<p><strong>ಕೆ.ಆರ್.ಪೇಟೆ:</strong> ಪಟ್ಟಣದಿಂದ ಚಿಕ್ಕೊಸಹಳ್ಳಿಗೆ ಹೋಗುವ ಶ್ರವಣಬೆಳಗೊಳ ರಸ್ತೆಯ ಒಂದೂವರೆ ಕಿ.ಮೀ ರಸ್ತೆ ಕಾಮಗಾರಿಗೆ ಎರಡು ವರ್ಷದ ಹಿಂದೆ ಅನುದಾನ ಬಿಡುಗಡೆಯಾಗಿದ್ದರೂ ಲೋಕೋಪಯೋಗಿ ಇಲಾಖೆ ಕಾಮಗಾರಿ ನಡೆಸದಿರುವ ಬಗ್ಗೆ ಗ್ರಾಮಸ್ಥರ ದೂರಿದ್ದರಿಂದ ಶಾಸಕ ಎಚ್.ಟಿ.ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ಶ್ರವಣಬೆಳಗೊಳ ರಸ್ತೆಯಲ್ಲಿ ಕೆರೆ ಬಳಿಯಿಂದ 60 ಅಡಿ ಅಗಲದ ಒಂದೂ ಕಾಲು ಕಿ.ಮೀ ಉದ್ದದ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ₹ 6 ಕೋಟಿ ಹಾಗೂ ರಸ್ತೆ ವಿಸ್ತರಣೆಯಿಂದ ಭೂಮಿ ಕಳೆದುಕೊಳ್ಳುವ ರೈತರಿಗೆ ₹ 3.79 ಕೋಟಿ ಅನುದಾನವು ಹಿಂದಿನ ಸರ್ಕಾರದಲ್ಲಿಯೇ ಬಿಡಗಡೆಯಾಗಿದೆ. ಆದರೆ ಸರಪಳಿ 08.10 ರಿಂದ ಆರಂಭಿಸಬೇಕಾಗಿದ್ದ ಕಾಮಗಾರಿಯನ್ನು ಕೆ.ಆರ್.ಪೇಟೆ ಪಟ್ಟಣದಿಂದ ಸರಪಳಿ 05.8 ರಿಂದ ಕಾಮಗಾರಿ ಆರಂಭಿಸಿ 250 ಮೀಟರ್ ಮಾಡಿ ನಂತರ ಕಾಮಗಾರಿ ಮಾಡದೆ ಇರುವದರಿಂದ ಈ ಮಾರ್ಗದಲ್ಲಿ ಗುಂಡಿ-ಕೊರಕಲು ಉಂಟಾಗಿದ್ದು, ವಾಹನಗಳು ಓಡಾಡಲು ತೀವ್ರ ತೊಂದರೆಯಾಗಿದೆ ಎಂದು ಗ್ರಾಮಸ್ಥರು ವಿವರಿಸಿದರು.</p>.<p>ರಸ್ತೆಯ ದುಸ್ಥಿತಿ ಗಮನಿಸಿದ ಶಾಸಕ ಮಂಜು ‘ಎಸ್ಟಿಮೇಟ್ನಂತೆ ಕಾಮಗಾರಿ ಆರಂಭಿಸದಿರುವುದ ಏಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು ,ಈ ಹಿಂದೆ ಇದೇ ರಸ್ತೆಯಲ್ಲಿ ಬಸ್ ಉರುಳಿ 6 ಜನ ಮೃತಪಟ್ಟಿದ್ದಾರೆ. ಆದ್ದರಿಂದ ಅಧಿಕಾರಿಗಳು ಎಚ್ಚೆತ್ತು ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಿ ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ’ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಈ ಸಂದರ್ಭದಲ್ಲಿ ತಹಶೀಲ್ದಾರ್ ನಿಸರ್ಗ ಪ್ರಿಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಾಜು, ಸಹಾಯಕ ಕಾರ್ಯಪಾಲಕ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ಪಟ್ಟಣದಿಂದ ಚಿಕ್ಕೊಸಹಳ್ಳಿಗೆ ಹೋಗುವ ಶ್ರವಣಬೆಳಗೊಳ ರಸ್ತೆಯ ಒಂದೂವರೆ ಕಿ.