ಮಂಡ್ಯ: ಜಿಲ್ಲಾ ಖಜಾನೆಯಲ್ಲಿರುವ ವೈರಮುಡಿ ಆಭರಣ ಪೆಟ್ಟಿಗೆಯನ್ನು ಪೊಲೀಸ್ ಭದ್ರತೆ ನಡುವೆ ತೆರೆಯಲಾಯಿತು.
ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಮುಜರಾಯಿ ಇಲಾಖೆ ಅಧಿಕಾರಿಗಳು ಪೆಟ್ಟಿಗೆ ತೆರೆದರು. ನಗರದ ಲಕ್ಷ್ಮಿ ಜನಾರ್ಧನ ದೇವಾಲಯದಲ್ಲಿ ಪೆಟ್ಟಿಗೆಗೆ ಪ್ರಥಮ ಪೂಜೆ ಸಲ್ಲಿಸಿ ನಂತರ ಮೇಲುಕೋಟೆ ಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತದೆ.