ಫೆ.19ರಂದು ಕೆ.ಆರ್.ಪೇಟೆಯಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯ ಶಿಬಿರದಲ್ಲಿ ಮಹಾರಾಷ್ಟ್ರದಿಂದ ಬಂದಿದ್ದ ಕಲಾವಿದರು ಸಚಿವ ನಾರಾಯಣಗೌಡರಿಗೆ ಸನ್ಮಾನ ಮಾಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ನನ್ನ ಬದುಕು ಕಟ್ಟಿಕೊಳ್ಳಲು, ಈ ಮಟ್ಟಕ್ಕೆ ಬೆಳೆಯಲು ಮಹಾರಾಷ್ಟ್ರ ಕಾರಣವಾಯಿತು. ಜೈ ಮಹಾರಾಷ್ಟ್ರ, ಜೈ ಶಿವಾಜಿ’ ಎಂದು ಘೋಷಣೆ ಕೂಗಿದ್ದರು.