<p><strong>ಮಂಡ್ಯ</strong>: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್.ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಒಟ್ಟು 34 ಪ್ರಕರಣಗಳು ವರದಿ ಆಗಿದ್ದು 28 ಪ್ರಕರಣಗಳನ್ನು ಭೇದಿಸಲಾಗಿದೆ.</p>.<p>ಶಾಸಕ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಗೃಹ ಸಚಿವರು, ಈ ಹೆದ್ದಾರಿ ಸಾರ್ವಜನಿಕ ಬಳಕೆಗೆ ಮುಕ್ತಗೊಂಡ ಬಳಿಕ 2022ರಿಂದ 2025ರ ಅಂತ್ಯಕ್ಕೆ ಈ ಪ್ರಕರಣಗಳು ವರದಿಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಪ್ರಯಾಣಿಕರ ಸುಲಿಗೆಗೆ ಸಂಬಂಧಿಸಿದಂತೆ ಒಟ್ಟು 22 ಪ್ರಕರಣಗಳು ವರದಿಯಾಗಿದ್ದು 17 ಪ್ರಕರಣಗಳನ್ನು ಭೇದಿಸಲಾಗಿದೆ. ಒಟ್ಟು 34 ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 12, ಮಂಡ್ಯ ಜಿಲ್ಲೆಯಲ್ಲಿ 9 ಹಾಗೂ ಮೈಸೂರು ನಗರದಲ್ಲಿ 1 ಪ್ರಕರಣ ವರದಿಯಾಗಿದೆ.</p>.<p>ಹಾಗೇ, ಪ್ರಯಾಣಿಕರ ದರೋಡೆಗೆ ಸಂಬಂಧಿಸಿದಂತೆ, ವರದಿಯಾದ ಒಟ್ಟು 12 ಪ್ರಕರಣಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 7 ಹಾಗೂ ಮಂಡ್ಯ ಜಿಲ್ಲೆಯಲ್ಲಿ 5 ಪ್ರಕರಣಗಳು ವರದಿಯಾಗಿದ್ದು 11 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 56 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಲಿಗೆ ಮತ್ತು ದರೋಡೆಯನ್ನು ತಡೆಯಲು ದಿನದ 24 ಗಂಟೆಗಳಲ್ಲಿ ಮೂರು ಪಾಳಿಯಲ್ಲಿ ಹೆದ್ದಾರಿ ಗಸ್ತು ನಿಯೋಜನೆ ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.</p>.<p><strong>ಸಂಚಾರ ನಿಯಮ ಉಲ್ಲಂಘನೆ:</strong> <strong>19.27 ಲಕ್ಷ ಪ್ರಕರಣ ದಾಖಲು</strong></p><p>ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಒಟ್ಟು ₹19.27 ಲಕ್ಷ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ.</p><p>2024ರಲ್ಲಿ 13,83,861 ಹಾಗೂ 2025ರಲ್ಲಿ 5,43,175 ಪ್ರಕರಣಗಳು ದಾಖಲಾಗಿವೆ.</p><p>2024ರಲ್ಲಿ 13,83,861 ಪ್ರಕರಣಗಳು ವರದಿಯಾಗಿದ್ದು, ₹93,75,42,500 ದಂಡ ವಿಧಿಸಲಾಗಿದೆ. ದಂಡದ ಮೊತ್ತ ₹8,38,80,500 ಸಂಗ್ರಹಿಸಲಾಗಿದ್ದು ₹85,36,62,000 ಬಾಕಿ ಇದೆ. 2025ರಲ್ಲಿ 5,43,175 ಪ್ರಕರಣಗಳು ವರದಿಯಾಗಿದ್ದು, ₹40,10,76,500 ದಂಡ ವಿಧಿಸಲಾಗಿದೆ. ದಂಡದ ಮೊತ್ತ ₹4,30,73,000 ಸಂಗ್ರಹಿಸಲಾಗಿದೆ. ₹35,80,03,500 ಬಾಕಿ ಇದೆ.</p>
