<p><strong>ಮಂಡ್ಯ</strong>: 2026ನೇ ಸಾಲಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್ 4 ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟ ಧಾರಣೆಯು ಮಾರ್ಚ್ 28ರಂದು ಜರುಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.</p><p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಮೇಲುಕೋಟೆಯಲ್ಲಿ ನಡೆಯಲಿರುವ ವಿಶ್ವಪ್ರಸಿದ್ಧ ವೈರಮುಡಿ ಬ್ರಹ್ಮೋತ್ಸವದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.</p><p>ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮತ್ತು ಬಿಗಿ ಭದ್ರತೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.</p><p>ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವುದರ ಜತೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.</p>. <p>ಪೊಲೀಸ್ ಇಲಾಖೆಯವರು ವೈರಮುಡಿ ಬ್ರಹ್ಮೋತ್ಸವದಲ್ಲಿ ಕಿರೀಟಧಾರಣಾ ಮೆರವಣಿಗೆಯ ಸಂದರ್ಭದಲ್ಲಿ ಶಾಂತಿಯುತವಾಗಿ ಹಾಗೂ ಸಮಾಧಾನವಾಗಿ ಜನರು ದೇವರು ನೋಡವಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಈ ಸಂಬಂಧ ದೇವಸ್ಥಾನದ ಅರ್ಚಕರೊಂದಿಗೆ ಸಭೆ ನಡೆಸಿ ಶಾಂತಿಯುತವಾಗಿ ನಡೆಯಲು ಅಗತ್ಯ ಸಿದ್ಥತೆ ಮಾಡಿಕೊಳ್ಳಿ ಎಂದು ಸಚಿವರು ತಿಳಿಸಿದರು.</p><p>ಮೇಲುಕೋಟೆ ಶಾಸಕರಾದ ದರ್ಶನ್ ಪುಟ್ಟಣಯ್ಯ ಮಾತನಾಡಿ, ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ. ವೈರಮುಡಿ ಉತ್ಸವದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು ಎಂದು ತಿಳಿಸಿದರು. </p><p>ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತರಿಗೆ ಅಗತ್ಯವಿರುವ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.</p><p>ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಆರೋಗ್ಯ ಸೇವೆಗಳು, ಸಾರಿಗೆ ವ್ಯವಸ್ಥೆ (ಕೆ.ಎಸ್.ಆರ್.ಟಿ.ಸಿ ಬಸ್ಗಳು) ಮತ್ತು ಬಿಗಿ ಪೊಲೀಸ್ ಬಂದೋಬಸ್ತ್ಗೆ ಸಭೆಯಲ್ಲಿ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.</p><p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಕಾರಿ ಶ್ರೀನಿವಾಸ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: 2026ನೇ ಸಾಲಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್ 4 ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟ ಧಾರಣೆಯು ಮಾರ್ಚ್ 28ರಂದು ಜರುಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.</p><p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಮೇಲುಕೋಟೆಯಲ್ಲಿ ನಡೆಯಲಿರುವ ವಿಶ್ವಪ್ರಸಿದ್ಧ ವೈರಮುಡಿ ಬ್ರಹ್ಮೋತ್ಸವದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.</p><p>ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮತ್ತು ಬಿಗಿ ಭದ್ರತೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.</p><p>ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವುದರ ಜತೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.</p>. <p>ಪೊಲೀಸ್ ಇಲಾಖೆಯವರು ವೈರಮುಡಿ ಬ್ರಹ್ಮೋತ್ಸವದಲ್ಲಿ ಕಿರೀಟಧಾರಣಾ ಮೆರವಣಿಗೆಯ ಸಂದರ್ಭದಲ್ಲಿ ಶಾಂತಿಯುತವಾಗಿ ಹಾಗೂ ಸಮಾಧಾನವಾಗಿ ಜನರು ದೇವರು ನೋಡವಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಈ ಸಂಬಂಧ ದೇವಸ್ಥಾನದ ಅರ್ಚಕರೊಂದಿಗೆ ಸಭೆ ನಡೆಸಿ ಶಾಂತಿಯುತವಾಗಿ ನಡೆಯಲು ಅಗತ್ಯ ಸಿದ್ಥತೆ ಮಾಡಿಕೊಳ್ಳಿ ಎಂದು ಸಚಿವರು ತಿಳಿಸಿದರು.</p><p>ಮೇಲುಕೋಟೆ ಶಾಸಕರಾದ ದರ್ಶನ್ ಪುಟ್ಟಣಯ್ಯ ಮಾತನಾಡಿ, ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ. ವೈರಮುಡಿ ಉತ್ಸವದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು ಎಂದು ತಿಳಿಸಿದರು. </p><p>ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತರಿಗೆ ಅಗತ್ಯವಿರುವ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.</p><p>ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಆರೋಗ್ಯ ಸೇವೆಗಳು, ಸಾರಿಗೆ ವ್ಯವಸ್ಥೆ (ಕೆ.ಎಸ್.ಆರ್.ಟಿ.ಸಿ ಬಸ್ಗಳು) ಮತ್ತು ಬಿಗಿ ಪೊಲೀಸ್ ಬಂದೋಬಸ್ತ್ಗೆ ಸಭೆಯಲ್ಲಿ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.</p><p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಕಾರಿ ಶ್ರೀನಿವಾಸ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>