<p><strong>ಮಂಡ್ಯ:</strong> ‘ತಾಲ್ಲೂಕಿನ 175 ಹಳ್ಳಿಗಳ ಪ್ರತಿ ಮನೆಗೂ ಶುದ್ಧ ಕಾವೇರಿ ನೀರು ಸರಬರಾಜು ಮಾಡಲಾಗುವುದು’ ಎಂದು ಶಾಸಕ ರವಿಕುಮಾರ್ಗೌಡ ಗಣಿಗ ಹೇಳಿದರು.</p>.<p>ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನ ಹೊಸಬೂದನೂರು ಗ್ರಾಮದಲ್ಲಿ ಕೊಳಾಯಿ ಸಂಪರ್ಕ ಕಲ್ಪಿಸಿ, ಮನೆ ಮನೆಗೆ ನೀರೊದಗಿಸುವ(ಜೆಜೆಎಂ)ಕಾಮಗಾರಿಗೆ ಭೂಮಿಪೂಜೆ ಮಾಡಲಾಗಿದ್ದು, ₹1.5 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತರುವಾಯ ಕುಂಠಿತಗೊಂಡಿದ್ದ ಕಾಮಗಾರಿಗಳು ವೇಗ ಪಡೆದುಕೊಳ್ಳುತ್ತಿವೆ’ ಎಂದರು.</p>.<p>ಬಳಿಕ ಕೆರೆಯಂಗಳದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಆಯೋಜಿಸಿದ್ದ 1 ಎಕರೆ ನಿವೇಶನದಲ್ಲಿ ವಿಷನ್ ವಾತ್ಯಲ್ಯ ಯೋಜನೆಯಡಿ ಬಾಲಮಂದಿರಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಸತಿ ಗೃಹ ನಿರ್ಮಿಸಲು ಅನುವಾಗುವಂತೆ ಖಾಲಿ ನಿವೇಶನಕ್ಕೆ ಕಾಂಪೌಂಡ್ ನಿರ್ಮಾಣಕ್ಕೆ ₹49.5 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು. ಇದೇ ಜಾಗದಲ್ಲಿ ಹೊಸ ಬೋರ್ವೆಲ್, ಪೈಪ್ಲೈನ್ ನಿರ್ಮಾಣ ಹಾಗೂ ನೀರು ಸರಬರಾಜು ಕಾಮಗಾರಿಗೆ ₹9.16 ಲಕ್ಷ ವೆಚ್ಚದಲ್ಲಿ ಚಾಲನೆ ನೀಡಿರುವುದಾಗಿ ತಿಳಿಸಿದರು.</p>.<p>ಮನ್ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಕುಮಾರ್, ಹೊಸಬೂದನೂರು ಗ್ರಾ.ಪಂ. ಅಧ್ಯಕ್ಷೆ ಮಾನಸಾ, ಉಪಾಧ್ಯಕ್ಷೆ ಜಯಲಕ್ಷ್ಮಿ, ಸದಸ್ಯರಾದ ಕೆಂಪೇಗೌಡ, ಕುಮಾರ್, ಆರ್ಎಪಿಸಿಎಂಎಸ್ ಅಧ್ಯಕ್ಷ ಉಮ್ಮಡಹಳ್ಳಿ ಶೇಖರ್, ನಗರಸಭಾ ಸದಸ್ಯ ಜಾಕೀರ್ಪಾಷಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು, ಕೆ.ಆರ್.ಐಡಿ.ಎಲ್ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ತಾಲ್ಲೂಕಿನ 175 ಹಳ್ಳಿಗಳ ಪ್ರತಿ ಮನೆಗೂ ಶುದ್ಧ ಕಾವೇರಿ ನೀರು ಸರಬರಾಜು ಮಾಡಲಾಗುವುದು’ ಎಂದು ಶಾಸಕ ರವಿಕುಮಾರ್ಗೌಡ ಗಣಿಗ ಹೇಳಿದರು.</p>.<p>ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನ ಹೊಸಬೂದನೂರು ಗ್ರಾಮದಲ್ಲಿ ಕೊಳಾಯಿ ಸಂಪರ್ಕ ಕಲ್ಪಿಸಿ, ಮನೆ ಮನೆಗೆ ನೀರೊದಗಿಸುವ(ಜೆಜೆಎಂ)ಕಾಮಗಾರಿಗೆ ಭೂಮಿಪೂಜೆ ಮಾಡಲಾಗಿದ್ದು, ₹1.5 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತರುವಾಯ ಕುಂಠಿತಗೊಂಡಿದ್ದ ಕಾಮಗಾರಿಗಳು ವೇಗ ಪಡೆದುಕೊಳ್ಳುತ್ತಿವೆ’ ಎಂದರು.</p>.<p>ಬಳಿಕ ಕೆರೆಯಂಗಳದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಆಯೋಜಿಸಿದ್ದ 1 ಎಕರೆ ನಿವೇಶನದಲ್ಲಿ ವಿಷನ್ ವಾತ್ಯಲ್ಯ ಯೋಜನೆಯಡಿ ಬಾಲಮಂದಿರಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಸತಿ ಗೃಹ ನಿರ್ಮಿಸಲು ಅನುವಾಗುವಂತೆ ಖಾಲಿ ನಿವೇಶನಕ್ಕೆ ಕಾಂಪೌಂಡ್ ನಿರ್ಮಾಣಕ್ಕೆ ₹49.5 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು. ಇದೇ ಜಾಗದಲ್ಲಿ ಹೊಸ ಬೋರ್ವೆಲ್, ಪೈಪ್ಲೈನ್ ನಿರ್ಮಾಣ ಹಾಗೂ ನೀರು ಸರಬರಾಜು ಕಾಮಗಾರಿಗೆ ₹9.16 ಲಕ್ಷ ವೆಚ್ಚದಲ್ಲಿ ಚಾಲನೆ ನೀಡಿರುವುದಾಗಿ ತಿಳಿಸಿದರು.</p>.<p>ಮನ್ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಕುಮಾರ್, ಹೊಸಬೂದನೂರು ಗ್ರಾ.ಪಂ. ಅಧ್ಯಕ್ಷೆ ಮಾನಸಾ, ಉಪಾಧ್ಯಕ್ಷೆ ಜಯಲಕ್ಷ್ಮಿ, ಸದಸ್ಯರಾದ ಕೆಂಪೇಗೌಡ, ಕುಮಾರ್, ಆರ್ಎಪಿಸಿಎಂಎಸ್ ಅಧ್ಯಕ್ಷ ಉಮ್ಮಡಹಳ್ಳಿ ಶೇಖರ್, ನಗರಸಭಾ ಸದಸ್ಯ ಜಾಕೀರ್ಪಾಷಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು, ಕೆ.ಆರ್.ಐಡಿ.ಎಲ್ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>