<p><strong>ಮಂಡ್ಯ</strong>: ಕಳೆದೆರಡು ತಿಂಗಳುಗಳಿಂದ ಸಂಸದೆ ಸುಮಲತಾ ಅವರು ಜಿಲ್ಲೆಯಿಂದ ಕಾಣೆಯಾಗಿದ್ದಾರೆ ಎಂದು ಆರೋಪಿಸಿ ಜಾಲತಾಣಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ‘ಸುಮಕ್ಕ ಎಲ್ಲಿದ್ದೀಯಕ್ಕಾ’ ಎಂಬ ಸಂದೇಶ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ತೀವ್ರವಾಗಿ ಹೆಚ್ಚಳವಾಗುತ್ತಿದ್ದರೂ ಜಿಲ್ಲೆಯ ಕಡೆ ಕಾಲಿಟ್ಟಿಲ್ಲ. ಸೋಂಕು ನಿಯಂತ್ರಿಸಲು ಜಿಲ್ಲಾಡಳಿತದ ಜೊತೆ ಕೆಲಸ ಮಾಡಬೇಕಾದ ಸಮುಲತಾ ಅವರು ಯಾವುದೇ ಸಭೆಗಳಲ್ಲಿ ಭಾಗವಹಿಸಿಲ್ಲ. ಸ್ವಾಭಿಮಾನದ ಹೆಸರಿನಲ್ಲಿ ಗೆಲುವು ಸಾಧಿಸಿದ ಸುಮಲತಾ ಅವರು ಜಿಲ್ಲೆಯನ್ನು ಮರೆತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.</p>.<p>ಸುಮಲತಾ ಕಾಣೆಯಾಗಿದ್ದಾರೆ, ಸಂಸದರನ್ನು ಹುಡುಕಿಕೊಡಿ ಎಂಬ ಶೀರ್ಷಿಕೆಯೊಂದಿಗೆ ಸಂದೇಶ ಪ್ರಕಟಿಸುತ್ತಿದ್ದಾರೆ. ‘ಸುಮಲತಾ ಅವರು ಮತಕ್ಕಾಗಿ ಸೆರಗೊಡ್ಡಿ ಬೇಡಿಕೊಂಡಿದ್ದರು. ಈಗ ಕ್ಷೇತ್ರಕ್ಕೆ ಬರುವಂತೆ ಜನರು ಸೆರಗೊಡ್ಡಿ ಬೇಡಿಕೊಳ್ಳಬೇಕಾಗಿದೆ’ ಎಂಬ ಸಂದೇಶಗಳು ಹರಿದಾಡುತ್ತಿವೆ.</p>.<p><strong>ಜೋಡೆತ್ತು ಎಲ್ಲಿವೆ:</strong> ಕಳೆದ ಲೋಕಸಭಾ ಚುನಾವಣೆಯಲ್ಲಿ ನಟರಾದ ದರ್ಶನ್, ಯಶ್ ಅವರು ಸುಮಲತಾ ಪರ ಪ್ರಚಾರ ಮಾಡಿ ಜೋಡೆತ್ತು ಎಂದೇ ಪ್ರಸಿದ್ಧಿ ಪಡೆದಿದ್ದರು. ಆದರೆ ಜಿಲ್ಲೆ ಸಂಕಷ್ಟದಲ್ಲಿರುವಾಗ ಸುಮಲತಾ ಜೊತೆಗೆ ಜೋಡೆತ್ತುಗಳು ಎಲ್ಲಿವೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಕಳೆದೆರಡು ತಿಂಗಳುಗಳಿಂದ ಸಂಸದೆ ಸುಮಲತಾ ಅವರು ಜಿಲ್ಲೆಯಿಂದ ಕಾಣೆಯಾಗಿದ್ದಾರೆ ಎಂದು ಆರೋಪಿಸಿ ಜಾಲತಾಣಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ‘ಸುಮಕ್ಕ ಎಲ್ಲಿದ್ದೀಯಕ್ಕಾ’ ಎಂಬ ಸಂದೇಶ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ತೀವ್ರವಾಗಿ ಹೆಚ್ಚಳವಾಗುತ್ತಿದ್ದರೂ ಜಿಲ್ಲೆಯ ಕಡೆ ಕಾಲಿಟ್ಟಿಲ್ಲ. ಸೋಂಕು ನಿಯಂತ್ರಿಸಲು ಜಿಲ್ಲಾಡಳಿತದ ಜೊತೆ ಕೆಲಸ ಮಾಡಬೇಕಾದ ಸಮುಲತಾ ಅವರು ಯಾವುದೇ ಸಭೆಗಳಲ್ಲಿ ಭಾಗವಹಿಸಿಲ್ಲ. ಸ್ವಾಭಿಮಾನದ ಹೆಸರಿನಲ್ಲಿ ಗೆಲುವು ಸಾಧಿಸಿದ ಸುಮಲತಾ ಅವರು ಜಿಲ್ಲೆಯನ್ನು ಮರೆತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.</p>.<p>ಸುಮಲತಾ ಕಾಣೆಯಾಗಿದ್ದಾರೆ, ಸಂಸದರನ್ನು ಹುಡುಕಿಕೊಡಿ ಎಂಬ ಶೀರ್ಷಿಕೆಯೊಂದಿಗೆ ಸಂದೇಶ ಪ್ರಕಟಿಸುತ್ತಿದ್ದಾರೆ. ‘ಸುಮಲತಾ ಅವರು ಮತಕ್ಕಾಗಿ ಸೆರಗೊಡ್ಡಿ ಬೇಡಿಕೊಂಡಿದ್ದರು. ಈಗ ಕ್ಷೇತ್ರಕ್ಕೆ ಬರುವಂತೆ ಜನರು ಸೆರಗೊಡ್ಡಿ ಬೇಡಿಕೊಳ್ಳಬೇಕಾಗಿದೆ’ ಎಂಬ ಸಂದೇಶಗಳು ಹರಿದಾಡುತ್ತಿವೆ.</p>.<p><strong>ಜೋಡೆತ್ತು ಎಲ್ಲಿವೆ:</strong> ಕಳೆದ ಲೋಕಸಭಾ ಚುನಾವಣೆಯಲ್ಲಿ ನಟರಾದ ದರ್ಶನ್, ಯಶ್ ಅವರು ಸುಮಲತಾ ಪರ ಪ್ರಚಾರ ಮಾಡಿ ಜೋಡೆತ್ತು ಎಂದೇ ಪ್ರಸಿದ್ಧಿ ಪಡೆದಿದ್ದರು. ಆದರೆ ಜಿಲ್ಲೆ ಸಂಕಷ್ಟದಲ್ಲಿರುವಾಗ ಸುಮಲತಾ ಜೊತೆಗೆ ಜೋಡೆತ್ತುಗಳು ಎಲ್ಲಿವೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>