<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ A+ ಫಲಿತಾಂಶ ಪಡೆಯುವ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ತಲಾ ₹50 ಸಾವಿರ ನಗದು ಬಹುಮಾನ ನೀಡಿ ಅಭಿನಂದಿಸುತ್ತೇನೆ ಎಂದು ಶಾಸಕ ಪಿ.ಎಂ. ನರೇಂದ್ರಸ್ವಾಮಿ ಹೇಳಿದರು.</p><p>ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ವತಿಯಿಂದ ಶನಿವಾರ ಏರ್ಪಡಿಸಿರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ "ಸ್ಫೂರ್ತಿ ಸಿಂಚನ" ಪರೀಕ್ಷಾ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p><p>ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಮಳವಳ್ಳಿ ಶಾಲೆಗಳಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ ಎಂದರು.</p><p>ಉದ್ಯಮಗಳು ಶಿಕ್ಷಣದ ಜೊತೆಗೆ ಕೌಶಲ ಹೊಂದಿದ ಕಾರ್ಮಿಕರನ್ನು ಬಯಸುತ್ತಿವೆ. ನೀವು ಉತ್ತಮ ಅಂಕಗಳನ್ನು ಪಡೆಯದಿದ್ದರೆ ನಿರ್ದಿಷ್ಟ ಗುರಿ ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.</p><p>ಬುದ್ಧಿವಂತಿಕೆಯ ಮಾನದಂಡ ಅಳೆಯುವುದು ಎಸ್.ಎಸ್.ಎಲ್.ಸಿ. ಪರೀಕ್ಷೆ. ಒಂದು ತಿಂಗಳಲ್ಲಿ ದೊಡ್ಡ ಜವಾಬ್ದಾರಿ ಎದುರಿಸುತ್ತಿದ್ದೀರಿ. ಧೈರ್ಯದಿಂದ, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಯಾವುದೇ ಕಾರಣಕ್ಕೂ ಎದೆಗುಂದಬೇಡಿ ಎಂದು ಸಲಹೆ ನೀಡಿದರು.</p><p>ಮಳವಳ್ಳಿ ತಾಲ್ಲೂಕಿನಲ್ಲಿ 39 ಮಲ್ಟಿ ಮೀಡಿಯಾ ಸೆಂಟರ್ ಆರಂಭವಾಗಲಿವೆ. ಇದರ ಸದ್ಬಳಕೆ ಮಾಡಿಕೊಳ್ಳಿ ಎಂದರು.</p><p>ನೀವು ಉನ್ನತ ಶಿಕ್ಷಣ ಪಡೆದು, ಭವ್ಯ ಭಾರತದ ನಿರ್ಮಾತೃಗಳಾಗಿ. ಶಿಕ್ಷಕರಲ್ಲಿ ಹತ್ತಾರು ಸಂಘಟನೆಗಳಾಗಿವೆ. ರಾಜಕಾರಣ, ಗುಂಪುಗಾರಿಕೆ ಬಿಟ್ಟು ಉತ್ತಮ ಬೋಧನೆ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ A+ ಫಲಿತಾಂಶ ಪಡೆಯುವ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ತಲಾ ₹50 ಸಾವಿರ ನಗದು ಬಹುಮಾನ ನೀಡಿ ಅಭಿನಂದಿಸುತ್ತೇನೆ ಎಂದು ಶಾಸಕ ಪಿ.ಎಂ. ನರೇಂದ್ರಸ್ವಾಮಿ ಹೇಳಿದರು.</p><p>ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ವತಿಯಿಂದ ಶನಿವಾರ ಏರ್ಪಡಿಸಿರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ "ಸ್ಫೂರ್ತಿ ಸಿಂಚನ" ಪರೀಕ್ಷಾ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p><p>ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಮಳವಳ್ಳಿ ಶಾಲೆಗಳಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ ಎಂದರು.</p><p>ಉದ್ಯಮಗಳು ಶಿಕ್ಷಣದ ಜೊತೆಗೆ ಕೌಶಲ ಹೊಂದಿದ ಕಾರ್ಮಿಕರನ್ನು ಬಯಸುತ್ತಿವೆ. ನೀವು ಉತ್ತಮ ಅಂಕಗಳನ್ನು ಪಡೆಯದಿದ್ದರೆ ನಿರ್ದಿಷ್ಟ ಗುರಿ ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.</p><p>ಬುದ್ಧಿವಂತಿಕೆಯ ಮಾನದಂಡ ಅಳೆಯುವುದು ಎಸ್.ಎಸ್.ಎಲ್.ಸಿ. ಪರೀಕ್ಷೆ. ಒಂದು ತಿಂಗಳಲ್ಲಿ ದೊಡ್ಡ ಜವಾಬ್ದಾರಿ ಎದುರಿಸುತ್ತಿದ್ದೀರಿ. ಧೈರ್ಯದಿಂದ, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಯಾವುದೇ ಕಾರಣಕ್ಕೂ ಎದೆಗುಂದಬೇಡಿ ಎಂದು ಸಲಹೆ ನೀಡಿದರು.</p><p>ಮಳವಳ್ಳಿ ತಾಲ್ಲೂಕಿನಲ್ಲಿ 39 ಮಲ್ಟಿ ಮೀಡಿಯಾ ಸೆಂಟರ್ ಆರಂಭವಾಗಲಿವೆ. ಇದರ ಸದ್ಬಳಕೆ ಮಾಡಿಕೊಳ್ಳಿ ಎಂದರು.</p><p>ನೀವು ಉನ್ನತ ಶಿಕ್ಷಣ ಪಡೆದು, ಭವ್ಯ ಭಾರತದ ನಿರ್ಮಾತೃಗಳಾಗಿ. ಶಿಕ್ಷಕರಲ್ಲಿ ಹತ್ತಾರು ಸಂಘಟನೆಗಳಾಗಿವೆ. ರಾಜಕಾರಣ, ಗುಂಪುಗಾರಿಕೆ ಬಿಟ್ಟು ಉತ್ತಮ ಬೋಧನೆ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>