<p><strong>ನಾಗಮಂಗಲ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಆದಿಚುಂಚನಗಿರಿ ಮಠದ 71ನೇ ಪೀಠಾಧಿಪತಿ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆ ಇರುವ ‘ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ನರೇಂದ್ರ ಮೋದಿ ಏ.15ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.</p><p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆಗೆ ಸಂಬಂಧಿಸಿದಂತೆ ಧಾರ್ಮಿಕ ವಿಧಿವಿಧಾನಗಳು ಪ್ರಾಣ ಪ್ರತಿಷ್ಠಾಪನಾ ಕಾರ್ಯ ಪೂಜಾ ಕೈಂಕರ್ಯಗಳು ಸಂಪನ್ನಗೊಂಡಿವೆ ಎಂದರು. </p><p>ಪ್ರಧಾನಿ ಮೋದಿ ಅವರು ಏ.15ರಂದು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕ್ಷೇತ್ರದ ತಪೋವನಕ್ಕೆ ಬೆಳಿಗ್ಗೆ 10ಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಗುರು ಗೋರಖ್ ನಾಥರು ತಪಸ್ಸು ಮಾಡಿದ್ದ ಜ್ವಾಲಾಪೀಠ (ಉರಿಗದ್ದುಗೆ) ದರ್ಶನ ಮಾಡಲಿದ್ದಾರೆ. ಕ್ಷೇತ್ರಪಾಲಕ ಕಾಲಭೈರವನಿಗೆ ಮಂಗಳಾರತಿ ಸಲ್ಲಿಸಿ ನಂತರ ಮಂದಿರ ಉದ್ಘಾಟಿಸಿ ವೇದಿಕೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. </p><p><strong>ನವಿಲಿಗೆ ಸಂಬಂಧಿಸಿದ ಕಾಣಿಕೆ</strong></p><p>ನಮ್ಮ ಕ್ಷೇತ್ರವನ್ನು ‘ಮಯೂರ ವನ’ ಎಂದು ಕರೆಯುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ಪ್ರಧಾನಿಯವರಿಗೆ ನವಿಲಿಗೆ ಸಂಬಂಧಿಸಿದ ಕಾಣಿಕೆ ನೀಡುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದರು.</p><p>ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಗೆ ‘ಭಾರತ ರತ್ನ’ ಪ್ರಶಸ್ತಿ ಬಗ್ಗೆ ಚರ್ಚಿಸಲಾಗುವುದೇ ಎಂಬ ಮಾಧ್ಯಮದವರ ಪ್ರಶ್ನೆಗೆ ‘ಪ್ರಧಾನಿಯವರು ಆಗಮಿಸುತ್ತಿರುವುದು ಒಂದು ಪವಿತ್ರ ಧಾರ್ಮಿಕ ಕಾರ್ಯಕ್ಕೆ. ಇಂತಹ ಸಂದರ್ಭದಲ್ಲಿ ಯಾವುದೇ ಬೇಡಿಕೆಗಳನ್ನು ಪ್ರಸ್ತಾಪಿಸುವುದಿಲ್ಲ’ ಎಂದು ಶ್ರೀಗಳು ಸ್ಪಷ್ಟಪಡಿಸಿದರು.</p><p><strong>5 ಗಂಟೆ ಸಾರ್ವಜನಿಕರಿಗೆ ನಿರ್ಬಂಧ</strong></p><p>ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರಕ್ಕೆ ಏ.15ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಸಾರ್ವಜನಿಕರಿಗೆ ನಿರ್ಬಂಧ ಇರುತ್ತದೆ. ಹೀಗಾಗಿ ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರುವ ಭಕ್ತರು ಬೆಳಿಗ್ಗೆ 9 ಗಂಟೆಯೊಳಗೆ ಬರಬೇಕು ಎಂದು ತಿಳಿಸಿದರು. ಮೋದಿಯವರ ನಿರ್ಗಮನದ ನಂತರ ದೇವಾಲಯ ಹಾಗೂ ಗುರು ಭೈರವೈಕ್ಯ ಮಂದಿರಕ್ಕೆ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗುತ್ತದೆ ಎಂದರು.