<p><strong>ಚಿಕ್ಕಮಗಳೂರು</strong>: ‘ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ವಿಸರ್ಜನೆ ವೇಳೆ ನಡೆದ ಗಲಾಟೆ ಮುಸ್ಲಿಮರ ಕಡೆ ಯಿಂದಲೇ ಪೂರ್ಣ ಪ್ರಮಾಣದಲ್ಲಿ ಆಗಿದೆ. ಆದ್ದರಿಂದ ಹಿಂದೂಗಳನ್ನು ಬಂಧಿಸಿಲ್ಲ, ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘21 ಜನರನ್ನು ಬಂಧಿಸಲಾಗಿದೆ. ಕ್ರಮ ಆದರೂ ಬಿಜೆಪಿಯವರು ಸಭೆ ನಡೆಸಿದರೆ ಅರ್ಥವಿದೆಯೇ’ ಎಂದು ಪ್ರಶ್ನಿಸಿದರು.</p><p>‘ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿರುವ ರಾಜ್ಯ ಬಿಜೆಪಿ ಮುಖಂಡರಿಗೆ ನಾಚಿಕೆಯಾಗಬೇಕು. ಅವರ ಆಡಳಿತದಲ್ಲಿ ಈ ರೀತಿ ಘಟನೆಗಳು ನಡೆದಿಲ್ಲವೇ? ಕಾಂಗ್ರೆಸ್ ಅಧಿಕಾರದಲ್ಲೇ ಗಲಭೆಯಾಗುತ್ತದೆ ಎಂಬುದು ಸುಳ್ಳು. ಒಮ್ಮೆ ಹಿಂದೆ ತಿರುಗಿ ನೋಡಲಿ’ ಎಂದರು.</p><p> ‘ಸ್ವಲ್ಪ ಭದ್ರತಾ ವೈಫಲ್ಯ ಆಗಿರುವ ಅನುಮಾನ ಇದೆ. ಈ ಗಲಭೆ ಹಿಂದೆ ಯಾರಿದ್ದಾರೆ ಎಂಬುದರ ಕುರಿತೂ ತನಿಖೆ ನಡೆಯುತ್ತಿದೆ’ ಎಂದರು.</p><p>‘ನನಗಿರುವ ಮಾಹಿತಿ ಪ್ರಕಾರ ಸಾಮೂಹಿಕ ಗಣಪತಿ ಮೆರವಣಿಗೆಗೆ ನಾಲ್ಕೈದು ಗಣಪತಿಗಳು ಮಾತ್ರ ಇದ್ದವು. ಬೆಂಗಳೂರಿನಿಂದ ಖರೀದಿ ಮಾಡಿ ತಂದು ಸಂಖ್ಯೆ ಜಾಸ್ತಿ ಮಾಡಿಕೊಳ್ಳುವ ಪ್ರಯತ್ನವನ್ನು ಬಿಜೆಪಿ–ಜೆಡಿಎಸ್ನವರು ಮಾಡಿದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ವಿಸರ್ಜನೆ ವೇಳೆ ನಡೆದ ಗಲಾಟೆ ಮುಸ್ಲಿಮರ ಕಡೆ ಯಿಂದಲೇ ಪೂರ್ಣ ಪ್ರಮಾಣದಲ್ಲಿ ಆಗಿದೆ. ಆದ್ದರಿಂದ ಹಿಂದೂಗಳನ್ನು ಬಂಧಿಸಿಲ್ಲ, ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘21 ಜನರನ್ನು ಬಂಧಿಸಲಾಗಿದೆ. ಕ್ರಮ ಆದರೂ ಬಿಜೆಪಿಯವರು ಸಭೆ ನಡೆಸಿದರೆ ಅರ್ಥವಿದೆಯೇ’ ಎಂದು ಪ್ರಶ್ನಿಸಿದರು.</p><p>‘ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿರುವ ರಾಜ್ಯ ಬಿಜೆಪಿ ಮುಖಂಡರಿಗೆ ನಾಚಿಕೆಯಾಗಬೇಕು. ಅವರ ಆಡಳಿತದಲ್ಲಿ ಈ ರೀತಿ ಘಟನೆಗಳು ನಡೆದಿಲ್ಲವೇ? ಕಾಂಗ್ರೆಸ್ ಅಧಿಕಾರದಲ್ಲೇ ಗಲಭೆಯಾಗುತ್ತದೆ ಎಂಬುದು ಸುಳ್ಳು. ಒಮ್ಮೆ ಹಿಂದೆ ತಿರುಗಿ ನೋಡಲಿ’ ಎಂದರು.</p><p> ‘ಸ್ವಲ್ಪ ಭದ್ರತಾ ವೈಫಲ್ಯ ಆಗಿರುವ ಅನುಮಾನ ಇದೆ. ಈ ಗಲಭೆ ಹಿಂದೆ ಯಾರಿದ್ದಾರೆ ಎಂಬುದರ ಕುರಿತೂ ತನಿಖೆ ನಡೆಯುತ್ತಿದೆ’ ಎಂದರು.</p><p>‘ನನಗಿರುವ ಮಾಹಿತಿ ಪ್ರಕಾರ ಸಾಮೂಹಿಕ ಗಣಪತಿ ಮೆರವಣಿಗೆಗೆ ನಾಲ್ಕೈದು ಗಣಪತಿಗಳು ಮಾತ್ರ ಇದ್ದವು. ಬೆಂಗಳೂರಿನಿಂದ ಖರೀದಿ ಮಾಡಿ ತಂದು ಸಂಖ್ಯೆ ಜಾಸ್ತಿ ಮಾಡಿಕೊಳ್ಳುವ ಪ್ರಯತ್ನವನ್ನು ಬಿಜೆಪಿ–ಜೆಡಿಎಸ್ನವರು ಮಾಡಿದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>