ಮಂಡ್ಯ: ’ಬೇಬಿಬೆಟ್ಟವೊಂದರಲ್ಲೇ 500 ಕ್ರಷರ್ಗಳು ಅಕ್ರಮವಾಗಿ ಚಟುವಟಿಕೆ ನಡೆಸುತ್ತಿವೆ. ಸ್ಥಳೀಯ ಪ್ರಭಾವಿಗಳು 2–3 ಎಕರೆಯಲ್ಲಿ ಅನುಮತಿ ಪಡೆದು ನೂರಾರು ಎಕರೆಯಲ್ಲಿ ಕಲ್ಲು ಸ್ಫೋಟ ನಡೆಸುತ್ತಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
‘ನಿಷೇಧದ ನಡುವೆಯೂ ಗಣಿಗಾರಿಕೆ ವ್ಯಾಪಕವಾಗಿದ್ದು, ಕೆಆರ್ಎಸ್ ಜಲಾಶಯ ಬಿರುಕು ಬಿಟ್ಟಿದೆ ಎಂದು ಮಂಡ್ಯ ಸಂಸದೆ ಸುಮಲತಾ ಹೇಳಿಕೆ ನೀಡಿದ ನಂತರ ಈಗ ಗಣಿಗಾರಿಕೆ ನಿಲ್ಲಿಸಲಾಗಿದೆ’ ಎಂದು ಬೇಬಿಬೆಟ್ಟ ಉಳಿಸಿ ಹೋರಾಟ ಸಮಿತಿ ಸದಸ್ಯರು ತಿಳಿಸಿದರು.