ರಾತ್ರಿ 8.30ಕ್ಕೆ ವಜ್ರಖಚಿತ ಕಿರೀಟ ಚೆಲುವನಾರಾಯಣಸ್ವಾಮಿಯ ಮುಡಿಗೇರಲಿದ್ದು ವಿಧ್ಯುಕ್ತವಾಗಿ ವೈರಮುಡಿ ಉತ್ಸವ ಆರಂಭವಾಗಲಿದೆ. ಕಿರೀಟ ಧರಿಸಿದ ಚೆಲುವನಾರಾಯಣಸ್ವಾಮಿ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ಮೇಲುಕೋಟೆಗೆ ಬಂದಿದ್ದು ಕ್ಷೇತ್ರದಾದ್ಯಂತ ಸಂಭ್ರಮ ಮನೆ ಮಾಡಿದೆ. ಕ್ಷೇತ್ರದ ಬೀದಿ, ದೇವಾಲಯ, ಸ್ಮಾರಕಗಳಿಗೆ ದೀಪಾಲಂಕಾರ ಮಾಡಲಾಗಿದ್ದು ಬೆಳಕಿನಲ್ಲಿ ಕಂಗೊಳಿಸುತ್ತಿದೆ.