<p><strong>ಕೆ.ಆರ್.ಪೇಟೆ:</strong> ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳ ವತಿಯಿಂದ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಶಾಸಕ ಎಚ್.ಟಿ. ಮಂಜು ಚಾಲನೆ ನೀಡಿದರು.</p>.<p>ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಸಂಸ್ಥೆಗಳ ವತಿಯಿಂದ 20ಕ್ಕೂ ಹೆಚ್ಚು ಮಹಿಳೆಯರಿಗೆ ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರ ಮತ್ತು 15 ಮಂದಿ ನಿರುದ್ಯೋಗಿ ಯುವಕರಿಗೆ ತಲಾ ₹3 ಲಕ್ಷ ಸಬ್ಸಿಡಿ ರೂಪದಲ್ಲಿ ಕಾರುಗಳನ್ನು ವಿತರಿಸಿ ಮಾತನಾಡಿ, ‘ಫಲಾನುಭವಿಗಳು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕ ಪ್ರಗತಿಯನ್ನು ಸಾಧಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ವಾಹನ ಖರೀದಿ ಮಾಡಲು ₹3 ರಿಂದ ₹5 ಲಕ್ಷ ಗಳವರೆಗೆ ಸಹಾಯಧನವನ್ನು ನೀಡಲಾಗುವುದು. ಉಳಿದ ಹಣವನ್ನು ಬ್ಯಾಂಕಿನಲ್ಲಿ ಸಾಲದ ರೂಪದಲ್ಲಿ ಪಡೆದು ಕಾರು ಖರೀದಿ ಮಾಡಿ ಬಾಡಿಗೆಗೆ ಓಡಿಸಿ ಸ್ವಾವಲಂಬಿ ಜೀವನ ನಡೆಸಿ’ ಎಂದರು.</p>.<p>ಇಲಾಖೆಯ ಜಿಲ್ಲಾ ಅಧಿಕಾರಿ ಬೋರೇಗೌಡ, ಪ್ರಮುಖರಾದ ಬಸವಲಿಂಗಪ್ಪ, ಹೊಸಹೊಳಲು ಅಶೋಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳ ವತಿಯಿಂದ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಶಾಸಕ ಎಚ್.ಟಿ. ಮಂಜು ಚಾಲನೆ ನೀಡಿದರು.</p>.<p>ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಸಂಸ್ಥೆಗಳ ವತಿಯಿಂದ 20ಕ್ಕೂ ಹೆಚ್ಚು ಮಹಿಳೆಯರಿಗೆ ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರ ಮತ್ತು 15 ಮಂದಿ ನಿರುದ್ಯೋಗಿ ಯುವಕರಿಗೆ ತಲಾ ₹3 ಲಕ್ಷ ಸಬ್ಸಿಡಿ ರೂಪದಲ್ಲಿ ಕಾರುಗಳನ್ನು ವಿತರಿಸಿ ಮಾತನಾಡಿ, ‘ಫಲಾನುಭವಿಗಳು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕ ಪ್ರಗತಿಯನ್ನು ಸಾಧಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ವಾಹನ ಖರೀದಿ ಮಾಡಲು ₹3 ರಿಂದ ₹5 ಲಕ್ಷ ಗಳವರೆಗೆ ಸಹಾಯಧನವನ್ನು ನೀಡಲಾಗುವುದು. ಉಳಿದ ಹಣವನ್ನು ಬ್ಯಾಂಕಿನಲ್ಲಿ ಸಾಲದ ರೂಪದಲ್ಲಿ ಪಡೆದು ಕಾರು ಖರೀದಿ ಮಾಡಿ ಬಾಡಿಗೆಗೆ ಓಡಿಸಿ ಸ್ವಾವಲಂಬಿ ಜೀವನ ನಡೆಸಿ’ ಎಂದರು.</p>.<p>ಇಲಾಖೆಯ ಜಿಲ್ಲಾ ಅಧಿಕಾರಿ ಬೋರೇಗೌಡ, ಪ್ರಮುಖರಾದ ಬಸವಲಿಂಗಪ್ಪ, ಹೊಸಹೊಳಲು ಅಶೋಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>