<p><strong>ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ):</strong> ‘ಸರ್ಕಾರಿ ಜಮೀನು ಸಾಬ್ರುಗೆ ಬರೆದುಕೊಟ್ಟರೆ ನೇಣಿಗೆ ಹಾಕುತ್ತೇನೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಅವರು ಅಧಿಕಾರಿಗಳಿಗೆ ನೀಡಿರುವ ಎಚ್ಚರಿಕೆಯ ಮಾತು ಚರ್ಚೆಗೆ ಗ್ರಾಸವಾಗಿದೆ. </p>.<p>ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ಜೂ.19ರಂದು ನಾಲೆ ಅಭಿವೃದ್ಧಿ ಹಾಗೂ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಅವರು ಹೀಗೆ ಹೇಳಿದ್ದರು. ಈ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. </p>.<p>‘ದರಖಾಸ್ತು ಜಮೀನು ಉಳುಮೆ ಮಾಡುತ್ತಿರುವ ತಾಲ್ಲೂಕಿನ ಅರ್ಹ ರೈತರಿಗೆ ಸಾಗುವಳಿ ಪತ್ರ ಕೊಡುವವರೆಗೆ ಸರ್ಕಾರಿ ಜಮೀನಿಗೆ ಬೇಲಿ ಹಾಕಲು ಯಾರಿಗೂ ಅವಕಾಶ ನೀಡಬಾರದು’ ಎಂದೂ ಹೇಳಿರುವುದು ಆ ವಿಡಿಯೊದಲ್ಲಿದೆ.</p>.<p>ಈ ಕುರಿತು ಸೋಮವಾರ ಸ್ಪಷ್ಟನೆ ನೀಡಿರುವ ರಮೇಶ ಬಂಡಿಸಿದ್ದೇಗೌಡ, ‘ಮೈಸೂರಿನ ಕೆಲವು ಶ್ರೀಮಂತ ಮುಸಲ್ಮಾನರು ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನನ್ನು ಅತಿಕ್ರಮಿಸುತ್ತಿದ್ದಾರೆ ಎಂದು ವ್ಯಾಪಕ ದೂರುಗಳು ಬಂದಿವೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ದೂರುಗಳನ್ನೂ ನೀಡಿದ್ದಾರೆ. ಆ ಬಗ್ಗೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಹೇಳಿದ್ದೇನೆ. ಸರ್ಕಾರಿ ಜಮೀನು ಅತಿಕ್ರಮ ತಡೆಯಿರಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದನ್ನು ಪ್ರಮಾದ ಎಂಬಂತೆ ಬಿಂಬಿಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ):</strong> ‘ಸರ್ಕಾರಿ ಜಮೀನು ಸಾಬ್ರುಗೆ ಬರೆದುಕೊಟ್ಟರೆ ನೇಣಿಗೆ ಹಾಕುತ್ತೇನೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಅವರು ಅಧಿಕಾರಿಗಳಿಗೆ ನೀಡಿರುವ ಎಚ್ಚರಿಕೆಯ ಮಾತು ಚರ್ಚೆಗೆ ಗ್ರಾಸವಾಗಿದೆ. </p>.<p>ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ಜೂ.19ರಂದು ನಾಲೆ ಅಭಿವೃದ್ಧಿ ಹಾಗೂ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಅವರು ಹೀಗೆ ಹೇಳಿದ್ದರು. ಈ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. </p>.<p>‘ದರಖಾಸ್ತು ಜಮೀನು ಉಳುಮೆ ಮಾಡುತ್ತಿರುವ ತಾಲ್ಲೂಕಿನ ಅರ್ಹ ರೈತರಿಗೆ ಸಾಗುವಳಿ ಪತ್ರ ಕೊಡುವವರೆಗೆ ಸರ್ಕಾರಿ ಜಮೀನಿಗೆ ಬೇಲಿ ಹಾಕಲು ಯಾರಿಗೂ ಅವಕಾಶ ನೀಡಬಾರದು’ ಎಂದೂ ಹೇಳಿರುವುದು ಆ ವಿಡಿಯೊದಲ್ಲಿದೆ.</p>.<p>ಈ ಕುರಿತು ಸೋಮವಾರ ಸ್ಪಷ್ಟನೆ ನೀಡಿರುವ ರಮೇಶ ಬಂಡಿಸಿದ್ದೇಗೌಡ, ‘ಮೈಸೂರಿನ ಕೆಲವು ಶ್ರೀಮಂತ ಮುಸಲ್ಮಾನರು ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನನ್ನು ಅತಿಕ್ರಮಿಸುತ್ತಿದ್ದಾರೆ ಎಂದು ವ್ಯಾಪಕ ದೂರುಗಳು ಬಂದಿವೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ದೂರುಗಳನ್ನೂ ನೀಡಿದ್ದಾರೆ. ಆ ಬಗ್ಗೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಹೇಳಿದ್ದೇನೆ. ಸರ್ಕಾರಿ ಜಮೀನು ಅತಿಕ್ರಮ ತಡೆಯಿರಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದನ್ನು ಪ್ರಮಾದ ಎಂಬಂತೆ ಬಿಂಬಿಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>