<p>ಶ್ರೀರಂಗಪಟ್ಟಣ: ‘ಮಹಿಳೆಯರು ಘನತೆ ಮತ್ತು ಸ್ವಾಭಿಮಾನದಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕಾದರೆ ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು ಕನಿಷ್ಠ 20 ವರ್ಷಕ್ಕೆ ನಗದಿ ಮಾಡಬೇಕು’ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಘಟಕದ ಆಯುಕ್ತ ಹಾಗೂ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯಾ ತಿಳಿಸಿದರು.</p>.<p>ಪಟ್ಟಣ ಲೆನಿನ್ ಶಾಲೆ ಆವರಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕರ್ನಾಟ ಸ್ಥಳೀಯ ಸಂಸ್ಥೆ ಬುಧವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ‘ಹೆಣ್ಣನ್ನು ನೋಡುವ ದೃಷ್ಟಿ ಬದಲಾಗಬೇಕು. ಹೆಣ್ಣು ಭ್ರೂಣ ಹತ್ಯೆಯಂತಹ ಪ್ರಕರಣಗಳನ್ನು ತಡೆಯಬೇಕು. ಕೂಲಿಯಲ್ಲಿನ ತಾರತಮ್ಯ ನಿಲ್ಲಬೇಕು. ಪದವಿ ವರೆಗೆ ಶಿಕ್ಷಣ ಕಡ್ಡಾಯ ಮಾಡಬೇಕು. ಹೆಣ್ಣಿನ ಆಯಸ್ಸು ಶೇ30 ಭಾಗ ಅನಿಶ್ಚಿತತೆಯಲ್ಲೇ ಕಳೆದು ಹೋಗುತ್ತದೆ. ರಾಮಕೃಷ್ಣ ಹೆಗಡೆ ಅವರ ಸರ್ಕಾರ 1985ರಲ್ಲಿ ಮಹಿಳೆಯರಿಗೆ ಶೇ 30 ಮೀಸಲಾತಿ ಜಾರಿಗೆ ತರಲು ಹೊರಟಾಗ ಮಹಿಳೆಯರಿಗೆ ವ್ಯವಹಾರ ಜ್ಞಾನ ಇಲ್ಲ ಎಂಬ ಕಾರಣಕ್ಕೆ ಕೆಲವರು ವಿರೋಧಿಸಿದ್ದರು’ ಎಂದು ಹೇಳಿದರು.</p>.<p>ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತ ಭಕ್ತವತ್ಸಲ ಕಾರ್ಯಕ್ರಮ ಉದ್ಘಾಟಿಸಿದರು. ‘ಹೆಣ್ಣು ಮಕ್ಕಳ ಸ್ವಾವಲಂಬನೆಗೆ ಶಿಕ್ಷಣ ಅಗತ್ಯತೆಯನ್ನು ಅರಿತಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶಾಲೆ, ಕಾಲೇಜುಗಳನ್ನು ತೆರೆದರು. ಮಹಿಳೆಯರು ಪುರುಷರಿಗೆ ಸರಿ ಸಮಾನಗಾಗಿ ಸಾಧನೆ ಮಾಡುತ್ತಿದ್ದು ಮತ್ತಷ್ಟು ಅವಕಾಶಗಳನ್ನು ಕಲ್ಪಿಸಬೇಕು’ ಎಂದರು.</p>.<p>ಹಿರಿಯ ವೈದ್ಯ ಡಾ.ಬಿ. ಸುಜಯಕುಮಾರ್, ‘ಸೇವೆ ಆಯ್ಕೆಯಾಗದೆ ಅನಿವಾರ್ಯ ಕರ್ತವ್ಯವಾಗಬೇಕು. ಸೇವಾ ಕೈಂಕರ್ಯದಲ್ಲಿ ನಿರತರಾದರೆ ಬದುಕು ಸುಂದರವಾಗಿರುತ್ತದೆ. ಎಲ್ಲರ ಒಳಿತಿನಲ್ಲಿ ನನ್ನ ಒಳಿತು ಅಡಗಿದೆ ಎಂಬ ಆಶಯದೊಂದಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕೆಲಸ ಮಾಡುತ್ತಿದೆ. ಎಲ್ಲ ಯುವ ಜನರಿಗೂ ಇದು ಮುಟ್ಟಬೇಕು’ ಎಂದು ಹೇಳಿದರು.</p>.<p>ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸ್ಥಳೀಯ ಸಂಸ್ಥೆ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಮನ್ವಯಾಧಿಕಾರಿ ಪ್ರಭಾ, ಪುರಸಭೆ ಮಾಜಿ ಅಧ್ಯಕ್ಷೆ ಶೀಲಾ ನಂಜುಂಡಯ್ಯ, ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕಿ ಬಿ. ಸುವರ್ಣಾದೇವಿ, ಲೆನಿನ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಬಿ.ಪಿ. ಅಮಿತ್ದೇವ್, ಅಧ್ಯಕ್ಷೆ ಬಿ.ಎಸ್. ವಿಶಾಲಾಕ್ಷಿ ಪದ್ಮನಾಭ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಜೆ. ಶ್ರೀನಿವಾಸ್, ಪ್ರೊ.