<p><strong>ಹಲಗೂರು:</strong> ಸಮೀಪದ ಮುತ್ತತ್ತಿಯ ಕಾವೇರಿ ನದಿಯ ದಡದಲ್ಲಿರುವ ಪುರಾಣ ಪ್ರಸಿದ್ಧ ಮುತ್ತತ್ತಿರಾಯ ದೇವರ ಸನ್ನಿಧಿಯಲ್ಲಿ ಜಾತ್ರಾ ಮಹೋತ್ಸವ ಮತ್ತು ಹಾಲರವಿ ಸೇವೆ ಬಹಳ ವಿಜೃಂಭಣೆಯಿಂದ ನೆರವೇರಿತು.</p><p>ಆ. 20 ರಂದು ಬುಧವಾರ ದೊಡ್ಡ ಮುತ್ತತ್ತಿಯಲ್ಲಿ ಉಪವಾಸ, ದೇವಾಲಯ ಮತ್ತು ರಥ ಮತ್ತು ದೇವರಿಗೆ ಹೂವಿನ ಅಲಂಕಾರ ಮತ್ತು ಪೂಜಾ ಕೈಂಕರ್ಯಗಳು ನಡೆದವು. ರಾತ್ರಿ ಜಾನಪದ ಕಲಾವಿದ ಯರಹಳ್ಳಿ ಪುಟ್ಟಸ್ವಾಮಿ ಮತ್ತು ಶ್ರೀನಿವಾಸ್ ತಂಡದವರು ಜಾನಪದ ಗೀತಾ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.</p><p>ಗುರುವಾರ ಬೆಳಿಗ್ಗೆ 10 ಗಂಟೆಗೆ ವಿವಿಧ ಬಗೆಯ ಹೂಗಳಿಂದ ಆಲಂಕಾರ ಮಾಡಿದ್ದ ರಥ ಕಾವೇರಿ ನದಿಯಿಂದ ದೇವಾಲಯದವರೆಗೂ ಮೆರವಣಿಗೆಯಲ್ಲಿ ಸಾಗಿತು. ಮಧ್ಯಾಹ್ನ 3 ಗಂಟೆಗೆ ಏಳಗಳ್ಳಿ ಮುತ್ತೇಗೌಡರ ಕುಟುಂಬದವರಿಂದ ಹಾಲರವಿ ತರುವ ಸೇವಾರ್ಥ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಜಾನಪದ ಕಲಾ ತಂಡದಿಂದ ವೀರಗಾಸೆ, ಡೊಳ್ಳು ಕುಣಿತ, ಚಿಲಿಪಿಲಿ ಗೊಂಬೆ ಪೂಜಾ ಕುಣಿತ ಕಾರ್ಯಕ್ರಮಗಳು ಜನರ ಮನಸೂರೆಗೊಂಡವು.</p>.<p>ಮಳವಳ್ಳಿ, ಬಾಳೆಹೊನ್ನಿಗ ಗ್ರಾಮದ ಆದಿ ಜಾಂಬವ ಜನಾಂಗದವರಿಂದ ಹಾಲರವಿ ಸೇವೆ ಮತ್ತು ಹಸಿ ತೆಂಗಿನಕಾಯಿ ಒಡೆಯುವ ಸೇವೆ ಭಕ್ತಾಧಿಗಳ ಗಮನ ಸೆಳೆಯಿತು. ಎನ್.ಕೋಡಿಹಳ್ಳಿ ಗ್ರಾಮಸ್ಥರಿಂದ ಹುಲಿವಾಹನ ಉತ್ಸವ, ರಾತ್ರಿ 7 ಗಂಟೆಗೆ ಚನ್ನಪಟ್ಟಣ ತಾಲೋಕಿನ ಹುಣಸನಹಳ್ಳಿ ಗ್ರಾಮಸ್ಥರಿಂದ ದೇವರ ಪಲ್ಲಕ್ಕಿ ಉತ್ಸವ ನಡೆಯಿತು.</p><p>ಜಾತ್ರಾ ಉತ್ಸವದಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p><p>ಮೂರು ದಿನಗಳ ಕಾಲ ನಡೆದ ಜಾತ್ರಾ ಉತ್ಸವದಲ್ಲಿ ಮಳವಳ್ಳಿ, ಮಂಡ್ಯ, ಕನಕಪುರ, ರಾಮನಗರ, ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಂದ ಸಾವಿರಾರು ಭಕ್ತಾಧಿಗಳು ಜಾತ್ರೋತ್ಸವಕ್ಕೆ ಆಗಮಿಸಿ ಮುತ್ತತ್ತಿರಾಯನ ಕೃಪೆಗೆ ಪಾತ್ರರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು:</strong> ಸಮೀಪದ ಮುತ್ತತ್ತಿಯ ಕಾವೇರಿ ನದಿಯ ದಡದಲ್ಲಿರುವ ಪುರಾಣ ಪ್ರಸಿದ್ಧ ಮುತ್ತತ್ತಿರಾಯ ದೇವರ ಸನ್ನಿಧಿಯಲ್ಲಿ ಜಾತ್ರಾ ಮಹೋತ್ಸವ ಮತ್ತು ಹಾಲರವಿ ಸೇವೆ ಬಹಳ ವಿಜೃಂಭಣೆಯಿಂದ ನೆರವೇರಿತು.