ಮೀ ರಸ್ತೆ ಕಾಮಗಾರಿಗೆ ಎರಡು ವರ್ಷದ ಹಿಂದೆ ಅನುದಾನ ಬಿಡುಗಡೆಯಾಗಿದ್ದರೂ ಲೋಕೋಪಯೋಗಿ ಇಲಾಖೆ ಕಾಮಗಾರಿ ನಡೆಸದಿರುವ ಬಗ್ಗೆ ಗ್ರಾಮಸ್ಥರ ದೂರಿದ್ದರಿಂದ ಶಾಸಕ ಎಚ್.ಟಿ.ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ಶ್ರವಣಬೆಳಗೊಳ ರಸ್ತೆಯಲ್ಲಿ ಕೆರೆ ಬಳಿಯಿಂದ 60 ಅಡಿ ಅಗಲದ ಒಂದೂ ಕಾಲು ಕಿ.ಮೀ ಉದ್ದದ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ₹ 6 ಕೋಟಿ ಹಾಗೂ ರಸ್ತೆ ವಿಸ್ತರಣೆಯಿಂದ ಭೂಮಿ ಕಳೆದುಕೊಳ್ಳುವ ರೈತರಿಗೆ ₹ 3.79 ಕೋಟಿ ಅನುದಾನವು ಹಿಂದಿನ ಸರ್ಕಾರದಲ್ಲಿಯೇ ಬಿಡಗಡೆಯಾಗಿದೆ. ಆದರೆ ಸರಪಳಿ 08.10 ರಿಂದ ಆರಂಭಿಸಬೇಕಾಗಿದ್ದ ಕಾಮಗಾರಿಯನ್ನು ಕೆ.ಆರ್.ಪೇಟೆ ಪಟ್ಟಣದಿಂದ ಸರಪಳಿ 05.8 ರಿಂದ ಕಾಮಗಾರಿ ಆರಂಭಿಸಿ 250 ಮೀಟರ್ ಮಾಡಿ ನಂತರ ಕಾಮಗಾರಿ ಮಾಡದೆ ಇರುವದರಿಂದ ಈ ಮಾರ್ಗದಲ್ಲಿ ಗುಂಡಿ-ಕೊರಕಲು ಉಂಟಾಗಿದ್ದು, ವಾಹನಗಳು ಓಡಾಡಲು ತೀವ್ರ ತೊಂದರೆಯಾಗಿದೆ ಎಂದು ಗ್ರಾಮಸ್ಥರು ವಿವರಿಸಿದರು.</p>.<p>ರಸ್ತೆಯ ದುಸ್ಥಿತಿ ಗಮನಿಸಿದ ಶಾಸಕ ಮಂಜು ‘ಎಸ್ಟಿಮೇಟ್ನಂತೆ ಕಾಮಗಾರಿ ಆರಂಭಿಸದಿರುವುದ ಏಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು ,ಈ ಹಿಂದೆ ಇದೇ ರಸ್ತೆಯಲ್ಲಿ ಬಸ್ ಉರುಳಿ 6 ಜನ ಮೃತಪಟ್ಟಿದ್ದಾರೆ. ಆದ್ದರಿಂದ ಅಧಿಕಾರಿಗಳು ಎಚ್ಚೆತ್ತು ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಿ ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ’ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಈ ಸಂದರ್ಭದಲ್ಲಿ ತಹಶೀಲ್ದಾರ್ ನಿಸರ್ಗ ಪ್ರಿಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಾಜು, ಸಹಾಯಕ ಕಾರ್ಯಪಾಲಕ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>