ಅರ್ಜಿದಾರರ ಪರ ವಕೀಲ ಎಲ್.ಎಂ.ಚಿದಾನಂದಯ್ಯ, ‘ಕಲ್ಲು ಗಣಿಗಾರಿಕೆಯಿಂದ ಕೆಆರ್ಎಸ್ ಜಲಾಶಯಕ್ಕೆ ಹಾನಿಯಾಗುತ್ತಿದೆ ಎಂಬ ಕಾರಣಕ್ಕೆ ಸರ್ಕಾರ ತಾತ್ಕಾಲಿಕವಾಗಿಗಣಿ ಪರವಾನಗಿ ಅಮಾನತುಪಡಿಸಿದೆ. ವಾಸ್ತವದಲ್ಲಿ ಕಾರ್ಯಾಚರಣೆಯಿಂದ ಜಲಾಶಯಕ್ಕೆ ಯಾವುದೇ ಹಾನಿಯಾಗುತ್ತಿಲ್ಲ. ಸರ್ಕಾರದ ನಡೆ ಕಾನೂನು ಬಾಹಿರವಾಗಿದ್ದು, ಅರ್ಜಿದಾರರಿಗೆ ನೀಡಲಾಗಿರುವ ನೋಟಿಸ್ಗಳನ್ನು ರದ್ದುಪಡಿಸಬೇಕು’ ಎಂದು ಕೋರಿದರು.