<p>ಮದ್ದೂರು: ಹಳ್ಳಿ ಜನರಿಗೆ ಅದರಲ್ಲೂ ಮಹಿಳೆಯರಿಗೆ ಹೈನುಗಾರಿಕೆಯೇ ಪ್ರಮುಖ ಆರ್ಥಿಕ ಮೂಲಗಳಲ್ಲೊಂದಾಗಿದ್ದು ಎಷ್ಟೋ ಕುಟುಂಬಗಳು ಇದನ್ನೇ ಅವಲಂಬಿಸಿವೆ ಎಂದು ಶಾಸಕ ಕೆ. ಎಂ ಉದಯ್ ತಿಳಿಸಿದರು.</p>.<p>ತಾಲ್ಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ಸೋಮವಾರ ಪಶು ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ಕೃಷಿ ಮತ್ತು ಹೈನುಗಾರಿಕೆಯೇ ಪ್ರಮುಖವಾಗಿದೆ. ಹಲವು ಕುಟುಂಬಗಳ ನಿರ್ವಹಣೆಗೆ ಹೈನುಗಾರಿಕೆಯಿಂದ ಆರ್ಥಿಕಾಭಿವೃದ್ಧಿ ಸಾಧ್ಯವಾಗುತ್ತಿದೆ. ಹೀಗಾಗಿ, ರಾಸುಗಳಿಗೆ ತೊಂದರೆಯಾದಲ್ಲಿ ಕುಟುಂಬದ ಆಧಾರವೇ ಕಳಚಿ ಬಿದ್ದಾಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಬೇಡಿಕೆಯ ಹಿನ್ನೆಲೆಯಲ್ಲಿ ಬೇರೆ ಗ್ರಾಮಕ್ಕೆ ಮಂಜೂರಾಗಿದ್ದ ಆಸ್ಪತ್ರೆಯನ್ನು ದೊಡ್ಡ ಗ್ರಾಮವಾದ ವಳಗೆರೆಹಳ್ಳಿಯಲ್ಲಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.</p>.<p>ಗ್ರಾ.ಪಂ, ಸದಸ್ಯರಾದ ಎಸ್.ದಯಾನಂದ್, ವಿ.ಆರ್.ಸುನೀಲ್, ವಿ.ಎಚ್.ಶಿವಲಿಂಗಯ್ಯ, ಎಸ್.ಕೆ.ಗಿರೀಶ್, ಕಾಂಗ್ರೆಸ್ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಶಂಕರೇಗೌಡ, ಮುಖಂಡರಾದ ಉಮಾಶಂಕರ್, ಟಿ.ಪುಟ್ಟರಾಜು, ಶ್ರೀನಿವಾಸ್ಕುಮಾರ್, ವಿ.ಕೆ.ಗಿರೀಶ್, ಆದೇಶ್, ಸೋ.ಶಿ.ಪ್ರಕಾಶ್, ಹೊಂಬಯ್ಯ, ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗೋವಿಂದ್, ಪಶು ವೈದ್ಯ ಡಾ.ಶಿವಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮದ್ದೂರು: ಹಳ್ಳಿ ಜನರಿಗೆ ಅದರಲ್ಲೂ ಮಹಿಳೆಯರಿಗೆ ಹೈನುಗಾರಿಕೆಯೇ ಪ್ರಮುಖ ಆರ್ಥಿಕ ಮೂಲಗಳಲ್ಲೊಂದಾಗಿದ್ದು ಎಷ್ಟೋ ಕುಟುಂಬಗಳು ಇದನ್ನೇ ಅವಲಂಬಿಸಿವೆ ಎಂದು ಶಾಸಕ ಕೆ. ಎಂ ಉದಯ್ ತಿಳಿಸಿದರು.</p>.<p>ತಾಲ್ಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ಸೋಮವಾರ ಪಶು ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ಕೃಷಿ ಮತ್ತು ಹೈನುಗಾರಿಕೆಯೇ ಪ್ರಮುಖವಾಗಿದೆ. ಹಲವು ಕುಟುಂಬಗಳ ನಿರ್ವಹಣೆಗೆ ಹೈನುಗಾರಿಕೆಯಿಂದ ಆರ್ಥಿಕಾಭಿವೃದ್ಧಿ ಸಾಧ್ಯವಾಗುತ್ತಿದೆ. ಹೀಗಾಗಿ, ರಾಸುಗಳಿಗೆ ತೊಂದರೆಯಾದಲ್ಲಿ ಕುಟುಂಬದ ಆಧಾರವೇ ಕಳಚಿ ಬಿದ್ದಾಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಬೇಡಿಕೆಯ ಹಿನ್ನೆಲೆಯಲ್ಲಿ ಬೇರೆ ಗ್ರಾಮಕ್ಕೆ ಮಂಜೂರಾಗಿದ್ದ ಆಸ್ಪತ್ರೆಯನ್ನು ದೊಡ್ಡ ಗ್ರಾಮವಾದ ವಳಗೆರೆಹಳ್ಳಿಯಲ್ಲಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.</p>.<p>ಗ್ರಾ.ಪಂ, ಸದಸ್ಯರಾದ ಎಸ್.ದಯಾನಂದ್, ವಿ.ಆರ್.ಸುನೀಲ್, ವಿ.ಎಚ್.ಶಿವಲಿಂಗಯ್ಯ, ಎಸ್.ಕೆ.ಗಿರೀಶ್, ಕಾಂಗ್ರೆಸ್ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಶಂಕರೇಗೌಡ, ಮುಖಂಡರಾದ ಉಮಾಶಂಕರ್, ಟಿ.ಪುಟ್ಟರಾಜು, ಶ್ರೀನಿವಾಸ್ಕುಮಾರ್, ವಿ.ಕೆ.ಗಿರೀಶ್, ಆದೇಶ್, ಸೋ.ಶಿ.ಪ್ರಕಾಶ್, ಹೊಂಬಯ್ಯ, ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗೋವಿಂದ್, ಪಶು ವೈದ್ಯ ಡಾ.ಶಿವಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>