<p><strong>ಮಂಡ್ಯ</strong>: ‘ತುರ್ತು ಸೇವೆ ನೀಡುವುದು ವೈದ್ಯರ ಕರ್ತವ್ಯ. ಹೀಗಾಗಿ ಕೇಳಿಕೊಂಡು ಬಂದವರಿಗೆ ಸ್ಕ್ಯಾನಿಂಗ್ ಮಾಡಿದ್ದಾರೆ. ಅದರ ಮಾಹಿತಿಯನ್ನು ನೀಡುವಲ್ಲಿ ಸಣ್ಣ ನಿರ್ಲಕ್ಷ್ಯ ತೋರಿದ್ದಾರೆ. ಅಷ್ಟಕ್ಕೇ ವೈದ್ಯರನ್ನು ಬಂಧಿಸುವುದು ಎಷ್ಟು ಸರಿ’ ಎಂದು ಕೆ.ಆರ್. ಪೇಟೆ ಶಾಸಕ ಎಚ್.ಟಿ. ಮಂಜು ಪ್ರಶ್ನಿಸಿದರು. </p>.<p>ನಗರದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯಲ್ಲಿ ‘31 ಬಾಲಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್ ಕುರಿತ ಲೋಕಾಯುಕ್ತ ಪ್ರಕರಣ’ವನ್ನು ಪ್ರಸ್ತಾಪಿಸಿ, ‘ಭ್ರೂಣಲಿಂಗ ಪತ್ತೆ ಮಾಡಿರುವುದಕ್ಕೆ ದಾಖಲೆ ಇಲ್ಲದಿದ್ದರೂ ವೈದ್ಯರನ್ನು ಬಂಧಿಸಲಾಗಿದೆ’ ಎಂದು ದೂರಿದರು.</p>.<p>‘ಕೆ.ಆರ್. ಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಸೌಲಭ್ಯವಿಲ್ಲದ್ದರಿಂದ ವೈದ್ಯರು ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗೆ ಶಿಫಾರಸು ಮಾಡಿದ್ದಾರೆ. ಬಂದ ಗರ್ಭಿಣಿಯರನ್ನು 70 ಕಿ.ಮೀ. ದೂರದ ಜಿಲ್ಲಾಸ್ಪತ್ರೆಗೆ ಕಳಿಸಲು ಸಾಧ್ಯವೇ? ವೈದ್ಯರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಕೆಲವರು ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ. ತಾಲ್ಲೂಕಿನ ಗೌರವಕ್ಕೆ ಧಕ್ಕೆಯಾಗಿದೆ. ಹೀಗಾದರೆ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವುದು ಹೇಗೆ’ ಎಂದು ಕೇಳಿದರು. </p>.<p>‘ಭ್ರೂಣಲಿಂಗ ಪತ್ತೆ ಮಾಡುವುದು ಸರಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ಆದರೆ, ಅನಗತ್ಯವಾಗಿ ವೈದ್ಯರಿಗೆ ಕಿರುಕುಳ ನೀಡಬಾರದು’ ಎಂದರು. </p>.<p>ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ‘ವೈದ್ಯರ ತಂಡವು ಸಮಸ್ಯೆಯನ್ನು ನನ್ನ ಗಮನಕ್ಕೆ ತಂದಿದೆ. ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿರುವುದರಿಂದ, ಕೆಡಿಪಿ ಸಭೆಯಲ್ಲಿ ನಿರ್ಣಯಿಸುವುದು ಬೇಡ. ಮುಖ್ಯಮಂತ್ರಿಯೊಂದಿಗೆ ಚರ್ಚಿಸುವೆ. ಆರೋಗ್ಯ ಸಚಿವ ದಿನೇಶ್ ಗೂಂಡೂರಾವ್ ಅವರ ಗಮನ ಸೆಳೆದು, ಲೋಕಾಯುಕ್ತ ರಿಜಿಸ್ಟ್ರಾರ್ ಅವರಿಗೆ ಪತ್ರ ಬರೆಸುವೆ. ಅನಗತ್ಯ ಕಿರುಕುಳ ತಪ್ಪಿಸಲಾಗುವುದು’ ಎಂದು ಭರವಸೆ ನೀಡಿದರು. </p>.<p> ‘ಎಫ್ಐಆರ್: 12ರಿಂದ 23ಕ್ಕೆ ಏರಿಕೆ’ ಮಂಡ್ಯ: ಭ್ರೂಣಲಿಂಗ ಪತ್ತೆಗಾಗಿ 31 ಬಾಲಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡಿರುವ ಆರೋಪದ ಮೇರೆಗೆ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿ ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ಒಟ್ಟು 17 ಆರೋಪಿಗಳ ವಿರುದ್ಧ 12 ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿದ್ದವು. ಈಗ ಕಿಕ್ಕೇರಿ ಠಾಣೆಯಲ್ಲಿ ದಾಖಲಾದ ಪ್ರಕರಣಗಳು ಸೇರಿ ಎಫ್ಐಆರ್ಗಳ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಸರ್ಕಾರಿ ವೈದ್ಯೆ ಮೂವರು ಖಾಸಗಿ ವೈದ್ಯರು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಆಶಾ ಕಾರ್ಯಕರ್ತೆ ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲೂ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ತುರ್ತು ಸೇವೆ ನೀಡುವುದು ವೈದ್ಯರ ಕರ್ತವ್ಯ. ಹೀಗಾಗಿ ಕೇಳಿಕೊಂಡು ಬಂದವರಿಗೆ ಸ್ಕ್ಯಾನಿಂಗ್ ಮಾಡಿದ್ದಾರೆ. ಅದರ ಮಾಹಿತಿಯನ್ನು ನೀಡುವಲ್ಲಿ ಸಣ್ಣ ನಿರ್ಲಕ್ಷ್ಯ ತೋರಿದ್ದಾರೆ. ಅಷ್ಟಕ್ಕೇ ವೈದ್ಯರನ್ನು ಬಂಧಿಸುವುದು ಎಷ್ಟು ಸರಿ’ ಎಂದು ಕೆ.