<p><strong>ಶ್ರೀರಂಗಪಟ್ಟಣ: </strong>ಕೋವಿಡ್ ಕಾರಣದಿಂದ ಆರು ತಿಂಗಳುಗಳಿಂದ ಬಂದ್ ಆಗಿದ್ದ ತಾಲ್ಲೂಕಿನ ಕೆಆರ್ಎಸ್ ಬೃಂದಾವನ ಬುಧವಾರ (ಸೆ.16)ದಿಂದ ಪ್ರವಾಸಿಗರ ಪ್ರವೇಶಕ್ಕೆ ಮುಕ್ತವಾಗಲಿದೆ.</p>.<p>ಬೆಳಿಗ್ಗೆ 8ರಿಂದ ರಾತ್ರಿ 8 ಗಂಟೆವರೆಗೆ ಪ್ರವೇಶಾವಕಾಶ ಇರುತ್ತದೆ. ಶನಿವಾರ ಮತ್ತು ಭಾನುವಾರ ರಾತ್ರಿ 9ರವರೆಗೂ ತೆರೆದಿರುತ್ತದೆ. ಉದ್ಯಾನದಲ್ಲಿ ಸಂಗೀತ ಕಾರಂಜಿ ಜತೆಗೆ ದೋಣಿ ವಿಹಾರವೂ ಇರುತ್ತದೆ. ಇಲ್ಲಿಗೆ ಬರುವವರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಿ ಒಳ ಬಿಡಲಾಗುತ್ತದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>₹6 ಕೋಟಿ ನಷ್ಟ: </strong>ಬೃಂದಾವನ ನಿರ್ವಹಣೆಯ ಗುತ್ತಿಗೆಯನ್ನು ಕೆಸಿಐಸಿ ಸಂಸ್ಥೆ ಪಡೆದಿತ್ತು. ಕಾವೇರಿ ನೀರಾವರಿ ನಿಗಮಕ್ಕೆ ಮಾಸಿಕ ₹1.05 ಕೋಟಿ ನೀಡುವ ಒಪ್ಪಂದದೊಡನೆ ಈ ಸಂಸ್ಥೆ ಗುತ್ತಿಗೆ ಪಡೆದಿತ್ತು. ಕೆಸಿಐಸಿ ಸಂಸ್ಥೆ ಗುತ್ತಿಗೆ ಪಡೆದ 3 ತಿಂಗಳಲ್ಲೇ ಎಲ್ಲೆಡೆ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಮಾ.23ರಿಂದ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿತ್ತು.</p>.<p>ವಯಸ್ಕರಿಗೆ ₹50 ಹಾಗೂ ಮಕ್ಕಳಿಗೆ ₹10 ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ.</p>.<p><strong>ವ್ಯಾಪಾರಿಗಳಲ್ಲಿ ಹರ್ಷ: </strong>ಕೆಆರ್ಎಸ್ ಹಾಗೂ ಬೃಂದಾವನ ಆವರಣದ ವ್ಯಾಪಾರಿಗಳು ಹರ್ಷಿತರಾಗಿದ್ದಾರೆ. 200ಕ್ಕೂ ಹೆಚ್ಚು ಮಂದಿ ವ್ಯಾಪಾರಿಗಳು ಇಲ್ಲಿ ಬದುಕು ಕಂಡುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ: </strong>ಕೋವಿಡ್ ಕಾರಣದಿಂದ ಆರು ತಿಂಗಳುಗಳಿಂದ ಬಂದ್ ಆಗಿದ್ದ ತಾಲ್ಲೂಕಿನ ಕೆಆರ್ಎಸ್ ಬೃಂದಾವನ ಬುಧವಾರ (ಸೆ.16)ದಿಂದ ಪ್ರವಾಸಿಗರ ಪ್ರವೇಶಕ್ಕೆ ಮುಕ್ತವಾಗಲಿದೆ.</p>.<p>ಬೆಳಿಗ್ಗೆ 8ರಿಂದ ರಾತ್ರಿ 8 ಗಂಟೆವರೆಗೆ ಪ್ರವೇಶಾವಕಾಶ ಇರುತ್ತದೆ. ಶನಿವಾರ ಮತ್ತು ಭಾನುವಾರ ರಾತ್ರಿ 9ರವರೆಗೂ ತೆರೆದಿರುತ್ತದೆ. ಉದ್ಯಾನದಲ್ಲಿ ಸಂಗೀತ ಕಾರಂಜಿ ಜತೆಗೆ ದೋಣಿ ವಿಹಾರವೂ ಇರುತ್ತದೆ. ಇಲ್ಲಿಗೆ ಬರುವವರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಿ ಒಳ ಬಿಡಲಾಗುತ್ತದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>₹6 ಕೋಟಿ ನಷ್ಟ: </strong>ಬೃಂದಾವನ ನಿರ್ವಹಣೆಯ ಗುತ್ತಿಗೆಯನ್ನು ಕೆಸಿಐಸಿ ಸಂಸ್ಥೆ ಪಡೆದಿತ್ತು. ಕಾವೇರಿ ನೀರಾವರಿ ನಿಗಮಕ್ಕೆ ಮಾಸಿಕ ₹1.05 ಕೋಟಿ ನೀಡುವ ಒಪ್ಪಂದದೊಡನೆ ಈ ಸಂಸ್ಥೆ ಗುತ್ತಿಗೆ ಪಡೆದಿತ್ತು. ಕೆಸಿಐಸಿ ಸಂಸ್ಥೆ ಗುತ್ತಿಗೆ ಪಡೆದ 3 ತಿಂಗಳಲ್ಲೇ ಎಲ್ಲೆಡೆ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಮಾ.23ರಿಂದ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿತ್ತು.</p>.<p>ವಯಸ್ಕರಿಗೆ ₹50 ಹಾಗೂ ಮಕ್ಕಳಿಗೆ ₹10 ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ.</p>.<p><strong>ವ್ಯಾಪಾರಿಗಳಲ್ಲಿ ಹರ್ಷ: </strong>ಕೆಆರ್ಎಸ್ ಹಾಗೂ ಬೃಂದಾವನ ಆವರಣದ ವ್ಯಾಪಾರಿಗಳು ಹರ್ಷಿತರಾಗಿದ್ದಾರೆ. 200ಕ್ಕೂ ಹೆಚ್ಚು ಮಂದಿ ವ್ಯಾಪಾರಿಗಳು ಇಲ್ಲಿ ಬದುಕು ಕಂಡುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>