ನಾರಾಯಣಗೌಡ ಅವರು ಹುಟ್ಟೂರು ಕೈಗೋನಹಳ್ಳಿ ಗ್ರಾಮದಲ್ಲಿ ನಾರಾಯಣಗೌಡ ದಂಪತಿ, ಮಗಳು, ಅಳಿಯನನ್ನು ಎತ್ತಿನಗಾಡಿಯ ಮೂಲಕ ಮೆರವಣಿಗೆ ನಡೆಸಲಾಯಿತು. ಕೆ.ಆರ್.ಪೇಟೆ ಪಟ್ಟಣದ ಅವರ ನಿವಾಸದಲ್ಲಿ 59 ಕೆ.ಜಿ ತೂಕದ ಕೇಕ್ ಕತ್ತರಿಸಲಾಯಿತು. ಮನೆಯಲ್ಲಿ ನಡೆದ ವಿವಿಧ ಧಾರ್ಮಿಕ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಸಚಿವರು ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ₹ 51 ಸಾವಿರ ಮಂಗಳನಿಧಿ ಸಮರ್ಪಿಸಿದರು.