮಾ.28ರಂದು ಬೆಳಿಗೆ 8 ಗಂಟೆಯಿಂದ ಮಾ.29 ರಂದು ಬೆಳಿಗ್ಗೆ 8 ಗಂಟೆಯವರೆಗೆ ನಿರಂತರವಾಗಿ ಭಕ್ತರಿಗೆ ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರಕ್ಕೆ ಬರುವ ಪುರುಷ ಮತ್ತು ಮಹಿಳಾ ಭಕ್ತರಿಗೆ ಪ್ರತ್ಯೇಕವಾಗಿ ತಾತ್ಕಾಲಿಕ ಶೌಚಾಲಯ ಹಾಗೂ ಪ್ರಮುಖ ಸ್ಥಳಗಳಲ್ಲಿ ಟ್ಯಾಂಕರ್ ಮೂಲಕ ಹಾಗೂ ಹೆಚ್ಚುವರಿ ತಾತ್ಕಾಲಿಕ ನಲ್ಲಿ ಅಳವಡಿಸಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ತುರ್ತು ಆರೋಗ್ಯ ಸೇವೆಗೆ ಆರು ಆಂಬುಲೆನ್ಸ್ ಸಹ ನಿಯೋಜಿಸಲಾಗಿದೆ ಎಂದು ವಿವರಿಸಿದರು.</p>.<p>ವೈರಮುಡಿ ಪೆಟ್ಟಿಗೆ ಸಂಚಾರ: ಮಾ.28 ರಂದು ಬೆಳಿಗ್ಗೆ 7 ಗಂಟೆಗೆ ವೈರಮುಡಿ ಪೆಟ್ಟಿಗೆಯನ್ನು ಜಿಲ್ಲಾ ಖಜಾನೆಯಿಂದ ತಂದು ಲಕ್ಷ್ಮೀಜನಾರ್ದನಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಹೆದ್ದಾರಿ ಮೂಲಕ ಇಂಡುವಾಳು, ಕಾಳೇನಹಳ್ಳಿ, ರಾಗಿಮುದ್ದನಹಳ್ಳಿ, ಕೆ.ಶೆಟ್ಟಿಹಳ್ಳಿ, ಬಾಬುರಾಯನಕೊಪ್ಪಲು ಬನ್ನಿಮಂಟಪ, ಕಿರಂಗೂರು, ದರಸಗುಪ್ಪೆ, ಪಾಂಡವಪುರ ಹರಳಹಳ್ಳಿ, ಬನಘಟ್ಟ ಕೆ.ಹೊಸೂರು ಗೇಟ್, ಟಿ.ಎಸ್.ಛತ್ರ. ಬೆಳ್ಳಾಳೆ, ಅಮ್ಮತಿ, ನ್ಯಾಮನಹಳ್ಳಿ, ಜಕ್ಕನಹಳ್ಳಿ, ಕದಲಗೆರೆಯಲ್ಲಿ ಭಕ್ತರು ಪೂಜೆ ಸಲ್ಲಿಸುವ ಮಾರ್ಗದ ಮೂಲಕ ಪೊಲೀಸ್ ಬಂದೋಬಸ್ತಿನಲ್ಲಿ ಮೇಲುಕೋಟೆಗೆ ತೆಗೆದುಕೊಂಡು ಹೋಗಲಾಗುವುದು ಎಂದರು.</p>.<p>ವೈರಮುಡಿ ತೆಪ್ಪೋತ್ಸವ: ಏ.1ರಂದು ವೈರಮುಡಿ ಬ್ರಹ್ಮೋತ್ಸವ ಅಂಗವಾಗಿ ತೆಪ್ಪೋತ್ಸವ ನಡೆಯಲಿದೆ. ಮೇಲುಕೋಟೆಯ ದೊಡ್ಡ ಕಲ್ಯಾಣಿಗೆ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಕಲ್ಯಾಣಿಯ ವಿವಿಧ ವೇದಿಕೆಗಳಲ್ಲಿ ಮ್ಯಾಂಡಲಿನ್ ವಾದನ, ಗಾಯನ, ಭರತನಾಟ್ಯ, ಚಂಡೆ, ಮದ್ದಳೆ, ನಾದಸ್ವರ ವಾದನ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಕಸ್ಮಿಕ ಅವಘಡಗಳನ್ನು ತಡೆಗಟ್ಟಲು ಕಲ್ಯಾಣಿಯ ಬಳಿ 5 ಈಜುಗಾರರನ್ನು ಜೀವ ರಕ್ಷಕ ಸಾಮಾಗ್ರಿಗಳೊಂದಿಗೆ ನಿಯೋಜಿಸಲಾಗಿದೆ. ವಿಶೇಷ ವಿದ್ಯುತ್ ದೀಪಾಲಂಕಾರ ಮತ್ತು ಹೂವಿನ ಅಲಂಕಾರ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-40-967925521</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>