</p><p>ಆ. 20 ರಂದು ಬುಧವಾರ ದೊಡ್ಡ ಮುತ್ತತ್ತಿಯಲ್ಲಿ ಉಪವಾಸ, ದೇವಾಲಯ ಮತ್ತು ರಥ ಮತ್ತು ದೇವರಿಗೆ ಹೂವಿನ ಅಲಂಕಾರ ಮತ್ತು ಪೂಜಾ ಕೈಂಕರ್ಯಗಳು ನಡೆದವು. ರಾತ್ರಿ ಜಾನಪದ ಕಲಾವಿದ ಯರಹಳ್ಳಿ ಪುಟ್ಟಸ್ವಾಮಿ ಮತ್ತು ಶ್ರೀನಿವಾಸ್ ತಂಡದವರು ಜಾನಪದ ಗೀತಾ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.</p><p>ಗುರುವಾರ ಬೆಳಿಗ್ಗೆ 10 ಗಂಟೆಗೆ ವಿವಿಧ ಬಗೆಯ ಹೂಗಳಿಂದ ಆಲಂಕಾರ ಮಾಡಿದ್ದ ರಥ ಕಾವೇರಿ ನದಿಯಿಂದ ದೇವಾಲಯದವರೆಗೂ ಮೆರವಣಿಗೆಯಲ್ಲಿ ಸಾಗಿತು. ಮಧ್ಯಾಹ್ನ 3 ಗಂಟೆಗೆ ಏಳಗಳ್ಳಿ ಮುತ್ತೇಗೌಡರ ಕುಟುಂಬದವರಿಂದ ಹಾಲರವಿ ತರುವ ಸೇವಾರ್ಥ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಜಾನಪದ ಕಲಾ ತಂಡದಿಂದ ವೀರಗಾಸೆ, ಡೊಳ್ಳು ಕುಣಿತ, ಚಿಲಿಪಿಲಿ ಗೊಂಬೆ ಪೂಜಾ ಕುಣಿತ ಕಾರ್ಯಕ್ರಮಗಳು ಜನರ ಮನಸೂರೆಗೊಂಡವು.</p>.<p>ಮಳವಳ್ಳಿ, ಬಾಳೆಹೊನ್ನಿಗ ಗ್ರಾಮದ ಆದಿ ಜಾಂಬವ ಜನಾಂಗದವರಿಂದ ಹಾಲರವಿ ಸೇವೆ ಮತ್ತು ಹಸಿ ತೆಂಗಿನಕಾಯಿ ಒಡೆಯುವ ಸೇವೆ ಭಕ್ತಾಧಿಗಳ ಗಮನ ಸೆಳೆಯಿತು. ಎನ್.ಕೋಡಿಹಳ್ಳಿ ಗ್ರಾಮಸ್ಥರಿಂದ ಹುಲಿವಾಹನ ಉತ್ಸವ, ರಾತ್ರಿ 7 ಗಂಟೆಗೆ ಚನ್ನಪಟ್ಟಣ ತಾಲೋಕಿನ ಹುಣಸನಹಳ್ಳಿ ಗ್ರಾಮಸ್ಥರಿಂದ ದೇವರ ಪಲ್ಲಕ್ಕಿ ಉತ್ಸವ ನಡೆಯಿತು.</p><p>ಜಾತ್ರಾ ಉತ್ಸವದಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p><p>ಮೂರು ದಿನಗಳ ಕಾಲ ನಡೆದ ಜಾತ್ರಾ ಉತ್ಸವದಲ್ಲಿ ಮಳವಳ್ಳಿ, ಮಂಡ್ಯ, ಕನಕಪುರ, ರಾಮನಗರ, ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಂದ ಸಾವಿರಾರು ಭಕ್ತಾಧಿಗಳು ಜಾತ್ರೋತ್ಸವಕ್ಕೆ ಆಗಮಿಸಿ ಮುತ್ತತ್ತಿರಾಯನ ಕೃಪೆಗೆ ಪಾತ್ರರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>