<p><strong>ಮದ್ದೂರು:</strong> ಪಟ್ಟಣದಲ್ಲಿ ಈಚೆಗೆ ನಡೆದ ಮಹಿಳೆಯೊಬ್ಬರ ಕೊಲೆಗೆ ಸಂಬಂಧಿಸಿ ಪಟ್ಟಣದ ಪೊಲೀಸರು ಇಬ್ಬರು ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ.</p>.<p>ಪಟ್ಟಣದ ವಿಶ್ವೇಶ್ವರಯ್ಯ ನಗರದ 9ನೇ ಕ್ರಾಸ್ನಲ್ಲಿ ವಾಸವಿದ್ದ ಪೂರ್ಣಿಮಾ ಅವರನ್ನು ಫೆ.2ರಂದು ಅತ್ಯಾಚಾರ ಮಾಡಿ ಬೆಡ್ಶೀಟ್ನಿಂದ ಕುತ್ತಿಗೆ ಬಿಗಿದು, ಉಸಿರು ಕಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧನಂಜಯ ಮಾರ್ಗದರ್ಶನದಲ್ಲಿ ಮಳವಳ್ಳಿ ಡಿವೈಎಸ್ಪಿ ಲಕ್ಷ್ಮಿನಾರಾಯಣಪ್ರಸಾದ್ ನೇತೃತ್ವದಲ್ಲಿ ಮೂರು ತಂಡಗಳನ್ನು ರಚನೆ ಮಾಡಲಾಗಿತ್ತು. ಸಿಪಿಐ ಕೆ.ಆರ್.ಪ್ರಸಾದ್ ನೇತೃತ್ವದ ತಂಡವು ಫೆ.7ರಂದು ಇಬ್ಬರು ಆರೋಪಿಗಳನ್ನ ಬಂಧಿಸಿದೆ.</p>.<p>ರಾಮನಗರ ತಾಲ್ಲೂಕು ಕೂಟ್ಕಲ್ ಹೋಬಳಿ ರಾಯರದೊಡ್ಡಿ (ಸ್ವಂತ ಊರು ಹೊಂಬೇಗೌಡನದೊಡ್ಡಿ)ಗ್ರಾಮದ ಎಚ್.ಆರ್.ಮನು ಅಲಿಯಾಸ್ ಮನು (23), ಕೂಟ್ಕಲ್ ಹೋಬಳಿಯ ಹೊಂಬೇಗೌಡನದೊಡ್ಡಿ ಗ್ರಾಮದ ಸಿ.ರಮೇಶ್ (29) ಬಂಧಿತರು.</p>.<p><strong>ಘಟನೆ ವಿವರ: </strong>ಪೂರ್ಣಿಮಾ ಅವರಲ್ಲಿದ್ದ ಒಡವೆ ಮತ್ತು ಹಣ ದೋಚುವ ಸಲುವಾಗಿ ಹಾಗೂ ಮೃತ ಮಹಿಳೆ ಜತೆಗೆ ದೈಹಿಕ ಸಂಪರ್ಕ ಮಾಡುವ ನೆಪದಲ್ಲಿ ಸ್ನೇಹಿತ ರಮೇಶನ ಜತೆ ಆರೋಪಿ ಮನುಕುಮಾರ್ ತೆರಳಿದ್ದ. ದೈಹಿಕ ಸಂಪರ್ಕ ನಡೆಸಿ ಬಾಯಿಗೆ<br />ಬಟ್ಟೆ ತುರುಕಿ, ಆಕೆಯ ಕಾಲುಗಳನ್ನು ಮಂಚಕ್ಕೆ ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.</p>.<p>ಬಳಿಕ ಚಿನ್ನದ ಮಾಂಗಲ್ಯ, ರೋಲ್ಡ್ಗೋಲ್ಡ್ ಸರ, 4 ರೋಲ್ಡ್ಗೋಲ್ಡ್ ಬಳೆ, ಮೊಬೈಲ್, ₹ 4500 ಕಿತ್ತುಕೊಂಡು ಪರಾರಿಯಾಗಿರುವುದು ತನಿಖೆ ವೇಳೆ ಗೊತ್ತಾಗಿದೆ.</p>.