<p><strong>ಹಲಗೂರು:</strong> ಸಮೀಪದ ಮುತ್ತತ್ತಿಯಲ್ಲಿ ಪುರಾಣ ಪ್ರಸಿದ್ಧ ಅಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಮುತ್ತೆತ್ತರಾಯ ಸ್ವಾಮಿ 6ನೇ ವರ್ಷದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.</p>.<p>ಶನಿವಾರ ಬೆಳಿಗ್ಗೆ 5ಕ್ಕೆ ಆಂಜನೇಯ ಸ್ವಾಮಿಗೆ ಅಭಿಷೇಕ ಸೇವೆ ನಂತರ ಗಣಹೋಮ ಮತ್ತು ನವಗ್ರಹ ಹೋಮ ನಡೆಯಿತು. ಬೆಳಿಗ್ಗೆ 8ರ ನಂತರ ಸ್ವಾಮಿಯ ಪಾದಪೂಜೆ ಮತ್ತು ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಿತು.</p>.<p>ಕಾವೇರಿ ನದಿಯ ದಂಡೆಯಿಂದ ಗಂಗಾ ಪೂಜೆ ನಡೆಸಿದ ನಂತರ ಸ್ವಾಮಿಯವರ ಬ್ರಹ್ಮ ರಥೋತ್ಸವ ಸೇವಾ ಕಾರ್ಯಕ್ರಮ ನಡೆಯಿತು. ನದಿ ದಂಡೆಯಿಂದ ದೇವಾಲಯದ ಆವರಣಕ್ಕೆ ಬರುವವರೆಗೂ ನೂರಾರು ಭಕ್ತರು ದೇವರ ಹೆಸರಿನಲ್ಲಿ ಗೋವಿಂದ ಸಾರಿದರು.</p>.<p>ದೇವಾಲಯದ ಒಳಭಾಗವನ್ನು ವಿವಿಧ ಬಗೆಯ ಹೂವು ಮತ್ತು ಹಣ್ಣುಗಳಿಂದ ಅಲಂಕಾರ ಮಾಡಿದ್ದು, ನೋಡುಗರ ಕಣ್ಮನ ಸೆಳೆಯಿತು. ಭಕ್ತರು ಸರತಿ ಸಾಲಿನಲ್ಲಿ ನಿಂತು ಬೆಣ್ಣೆಯ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ಅಂಜನೇಯ ಸ್ವಾಮಿ ದೇವರ ದರ್ಶನ ಪಡೆದರು.</p>.<p>ಶ್ರೀ ಕ್ಷೇತ್ರ ಕಬ್ಬಾಳಮ್ಮ ದೇವಿ ಮತ್ತು ಹಲಗೂರು ಭದ್ರಕಾಳಿ ಅಮ್ಮನವರ ಬಸಪ್ಪ ದೇವರ ಮೆರವಣಿಗೆ ನಡೆಯಿತು. ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.</p>.<p>ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಸಾವಿರಾರು ಭಕ್ತರು ಪೂಜೆಗೆ ಆಗಮಿಸಿ ದರ್ಶನ ಪಡೆದರು.</p>.<div><blockquote>ದೇವಾಲಯದಿಂದ ಆರು ವರ್ಷಗಳಿಂದ ಶ್ರಾವಣ ಮಾಸದ ಮೊದಲ ಶನಿವಾರ ಸ್ವಾಮಿಯ ಬ್ರಹ್ಮ ರಥೋತ್ಸವ ಆಯೋಜಿಸಲಾಗುತ್ತಿದೆ.</blockquote><span class="attribution">–ರವಿ, ಅರ್ಚಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು:</strong> ಸಮೀಪದ ಮುತ್ತತ್ತಿಯಲ್ಲಿ ಪುರಾಣ ಪ್ರಸಿದ್ಧ ಅಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಮುತ್ತೆತ್ತರಾಯ ಸ್ವಾಮಿ 6ನೇ ವರ್ಷದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.</p>.<p>ಶನಿವಾರ ಬೆಳಿಗ್ಗೆ 5ಕ್ಕೆ ಆಂಜನೇಯ ಸ್ವಾಮಿಗೆ ಅಭಿಷೇಕ ಸೇವೆ ನಂತರ ಗಣಹೋಮ ಮತ್ತು ನವಗ್ರಹ ಹೋಮ ನಡೆಯಿತು. ಬೆಳಿಗ್ಗೆ 8ರ ನಂತರ ಸ್ವಾಮಿಯ ಪಾದಪೂಜೆ ಮತ್ತು ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಿತು.</p>.<p>ಕಾವೇರಿ ನದಿಯ ದಂಡೆಯಿಂದ ಗಂಗಾ ಪೂಜೆ ನಡೆಸಿದ ನಂತರ ಸ್ವಾಮಿಯವರ ಬ್ರಹ್ಮ ರಥೋತ್ಸವ ಸೇವಾ ಕಾರ್ಯಕ್ರಮ ನಡೆಯಿತು. ನದಿ ದಂಡೆಯಿಂದ ದೇವಾಲಯದ ಆವರಣಕ್ಕೆ ಬರುವವರೆಗೂ ನೂರಾರು ಭಕ್ತರು ದೇವರ ಹೆಸರಿನಲ್ಲಿ ಗೋವಿಂದ ಸಾರಿದರು.</p>.<p>ದೇವಾಲಯದ ಒಳಭಾಗವನ್ನು ವಿವಿಧ ಬಗೆಯ ಹೂವು ಮತ್ತು ಹಣ್ಣುಗಳಿಂದ ಅಲಂಕಾರ ಮಾಡಿದ್ದು, ನೋಡುಗರ ಕಣ್ಮನ ಸೆಳೆಯಿತು. ಭಕ್ತರು ಸರತಿ ಸಾಲಿನಲ್ಲಿ ನಿಂತು ಬೆಣ್ಣೆಯ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ಅಂಜನೇಯ ಸ್ವಾಮಿ ದೇವರ ದರ್ಶನ ಪಡೆದರು.</p>.<p>ಶ್ರೀ ಕ್ಷೇತ್ರ ಕಬ್ಬಾಳಮ್ಮ ದೇವಿ ಮತ್ತು ಹಲಗೂರು ಭದ್ರಕಾಳಿ ಅಮ್ಮನವರ ಬಸಪ್ಪ ದೇವರ ಮೆರವಣಿಗೆ ನಡೆಯಿತು. ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.</p>.<p>ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಸಾವಿರಾರು ಭಕ್ತರು ಪೂಜೆಗೆ ಆಗಮಿಸಿ ದರ್ಶನ ಪಡೆದರು.</p>.<div><blockquote>ದೇವಾಲಯದಿಂದ ಆರು ವರ್ಷಗಳಿಂದ ಶ್ರಾವಣ ಮಾಸದ ಮೊದಲ ಶನಿವಾರ ಸ್ವಾಮಿಯ ಬ್ರಹ್ಮ ರಥೋತ್ಸವ ಆಯೋಜಿಸಲಾಗುತ್ತಿದೆ.</blockquote><span class="attribution">–ರವಿ, ಅರ್ಚಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>