ಆರ್. ಪೇಟೆ ಶಾಸಕ ಎಚ್.ಟಿ. ಮಂಜು ಪ್ರಶ್ನಿಸಿದರು. </p>.<p>ನಗರದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯಲ್ಲಿ ‘31 ಬಾಲಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್ ಕುರಿತ ಲೋಕಾಯುಕ್ತ ಪ್ರಕರಣ’ವನ್ನು ಪ್ರಸ್ತಾಪಿಸಿ, ‘ಭ್ರೂಣಲಿಂಗ ಪತ್ತೆ ಮಾಡಿರುವುದಕ್ಕೆ ದಾಖಲೆ ಇಲ್ಲದಿದ್ದರೂ ವೈದ್ಯರನ್ನು ಬಂಧಿಸಲಾಗಿದೆ’ ಎಂದು ದೂರಿದರು.</p>.<p>‘ಕೆ.ಆರ್. ಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಸೌಲಭ್ಯವಿಲ್ಲದ್ದರಿಂದ ವೈದ್ಯರು ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗೆ ಶಿಫಾರಸು ಮಾಡಿದ್ದಾರೆ. ಬಂದ ಗರ್ಭಿಣಿಯರನ್ನು 70 ಕಿ.ಮೀ. ದೂರದ ಜಿಲ್ಲಾಸ್ಪತ್ರೆಗೆ ಕಳಿಸಲು ಸಾಧ್ಯವೇ? ವೈದ್ಯರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಕೆಲವರು ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ. ತಾಲ್ಲೂಕಿನ ಗೌರವಕ್ಕೆ ಧಕ್ಕೆಯಾಗಿದೆ. ಹೀಗಾದರೆ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವುದು ಹೇಗೆ’ ಎಂದು ಕೇಳಿದರು. </p>.<p>‘ಭ್ರೂಣಲಿಂಗ ಪತ್ತೆ ಮಾಡುವುದು ಸರಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ಆದರೆ, ಅನಗತ್ಯವಾಗಿ ವೈದ್ಯರಿಗೆ ಕಿರುಕುಳ ನೀಡಬಾರದು’ ಎಂದರು. </p>.<p>ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ‘ವೈದ್ಯರ ತಂಡವು ಸಮಸ್ಯೆಯನ್ನು ನನ್ನ ಗಮನಕ್ಕೆ ತಂದಿದೆ. ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿರುವುದರಿಂದ, ಕೆಡಿಪಿ ಸಭೆಯಲ್ಲಿ ನಿರ್ಣಯಿಸುವುದು ಬೇಡ. ಮುಖ್ಯಮಂತ್ರಿಯೊಂದಿಗೆ ಚರ್ಚಿಸುವೆ. ಆರೋಗ್ಯ ಸಚಿವ ದಿನೇಶ್ ಗೂಂಡೂರಾವ್ ಅವರ ಗಮನ ಸೆಳೆದು, ಲೋಕಾಯುಕ್ತ ರಿಜಿಸ್ಟ್ರಾರ್ ಅವರಿಗೆ ಪತ್ರ ಬರೆಸುವೆ. ಅನಗತ್ಯ ಕಿರುಕುಳ ತಪ್ಪಿಸಲಾಗುವುದು’ ಎಂದು ಭರವಸೆ ನೀಡಿದರು. </p>.<p> ‘ಎಫ್ಐಆರ್: 12ರಿಂದ 23ಕ್ಕೆ ಏರಿಕೆ’ ಮಂಡ್ಯ: ಭ್ರೂಣಲಿಂಗ ಪತ್ತೆಗಾಗಿ 31 ಬಾಲಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡಿರುವ ಆರೋಪದ ಮೇರೆಗೆ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿ ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ಒಟ್ಟು 17 ಆರೋಪಿಗಳ ವಿರುದ್ಧ 12 ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿದ್ದವು. ಈಗ ಕಿಕ್ಕೇರಿ ಠಾಣೆಯಲ್ಲಿ ದಾಖಲಾದ ಪ್ರಕರಣಗಳು ಸೇರಿ ಎಫ್ಐಆರ್ಗಳ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಸರ್ಕಾರಿ ವೈದ್ಯೆ ಮೂವರು ಖಾಸಗಿ ವೈದ್ಯರು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಆಶಾ ಕಾರ್ಯಕರ್ತೆ ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲೂ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>