<p>ಆರೋಪಿಗಳು ಕಿತ್ತುಕೊಂಡು ಹೋಗಿರುವ ವಸ್ತುಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿರುವ ಮೋಟಾರ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಪಟ್ಟಣದಲ್ಲಿ ಈಚೆಗೆ ನಡೆದ ಮಹಿಳೆಯೊಬ್ಬರ ಕೊಲೆಗೆ ಸಂಬಂಧಿಸಿ ಪಟ್ಟಣದ ಪೊಲೀಸರು ಇಬ್ಬರು ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ.</p>.<p>ಪಟ್ಟಣದ ವಿಶ್ವೇಶ್ವರಯ್ಯ ನಗರದ 9ನೇ ಕ್ರಾಸ್ನಲ್ಲಿ ವಾಸವಿದ್ದ ಪೂರ್ಣಿಮಾ ಅವರನ್ನು ಫೆ.2ರಂದು ಅತ್ಯಾಚಾರ ಮಾಡಿ ಬೆಡ್ಶೀಟ್ನಿಂದ ಕುತ್ತಿಗೆ ಬಿಗಿದು, ಉಸಿರು ಕಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧನಂಜಯ ಮಾರ್ಗದರ್ಶನದಲ್ಲಿ ಮಳವಳ್ಳಿ ಡಿವೈಎಸ್ಪಿ ಲಕ್ಷ್ಮಿನಾರಾಯಣಪ್ರಸಾದ್ ನೇತೃತ್ವದಲ್ಲಿ ಮೂರು ತಂಡಗಳನ್ನು ರಚನೆ ಮಾಡಲಾಗಿತ್ತು. ಸಿಪಿಐ ಕೆ.ಆರ್.ಪ್ರಸಾದ್ ನೇತೃತ್ವದ ತಂಡವು ಫೆ.7ರಂದು ಇಬ್ಬರು ಆರೋಪಿಗಳನ್ನ ಬಂಧಿಸಿದೆ.</p>.<p>ರಾಮನಗರ ತಾಲ್ಲೂಕು ಕೂಟ್ಕಲ್ ಹೋಬಳಿ ರಾಯರದೊಡ್ಡಿ (ಸ್ವಂತ ಊರು ಹೊಂಬೇಗೌಡನದೊಡ್ಡಿ)ಗ್ರಾಮದ ಎಚ್.ಆರ್.ಮನು ಅಲಿಯಾಸ್ ಮನು (23), ಕೂಟ್ಕಲ್ ಹೋಬಳಿಯ ಹೊಂಬೇಗೌಡನದೊಡ್ಡಿ ಗ್ರಾಮದ ಸಿ.ರಮೇಶ್ (29) ಬಂಧಿತರು.</p>.<p><strong>ಘಟನೆ ವಿವರ: </strong>ಪೂರ್ಣಿಮಾ ಅವರಲ್ಲಿದ್ದ ಒಡವೆ ಮತ್ತು ಹಣ ದೋಚುವ ಸಲುವಾಗಿ ಹಾಗೂ ಮೃತ ಮಹಿಳೆ ಜತೆಗೆ ದೈಹಿಕ ಸಂಪರ್ಕ ಮಾಡುವ ನೆಪದಲ್ಲಿ ಸ್ನೇಹಿತ ರಮೇಶನ ಜತೆ ಆರೋಪಿ ಮನುಕುಮಾರ್ ತೆರಳಿದ್ದ. ದೈಹಿಕ ಸಂಪರ್ಕ ನಡೆಸಿ ಬಾಯಿಗೆ<br />ಬಟ್ಟೆ ತುರುಕಿ, ಆಕೆಯ ಕಾಲುಗಳನ್ನು ಮಂಚಕ್ಕೆ ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.</p>.<p>ಬಳಿಕ ಚಿನ್ನದ ಮಾಂಗಲ್ಯ, ರೋಲ್ಡ್ಗೋಲ್ಡ್ ಸರ, 4 ರೋಲ್ಡ್ಗೋಲ್ಡ್ ಬಳೆ, ಮೊಬೈಲ್, ₹ 4500 ಕಿತ್ತುಕೊಂಡು ಪರಾರಿಯಾಗಿರುವುದು ತನಿಖೆ ವೇಳೆ ಗೊತ್ತಾಗಿದೆ.</p>.<p>ಆರೋಪಿಗಳು ಕಿತ್ತುಕೊಂಡು ಹೋಗಿರುವ ವಸ್ತುಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿರುವ ಮೋಟಾರ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>