<p><strong>ಮಂಡ್ಯ</strong>: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್.ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಒಟ್ಟು 34 ಪ್ರಕರಣಗಳು ವರದಿ ಆಗಿದ್ದು 28 ಪ್ರಕರಣಗಳನ್ನು ಭೇದಿಸಲಾಗಿದೆ.</p>.<p>ಶಾಸಕ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಗೃಹ ಸಚಿವರು, ಈ ಹೆದ್ದಾರಿ ಸಾರ್ವಜನಿಕ ಬಳಕೆಗೆ ಮುಕ್ತಗೊಂಡ ಬಳಿಕ 2022ರಿಂದ 2025ರ ಅಂತ್ಯಕ್ಕೆ ಈ ಪ್ರಕರಣಗಳು ವರದಿಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಪ್ರಯಾಣಿಕರ ಸುಲಿಗೆಗೆ ಸಂಬಂಧಿಸಿದಂತೆ ಒಟ್ಟು 22 ಪ್ರಕರಣಗಳು ವರದಿಯಾಗಿದ್ದು 17 ಪ್ರಕರಣಗಳನ್ನು ಭೇದಿಸಲಾಗಿದೆ. ಒಟ್ಟು 34 ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 12, ಮಂಡ್ಯ ಜಿಲ್ಲೆಯಲ್ಲಿ 9 ಹಾಗೂ ಮೈಸೂರು ನಗರದಲ್ಲಿ 1 ಪ್ರಕರಣ ವರದಿಯಾಗಿದೆ.</p>.<p>ಹಾಗೇ, ಪ್ರಯಾಣಿಕರ ದರೋಡೆಗೆ ಸಂಬಂಧಿಸಿದಂತೆ, ವರದಿಯಾದ ಒಟ್ಟು 12 ಪ್ರಕರಣಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 7 ಹಾಗೂ ಮಂಡ್ಯ ಜಿಲ್ಲೆಯಲ್ಲಿ 5 ಪ್ರಕರಣಗಳು ವರದಿಯಾಗಿದ್ದು 11 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 56 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಲಿಗೆ ಮತ್ತು ದರೋಡೆಯನ್ನು ತಡೆಯಲು ದಿನದ 24 ಗಂಟೆಗಳಲ್ಲಿ ಮೂರು ಪಾಳಿಯಲ್ಲಿ ಹೆದ್ದಾರಿ ಗಸ್ತು ನಿಯೋಜನೆ ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.</p>.<p><strong>ಸಂಚಾರ ನಿಯಮ ಉಲ್ಲಂಘನೆ:</strong> <strong>19.27 ಲಕ್ಷ ಪ್ರಕರಣ ದಾಖಲು</strong></p><p>ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಒಟ್ಟು ₹19.27 ಲಕ್ಷ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ.</p><p>2024ರಲ್ಲಿ 13,83,861 ಹಾಗೂ 2025ರಲ್ಲಿ 5,43,175 ಪ್ರಕರಣಗಳು ದಾಖಲಾಗಿವೆ.</p><p>2024ರಲ್ಲಿ 13,83,861 ಪ್ರಕರಣಗಳು ವರದಿಯಾಗಿದ್ದು, ₹93,75,42,500 ದಂಡ ವಿಧಿಸಲಾಗಿದೆ. ದಂಡದ ಮೊತ್ತ ₹8,38,80,500 ಸಂಗ್ರಹಿಸಲಾಗಿದ್ದು ₹85,36,62,000 ಬಾಕಿ ಇದೆ. 2025ರಲ್ಲಿ 5,43,175 ಪ್ರಕರಣಗಳು ವರದಿಯಾಗಿದ್ದು, ₹40,10,76,500 ದಂಡ ವಿಧಿಸಲಾಗಿದೆ. ದಂಡದ ಮೊತ್ತ ₹4,30,73,000 ಸಂಗ್ರಹಿಸಲಾಗಿದೆ. ₹35,80,03,500 ಬಾಕಿ ಇದೆ.</p>