</p><p>ಕಾರ್ಯಕ್ರಮದಲ್ಲಿ 1.5 ಲಕ್ಷಕ್ಕೂ ಹೆಚ್ಚು ಭಕ್ತರು ಸೇರುವ ನಿರೀಕ್ಷೆ ಇದೆ. ಎಲ್ಲರಿಗೂ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿದೆ ಎಂದರು.</p><p>ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಪಾಲ್ಗೊಳ್ಳಲಿದ್ದಾರೆ. </p><p>ಪತ್ರಿಕಾಗೋಷ್ಠಿಯಲ್ಲಿ ಪ್ರಸನ್ನನಾಥ ಸ್ವಾಮೀಜಿ ಇದ್ದರು.</p>.<p><strong>‘₹80 ಕೋಟಿ ಮೊತ್ತದ ಭವ್ಯ ಮಂದಿರ’</strong></p><p>ಗುರು ಭೈರವೈಕ್ಯ ಮಂದಿರದ ನಿರ್ಮಾಣಕ್ಕೆ ಅಂದಾಜು ₹80 ಕೋಟಿ ವೆಚ್ಚವಾಗಿದೆ. ದೇವಾಲಯ ನಿರ್ಮಾಣಕ್ಕೆ ಮೂರು ಬಗೆಯ ಕಲ್ಲುಗಳನ್ನು ಬಳಸಲಾಗಿದೆ. ದೇಗುಲದ ಹೊರಭಾಗಕ್ಕೆ ವಿಧಾನಸೌಧ ನಿರ್ಮಾಣಕ್ಕೆ ಬಳಸಲಾಗಿರುವ ಮಾದರಿಯ ಕಲ್ಲು, ಗರ್ಭಗುಡಿಗೆ ಇಳಕಲ್ನಿಂದ ತರಿಸಿರುವ ಕಲ್ಲನ್ನು ಬಳಸಲಾಗಿದೆ. ಇನ್ನುಳಿದಂತೆ ದೇಗುಲದ ನಿರ್ಮಾಣದಲ್ಲಿ ಸಂತೆಕಲ್ನಿಂದ ತರಿಸಲಾಗಿರುವ ಕಲ್ಲನ್ನು ಬಳಸಲಾಗಿದೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಮಾಹಿತಿ ನೀಡಿದರು.</p>.ದಕ್ಷಿಣದ ಜನಸಂಖ್ಯೆ ಕುಸಿತ: ಸಣ್ಣದಲ್ಲ ಈ ಸವಾಲು.ಒಳನೋಟ | ಕಾಣದ ಕೈ: ಕಾಡುವ ಡ್ರಗ್ಸ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಆದಿಚುಂಚನಗಿರಿ ಮಠದ 71ನೇ ಪೀಠಾಧಿಪತಿ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆ ಇರುವ ‘ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ನರೇಂದ್ರ ಮೋದಿ ಏ.15ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.</p><p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆಗೆ ಸಂಬಂಧಿಸಿದಂತೆ ಧಾರ್ಮಿಕ ವಿಧಿವಿಧಾನಗಳು ಪ್ರಾಣ ಪ್ರತಿಷ್ಠಾಪನಾ ಕಾರ್ಯ ಪೂಜಾ ಕೈಂಕರ್ಯಗಳು ಸಂಪನ್ನಗೊಂಡಿವೆ ಎಂದರು. </p><p>ಪ್ರಧಾನಿ ಮೋದಿ ಅವರು ಏ.15ರಂದು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕ್ಷೇತ್ರದ ತಪೋವನಕ್ಕೆ ಬೆಳಿಗ್ಗೆ 10ಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಗುರು ಗೋರಖ್ ನಾಥರು ತಪಸ್ಸು ಮಾಡಿದ್ದ ಜ್ವಾಲಾಪೀಠ (ಉರಿಗದ್ದುಗೆ) ದರ್ಶನ ಮಾಡಲಿದ್ದಾರೆ. ಕ್ಷೇತ್ರಪಾಲಕ ಕಾಲಭೈರವನಿಗೆ ಮಂಗಳಾರತಿ ಸಲ್ಲಿಸಿ ನಂತರ ಮಂದಿರ ಉದ್ಘಾಟಿಸಿ ವೇದಿಕೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. </p><p><strong>ನವಿಲಿಗೆ ಸಂಬಂಧಿಸಿದ ಕಾಣಿಕೆ</strong></p><p>ನಮ್ಮ ಕ್ಷೇತ್ರವನ್ನು ‘ಮಯೂರ ವನ’ ಎಂದು ಕರೆಯುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ಪ್ರಧಾನಿಯವರಿಗೆ ನವಿಲಿಗೆ ಸಂಬಂಧಿಸಿದ ಕಾಣಿಕೆ ನೀಡುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದರು.