15 ಮಂದಿ ಹಲಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗ್ರಾಮಕ್ಕೆ ಮರಳಿದ್ದರು. ನಂತರ 50ಕ್ಕೂ ಹೆಚ್ಚು ಮಂದಿ ವಾಂತಿ– ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ತೆರಳಿದರು. ಗ್ರಾಮಸ್ಥರು ಅಸ್ವಸ್ಥಗೊಂಡಿರುವ ಸುದ್ದಿ ತಿಳಿದ ಮಳವಳ್ಳಿ ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಹಾಗೂ ತಂಡ ಗ್ರಾಮಕ್ಕೆ ತೆರಳಿ, ಸರ್ಕಾರಿ ಶಾಲೆ ಆವರಣದಲ್ಲಿ ಚಿಕಿತ್ಸೆ ನೀಡಿದರು.