ಎಚ್. ಅನಿಲ್ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಸಾದ್, ಸುಂದರೇಶಮೂರ್ತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ‘ಮಹಿಳೆಯರು ಘನತೆ ಮತ್ತು ಸ್ವಾಭಿಮಾನದಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕಾದರೆ ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು ಕನಿಷ್ಠ 20 ವರ್ಷಕ್ಕೆ ನಗದಿ ಮಾಡಬೇಕು’ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಘಟಕದ ಆಯುಕ್ತ ಹಾಗೂ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯಾ ತಿಳಿಸಿದರು.</p>.<p>ಪಟ್ಟಣ ಲೆನಿನ್ ಶಾಲೆ ಆವರಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕರ್ನಾಟ ಸ್ಥಳೀಯ ಸಂಸ್ಥೆ ಬುಧವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ‘ಹೆಣ್ಣನ್ನು ನೋಡುವ ದೃಷ್ಟಿ ಬದಲಾಗಬೇಕು. ಹೆಣ್ಣು ಭ್ರೂಣ ಹತ್ಯೆಯಂತಹ ಪ್ರಕರಣಗಳನ್ನು ತಡೆಯಬೇಕು. ಕೂಲಿಯಲ್ಲಿನ ತಾರತಮ್ಯ ನಿಲ್ಲಬೇಕು. ಪದವಿ ವರೆಗೆ ಶಿಕ್ಷಣ ಕಡ್ಡಾಯ ಮಾಡಬೇಕು. ಹೆಣ್ಣಿನ ಆಯಸ್ಸು ಶೇ30 ಭಾಗ ಅನಿಶ್ಚಿತತೆಯಲ್ಲೇ ಕಳೆದು ಹೋಗುತ್ತದೆ. ರಾಮಕೃಷ್ಣ ಹೆಗಡೆ ಅವರ ಸರ್ಕಾರ 1985ರಲ್ಲಿ ಮಹಿಳೆಯರಿಗೆ ಶೇ 30 ಮೀಸಲಾತಿ ಜಾರಿಗೆ ತರಲು ಹೊರಟಾಗ ಮಹಿಳೆಯರಿಗೆ ವ್ಯವಹಾರ ಜ್ಞಾನ ಇಲ್ಲ ಎಂಬ ಕಾರಣಕ್ಕೆ ಕೆಲವರು ವಿರೋಧಿಸಿದ್ದರು’ ಎಂದು ಹೇಳಿದರು.</p>.<p>ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತ ಭಕ್ತವತ್ಸಲ ಕಾರ್ಯಕ್ರಮ ಉದ್ಘಾಟಿಸಿದರು. ‘ಹೆಣ್ಣು ಮಕ್ಕಳ ಸ್ವಾವಲಂಬನೆಗೆ ಶಿಕ್ಷಣ ಅಗತ್ಯತೆಯನ್ನು ಅರಿತಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶಾಲೆ, ಕಾಲೇಜುಗಳನ್ನು ತೆರೆದರು. ಮಹಿಳೆಯರು ಪುರುಷರಿಗೆ ಸರಿ ಸಮಾನಗಾಗಿ ಸಾಧನೆ ಮಾಡುತ್ತಿದ್ದು ಮತ್ತಷ್ಟು ಅವಕಾಶಗಳನ್ನು ಕಲ್ಪಿಸಬೇಕು’ ಎಂದರು.</p>.<p>ಹಿರಿಯ ವೈದ್ಯ ಡಾ.ಬಿ. ಸುಜಯಕುಮಾರ್, ‘ಸೇವೆ ಆಯ್ಕೆಯಾಗದೆ ಅನಿವಾರ್ಯ ಕರ್ತವ್ಯವಾಗಬೇಕು. ಸೇವಾ ಕೈಂಕರ್ಯದಲ್ಲಿ ನಿರತರಾದರೆ ಬದುಕು ಸುಂದರವಾಗಿರುತ್ತದೆ. ಎಲ್ಲರ ಒಳಿತಿನಲ್ಲಿ ನನ್ನ ಒಳಿತು ಅಡಗಿದೆ ಎಂಬ ಆಶಯದೊಂದಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕೆಲಸ ಮಾಡುತ್ತಿದೆ. ಎಲ್ಲ ಯುವ ಜನರಿಗೂ ಇದು ಮುಟ್ಟಬೇಕು’ ಎಂದು ಹೇಳಿದರು.</p>.<p>ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸ್ಥಳೀಯ ಸಂಸ್ಥೆ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಮನ್ವಯಾಧಿಕಾರಿ ಪ್ರಭಾ, ಪುರಸಭೆ ಮಾಜಿ ಅಧ್ಯಕ್ಷೆ ಶೀಲಾ ನಂಜುಂಡಯ್ಯ, ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕಿ ಬಿ. ಸುವರ್ಣಾದೇವಿ, ಲೆನಿನ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಬಿ.ಪಿ. ಅಮಿತ್ದೇವ್, ಅಧ್ಯಕ್ಷೆ ಬಿ.ಎಸ್. ವಿಶಾಲಾಕ್ಷಿ ಪದ್ಮನಾಭ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಜೆ. ಶ್ರೀನಿವಾಸ್, ಪ್ರೊ.ಎಚ್. ಅನಿಲ್ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಸಾದ್, ಸುಂದರೇಶಮೂರ್ತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>