ಸೋಮವಾರ, 4 ಆಗಸ್ಟ್ 2025
×
ADVERTISEMENT
ADVERTISEMENT

KRS ಡ್ಯಾಂ ತುಂಬಿದರೂ ಕೆರೆ–ಕಟ್ಟೆಗೆ ನೀರಿಲ್ಲ: ಶಾಸಕ ನರೇಂದ್ರಸ್ವಾಮಿ ಅಸಮಾಧಾನ

Published : 3 ಆಗಸ್ಟ್ 2025, 3:18 IST
Last Updated : 3 ಆಗಸ್ಟ್ 2025, 3:18 IST
ಫಾಲೋ ಮಾಡಿ
Comments
ಆರ್‌ಟಿಐ ಹೆಸರಿನಲ್ಲಿ ಕೆಲವು ವ್ಯಕ್ತಿಗಳು ಮಹಿಳಾ ಅಧಿಕಾರಿಗಳಿಗೆ ಕಿರುಕುಳ ನೀಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಇಂಥವರ ವಿರುದ್ಧ ಎಸ್ಪಿ ಅವರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು
– ಪಿ.ಎಂ.ನರೇಂದ್ರಸ್ವಾಮಿ ಮಳವಳ್ಳಿ ಶಾಸಕ
ಮೈಸೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್‌ ರಸ್ತೆಗಳಲ್ಲಿ ಅಪಘಾತ ಹೆಚ್ಚಾಗುತ್ತಿವೆ. ಸರ್ವಿಸ್‌ ರಸ್ತೆಗಳಿಗೂ ಸಿಸಿವಿಟಿ ಕ್ಯಾಮೆರಾ ಹಾಕಿಸಿ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಿ
– ರಮೇಶ ಬಂಡಿಸಿದ್ದೇಗೌಡ ಶ್ರೀರಂಗಪಟ್ಟಣ ಶಾಸಕ
‘ಕೃತಕ ಅಭಾವ ಸೃಷ್ಟಿಸಿದರೆ ಕ್ರಮ’
ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ. ಆದರೆ ಕೃತಕ ಅಭಾವ ಸೃಷ್ಟಿಸುವ ಸಾಧ್ಯತೆ ಇರುತ್ತದೆ. ರಸಗೊಬ್ಬರ ಮಾರಾಟ ಸೊಸೈಟಿ ಹಾಗೂ ಮಾರಾಟಗಾರರು ದಾಸ್ತಾನು ವಿವರಗಳ ಬಗ್ಗೆ ಫಲಕ ಪ್ರದರ್ಶಿಸಬೇಕು. ಯಾವುದೇ ಅಕ್ರಮ ದಾಸ್ತಾನು ಕಂಡುಬಂದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.
ಆಹಾರ ಸಾಮಗ್ರಿ ವಿಳಂಬ: ಕಪ್ಪುಪಟ್ಟಿಗೆ ಸೇರಿಸಿ’
‘ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಿಗೆ ತಿಂಗಳ ಕೊನೆಯಲ್ಲಿ ಆಹಾರ ಸಾಮಗ್ರಿ ವಿತರಣೆಯಾಗುತ್ತಿದ್ದು ಇದರಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತದೆ. ತಿಂಗಳ 5 ತಾರೀಖಿನೊಳಗೆ ಸರಬರಾಜು ಆಗಬೇಕು. ಟೆಂಡರ್‌ದಾರರು ಸರಿಯಾದ ಸಮಯಕ್ಕೆ ಸರಬರಾಜು ಮಾಡದಿದ್ದಲ್ಲಿ ‘ಕಪ್ಪುಪಟ್ಟಿ’ಗೆ ಸೇರಿಸಿ ಎಂದು ಸಚಿವರು ಸೂಚಿಸಿದರು.  ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಕೃಷ್ಣಕುಮಾರ್‌ ಮಾತನಾಡಿ ‘ಬೆಂಗಳೂರು ಮತ್ತು ಮೈಸೂರು ಕಡೆಯಿಂದ ಬಂದು ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತ ಅಕ್ಕಿ ಸಾಗಣೆ ಮಾಡುತ್ತಿದ್ದವರನ್ನು ಬಂಧಿಸಿ ₹20 ಲಕ್ಷ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದೇವೆ. ಮೂರು ಪ್ರಕರಣಗಳು ದಾಖಲಾಗಿವೆ’ ಎಂದು ಸಭೆಗೆ ಮಾಹಿತಿ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT