<p><strong>ಮಂಡ್ಯ:</strong> ಮೈಸೂರು ಸಂಸದ ಪ್ರತಾಪಸಿಂಹ ಅವರು ನಗರದ ಕೆಎಚ್ಬಿ ಬಡಾವಣೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಿವಾಸಿಗಳಿಂದ ಮನವಿ ಸ್ವೀಕರಿಸಿದರು.</p>.<p>ಈ ಸಂದರ್ಭದಲ್ಲಿ ಅಲ್ಲಿನ ನಿವಾಸಿಗಳು ರಸ್ತೆ ದುರಸ್ತಿ ಸೇರಿದಂತೆ ಸೇತುವೆ ಕಾಮಗಾರಿಯ ಬಗ್ಗೆಯೂ ಮನವಿ ನೀಡಿ ಗಮನಕ್ಕೆ ತರಲಾಯಿತು.ನಗರದ ಚಿಕ್ಕಮಂಡ್ಯ ಕೆ.ಎಚ್.ಬಿ. ಬಡಾವಣೆಯಲ್ಲಿನ ದ್ವಿ ಪಥ ರಸ್ತೆಯನ್ನು ದುರಸ್ತಿ ಮಾಡಿಸುವುದಾಗಿ ಪ್ರತಾಪಸಿಂಹ ಅವರು ಭರವಸೆ ನೀಡಿದರು.</p>.<p>ಮೈಸೂರು– ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕಾರಣ ಭರ್ತಿ ತುಂಬಿದ ಲಾರಿಗಳು ಸಾಮಗ್ರಿಯನ್ನು ಇದೇ ರಸ್ತೆಯಲ್ಲಿ ಸಾಗಿಸುತ್ತಿದ್ದರಿಂದ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ದೂರಿದರು. ಶೀಘ್ರದಲ್ಲೇ ರಸ್ತೆ ದುರಸ್ತಿಗೆ ಕ್ರಮ ವಹಿಸುವ ಭರವಸೆ ನೀಡಿದರು.</p>.<p>ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಪ್ರತಾಪ ಸಿಂಹ ಅವರು, ರಸ್ತೆ ದುರಸ್ತಿ ಹಾಗೂ ನಾಲಾ ಏರಿಯನ್ನು ಎತ್ತರಿಸುವಂತೆ ಸೂಚಿಸಿದರು. ಬಡಾವಣೆಯ ಮಧ್ಯೆ ಹಾದು ಹೋಗುವ ದೊಡ್ಡ ಹಳ್ಳವನ್ನು ಸ್ವಚ್ಛ ಗೊಳಿಸಲು ಸೂಚನೆ ನೀಡಿದರು.</p>.<p>ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ, ಕೆ.ಎಚ್.ಬಿ.ಹಿತರಕ್ಷಣಾ ಸಮಿತಿ ಅಧ್ಯಕ್ಷ ಗೋವಿಂದರಾಜು, ಕಾರ್ಯದರ್ಶಿ ಕೆ.ಅಶೋಕ್, ಸಮಿತಿ ಸದಸ್ಯರಾದ ಹರೀಶ್ ಬಾಣಸವಾಡಿ, ರಾಜು, ಶ್ರೀಕಾಂತ್, ಜವರೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಮೈಸೂರು ಸಂಸದ ಪ್ರತಾಪಸಿಂಹ ಅವರು ನಗರದ ಕೆಎಚ್ಬಿ ಬಡಾವಣೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಿವಾಸಿಗಳಿಂದ ಮನವಿ ಸ್ವೀಕರಿಸಿದರು.</p>.<p>ಈ ಸಂದರ್ಭದಲ್ಲಿ ಅಲ್ಲಿನ ನಿವಾಸಿಗಳು ರಸ್ತೆ ದುರಸ್ತಿ ಸೇರಿದಂತೆ ಸೇತುವೆ ಕಾಮಗಾರಿಯ ಬಗ್ಗೆಯೂ ಮನವಿ ನೀಡಿ ಗಮನಕ್ಕೆ ತರಲಾಯಿತು.ನಗರದ ಚಿಕ್ಕಮಂಡ್ಯ ಕೆ.ಎಚ್.ಬಿ. ಬಡಾವಣೆಯಲ್ಲಿನ ದ್ವಿ ಪಥ ರಸ್ತೆಯನ್ನು ದುರಸ್ತಿ ಮಾಡಿಸುವುದಾಗಿ ಪ್ರತಾಪಸಿಂಹ ಅವರು ಭರವಸೆ ನೀಡಿದರು.</p>.<p>ಮೈಸೂರು– ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕಾರಣ ಭರ್ತಿ ತುಂಬಿದ ಲಾರಿಗಳು ಸಾಮಗ್ರಿಯನ್ನು ಇದೇ ರಸ್ತೆಯಲ್ಲಿ ಸಾಗಿಸುತ್ತಿದ್ದರಿಂದ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ದೂರಿದರು. ಶೀಘ್ರದಲ್ಲೇ ರಸ್ತೆ ದುರಸ್ತಿಗೆ ಕ್ರಮ ವಹಿಸುವ ಭರವಸೆ ನೀಡಿದರು.</p>.<p>ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಪ್ರತಾಪ ಸಿಂಹ ಅವರು, ರಸ್ತೆ ದುರಸ್ತಿ ಹಾಗೂ ನಾಲಾ ಏರಿಯನ್ನು ಎತ್ತರಿಸುವಂತೆ ಸೂಚಿಸಿದರು. ಬಡಾವಣೆಯ ಮಧ್ಯೆ ಹಾದು ಹೋಗುವ ದೊಡ್ಡ ಹಳ್ಳವನ್ನು ಸ್ವಚ್ಛ ಗೊಳಿಸಲು ಸೂಚನೆ ನೀಡಿದರು.</p>.<p>ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ, ಕೆ.ಎಚ್.ಬಿ.ಹಿತರಕ್ಷಣಾ ಸಮಿತಿ ಅಧ್ಯಕ್ಷ ಗೋವಿಂದರಾಜು, ಕಾರ್ಯದರ್ಶಿ ಕೆ.ಅಶೋಕ್, ಸಮಿತಿ ಸದಸ್ಯರಾದ ಹರೀಶ್ ಬಾಣಸವಾಡಿ, ರಾಜು, ಶ್ರೀಕಾಂತ್, ಜವರೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>