ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಿಚುಂಚನಗಿರಿಗೆ ಸಚಿವ ಮಾಂಕಾಳ ವೈದ್ಯ ಭೇಟಿ

Published 28 ಮೇ 2023, 14:55 IST
Last Updated 28 ಮೇ 2023, 14:55 IST
ಅಕ್ಷರ ಗಾತ್ರ

ನಾಗಮಂಗಲ: ಆದಿಚುಂಚನಗಿರಿ ಮಠಕ್ಕೆ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಭಟ್ಕಳ ಕ್ಷೇತ್ರದ ಮಾಂಕಾಳ ವೈದ್ಯ ಭೇಟಿ ನೀಡಿ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭಾನುವಾರ ಕುಟುಂಬ ಸಮೇತರಾಗಿ ಬಂದಿದ್ದ ಸಚಿವ ವೈದ್ಯ ವಿಶೇಷ ಪೂಜೆಯಲ್ಲಿ ಭಾಗಿಯಾದರು.  ರಥೋತ್ಸವದಲ್ಲಿ ಸ್ವಾಮೀಜಿ ಜತೆ ಭಾಗಿಯಾದರು.  ಕಾಲಭೈರವೇಶ್ವರ ಸ್ವಾಮಿ ದೇವಾಲಯ,  ಕ್ಷೇತ್ರಾಧಿದೇವತೆಗಳಿಗೆ ಪೂಜೆ ಸಲ್ಲಿಸಿದರು.

ಜೊತೆಗೆ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಮಠದ ಸಂಪ್ರದಾಯದಂತೆ ಸಚಿವರನ್ನು  ಸ್ವಾಮೀಜಿ ಸನ್ಮಾನಿಸಿದರು.

ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ, ಭಕ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT