ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಿಎಸ್ಎಸ್ಕೆ ವ್ಯಾಪ್ತಿಗೆ ಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್.ಪೇಟೆ ತಾಲ್ಲೂಕು ವ್ಯಾಪ್ತಿಯ ಕಬ್ಬನ್ನು ನಿಗದಿ ಮಾಡಲಾಗಿದೆ. ಆದರೆ ಇತರ ಖಾಸಗಿ ಸಕ್ಕರೆ ಕಾರ್ಖಾನೆಗಳು ಪಿಎಸ್ಎಸ್ಕೆ ವ್ಯಾಪ್ತಿಯ ಕಬ್ಬನ್ನು ಪಡೆಯುತ್ತಿವೆ. ಈ ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಇತರ ಕಾರ್ಖಾನೆಗಳ ಕಬ್ಬು ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.