ಅದೇ ರೀತಿ ಚುನಾವಣಾ ಆಯೋಗ ಕಡಿವಾಣ ಹಾಕಲು ಮುಂದಾಗ ಬೇಕು. ಆರೋಗ್ಯಕರ ಸಮಾಜಕ್ಕೆ ಲಿಂಗ ಸಂವೇದನೆ ಮುಖ್ಯ, ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂಬುದನ್ನು ಅರಿಯಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ಚರ್ಚೆ ಅತ್ಯವಶ್ಯಕ, ಟೀಕೆ ಇರಲಿ, ಆದರೆ, ರಾಜಕಾರಣಿಗಳ ನಡೆ-ನುಡಿ ಮಾದರಿಯಾಗಿರಬೇಕೇ ಹೊರತು ಸಾರ್ವಜನಿಕ ಚರ್ಚೆಗೆ ಆಹಾರವಾಗಬಾರದು ಎಂದು ಸಲಹೆ ನೀಡಿದ್ದಾರೆ.