<p><strong>ಮಂಡ್ಯ:</strong> ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯ ಒದಗಿಸುವುದು ಕೇವಲ ಚುನಾವಣೆ ಆದ್ಯತೆ ಆಗಬಾರದು ಎಂದು ಮೈಸೂರು–ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಬೇಲೂರು ಗ್ರಾಮದಲ್ಲಿ ಸಾಯಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಭಾನುವಾರ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್, ನಾಡಪ್ರಭು ಕೆಂಪೇಗೌಡ, ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರನಾಥ ಸ್ವಾಮೀಜಿ ಅವರ ನೂತನ ಪಂಚರತ್ನ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈ ಐವರು ಮಹನೀಯರ ಇತಿಹಾಸ ನಮಗೆಲ್ಲಾ ದಾರಿದೀಪವಾಗಿದ್ದು, ಸಾಧನೆಯ ಹಾದಿಯಲ್ಲಿ ಸಾಗುವುದು ಮುಖ್ಯವಾಗಬೇಕು. ಇವರ ಕುರಿತು ಯುವಜನರು ಅಧ್ಯಯನ ನಡೆಸಬೇಕು. ಮಂಡ್ಯದ ದೇಶಕ್ಕೆ ಮಾದರಿಯಾಗಿರುವ ಮಹನೀಯರ ಆದರ್ಶಗಳು ಪ್ರಸ್ತುತವಾಗಿವೆ’ ಎಂದರು.</p>.<p>‘ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸುವುದು ಕೇವಲ ಚುನಾವಣಾ ಆದ್ಯತೆಯಾಗಬಾರದು. ಅದು ಪ್ರತಿಯೊಬ್ಬ ಜನಪ್ರತಿನಿಧಿಯ ಬದ್ಧತೆ ಮತ್ತು ಕರ್ತವ್ಯವಾಗಬೇಕು’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಯದುವೀರ್ ಕೃಷ್ಣದತ್ತ ಒಡೆಯರ್ ಅವರನ್ನು ಪೂರ್ಣಕುಂಭ ಹಾಗೂ ಕಲಾತಂಡಗೊಳೊಂದಿಗೆ ವೇದಿಕೆಗೆ ಕರೆದೊಯ್ಯಲಾಯಿತು.</p>.<p>ಮುಖಂಡರಾದ ಸಿದ್ದರಾಮಯ್ಯ, ಇಂಡುವಾಳು ಸಚ್ಚಿದಾನಂದ, ಸಿ.ಟಿ.ಮಂಜುನಾಥ್, ಬಿ.ಕೆ. ಸತೀಶ್ಚಂದ್ರ, ಬಿ.ಡಿ.ಪುಟ್ಟಸ್ವಾಮಿ, ಬಿ.ಸಿ.ಸತೀಶ್, ಬಿ.ಸಿ.ಮಾಯಿಗಯ್ಯ, ಯಜಮಾನ್ ಚಿಕ್ಕಶಿವಪ್ಪ, ಚಿಕ್ಕರಾಮಣ್ಣ, ಶ್ರೀನಿವಾಸ್, ಬೊಮ್ಮೇಶ್, ಸರ್ವೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯ ಒದಗಿಸುವುದು ಕೇವಲ ಚುನಾವಣೆ ಆದ್ಯತೆ ಆಗಬಾರದು ಎಂದು ಮೈಸೂರು–ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಬೇಲೂರು ಗ್ರಾಮದಲ್ಲಿ ಸಾಯಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಭಾನುವಾರ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್, ನಾಡಪ್ರಭು ಕೆಂಪೇಗೌಡ, ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರನಾಥ ಸ್ವಾಮೀಜಿ ಅವರ ನೂತನ ಪಂಚರತ್ನ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈ ಐವರು ಮಹನೀಯರ ಇತಿಹಾಸ ನಮಗೆಲ್ಲಾ ದಾರಿದೀಪವಾಗಿದ್ದು, ಸಾಧನೆಯ ಹಾದಿಯಲ್ಲಿ ಸಾಗುವುದು ಮುಖ್ಯವಾಗಬೇಕು. ಇವರ ಕುರಿತು ಯುವಜನರು ಅಧ್ಯಯನ ನಡೆಸಬೇಕು. ಮಂಡ್ಯದ ದೇಶಕ್ಕೆ ಮಾದರಿಯಾಗಿರುವ ಮಹನೀಯರ ಆದರ್ಶಗಳು ಪ್ರಸ್ತುತವಾಗಿವೆ’ ಎಂದರು.</p>.<p>‘ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸುವುದು ಕೇವಲ ಚುನಾವಣಾ ಆದ್ಯತೆಯಾಗಬಾರದು. ಅದು ಪ್ರತಿಯೊಬ್ಬ ಜನಪ್ರತಿನಿಧಿಯ ಬದ್ಧತೆ ಮತ್ತು ಕರ್ತವ್ಯವಾಗಬೇಕು’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಯದುವೀರ್ ಕೃಷ್ಣದತ್ತ ಒಡೆಯರ್ ಅವರನ್ನು ಪೂರ್ಣಕುಂಭ ಹಾಗೂ ಕಲಾತಂಡಗೊಳೊಂದಿಗೆ ವೇದಿಕೆಗೆ ಕರೆದೊಯ್ಯಲಾಯಿತು.</p>.<p>ಮುಖಂಡರಾದ ಸಿದ್ದರಾಮಯ್ಯ, ಇಂಡುವಾಳು ಸಚ್ಚಿದಾನಂದ, ಸಿ.ಟಿ.ಮಂಜುನಾಥ್, ಬಿ.ಕೆ. ಸತೀಶ್ಚಂದ್ರ, ಬಿ.ಡಿ.ಪುಟ್ಟಸ್ವಾಮಿ, ಬಿ.ಸಿ.ಸತೀಶ್, ಬಿ.ಸಿ.ಮಾಯಿಗಯ್ಯ, ಯಜಮಾನ್ ಚಿಕ್ಕಶಿವಪ್ಪ, ಚಿಕ್ಕರಾಮಣ್ಣ, ಶ್ರೀನಿವಾಸ್, ಬೊಮ್ಮೇಶ್, ಸರ್ವೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>