</p><p>ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಗೆ ‘ಭಾರತ ರತ್ನ’ ಪ್ರಶಸ್ತಿ ಬಗ್ಗೆ ಚರ್ಚಿಸಲಾಗುವುದೇ ಎಂಬ ಮಾಧ್ಯಮದವರ ಪ್ರಶ್ನೆಗೆ ‘ಪ್ರಧಾನಿಯವರು ಆಗಮಿಸುತ್ತಿರುವುದು ಒಂದು ಪವಿತ್ರ ಧಾರ್ಮಿಕ ಕಾರ್ಯಕ್ಕೆ. ಇಂತಹ ಸಂದರ್ಭದಲ್ಲಿ ಯಾವುದೇ ಬೇಡಿಕೆಗಳನ್ನು ಪ್ರಸ್ತಾಪಿಸುವುದಿಲ್ಲ’ ಎಂದು ಶ್ರೀಗಳು ಸ್ಪಷ್ಟಪಡಿಸಿದರು.</p><p><strong>5 ಗಂಟೆ ಸಾರ್ವಜನಿಕರಿಗೆ ನಿರ್ಬಂಧ</strong></p><p>ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರಕ್ಕೆ ಏ.15ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಸಾರ್ವಜನಿಕರಿಗೆ ನಿರ್ಬಂಧ ಇರುತ್ತದೆ. ಹೀಗಾಗಿ ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರುವ ಭಕ್ತರು ಬೆಳಿಗ್ಗೆ 9 ಗಂಟೆಯೊಳಗೆ ಬರಬೇಕು ಎಂದು ತಿಳಿಸಿದರು. ಮೋದಿಯವರ ನಿರ್ಗಮನದ ನಂತರ ದೇವಾಲಯ ಹಾಗೂ ಗುರು ಭೈರವೈಕ್ಯ ಮಂದಿರಕ್ಕೆ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗುತ್ತದೆ ಎಂದರು.</p><p>ಕಾರ್ಯಕ್ರಮದಲ್ಲಿ 1.5 ಲಕ್ಷಕ್ಕೂ ಹೆಚ್ಚು ಭಕ್ತರು ಸೇರುವ ನಿರೀಕ್ಷೆ ಇದೆ. ಎಲ್ಲರಿಗೂ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿದೆ ಎಂದರು.</p><p>ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಪಾಲ್ಗೊಳ್ಳಲಿದ್ದಾರೆ. </p><p>ಪತ್ರಿಕಾಗೋಷ್ಠಿಯಲ್ಲಿ ಪ್ರಸನ್ನನಾಥ ಸ್ವಾಮೀಜಿ ಇದ್ದರು.</p>.<p><strong>‘₹80 ಕೋಟಿ ಮೊತ್ತದ ಭವ್ಯ ಮಂದಿರ’</strong></p><p>ಗುರು ಭೈರವೈಕ್ಯ ಮಂದಿರದ ನಿರ್ಮಾಣಕ್ಕೆ ಅಂದಾಜು ₹80 ಕೋಟಿ ವೆಚ್ಚವಾಗಿದೆ. ದೇವಾಲಯ ನಿರ್ಮಾಣಕ್ಕೆ ಮೂರು ಬಗೆಯ ಕಲ್ಲುಗಳನ್ನು ಬಳಸಲಾಗಿದೆ. ದೇಗುಲದ ಹೊರಭಾಗಕ್ಕೆ ವಿಧಾನಸೌಧ ನಿರ್ಮಾಣಕ್ಕೆ ಬಳಸಲಾಗಿರುವ ಮಾದರಿಯ ಕಲ್ಲು, ಗರ್ಭಗುಡಿಗೆ ಇಳಕಲ್ನಿಂದ ತರಿಸಿರುವ ಕಲ್ಲನ್ನು ಬಳಸಲಾಗಿದೆ. ಇನ್ನುಳಿದಂತೆ ದೇಗುಲದ ನಿರ್ಮಾಣದಲ್ಲಿ ಸಂತೆಕಲ್ನಿಂದ ತರಿಸಲಾಗಿರುವ ಕಲ್ಲನ್ನು ಬಳಸಲಾಗಿದೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಮಾಹಿತಿ ನೀಡಿದರು.</p>.ದಕ್ಷಿಣದ ಜನಸಂಖ್ಯೆ ಕುಸಿತ: ಸಣ್ಣದಲ್ಲ ಈ ಸವಾಲು.ಒಳನೋಟ | ಕಾಣದ ಕೈ: ಕಾಡುವ ಡ್ರಗ್ಸ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>