ಶ್ರೀರಂಗಪಟ್ಟಣ ತಾಲ್ಲೂಕಿನ ಚಂದಗಾಲು ಬಳಿ ಪಂಪ್ಹೌಸ್ ನಿರ್ಮಾಣ ಮಾಡಲಾಗಿದ್ದು, ಅಲ್ಲಿಂದ ಗಂಜಾಂ ವ್ಯಾಪ್ತಿಯ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಮೈಸೂರು ವ್ಯಾಪ್ತಿಯ ಕೊಳಚೆ ನೀರು ನೇರವಾಗಿ ನದಿ ಸೇರುತ್ತಿರುವ ಕಾರಣ ಶುದ್ಧ ನೀರು ಪೂರೈಕೆಗೆ ತೊಂದರೆಯಾಗಿದೆ. ಸಾಂಕ್ರಾಮಿಕ ರೋಗಗಳ ಭೀತಿಯೂ ಆರಂಭವಾಗಿದೆ. ಹೀಗಾಗಿ ಮೈಸೂರು ವ್ಯಾಪ್ತಿಯಲ್ಲಿ ನೀರನ್ನು ಸಂಸ್ಕರಿಸದೆ ನದಿಗೆ ಹರಿಸಬಾರದು ಎಂದು ಒತ್ತಾಯಿಸಿದ್ದಾರೆ.