<p><strong>ನಾಗಮಂಗಲ</strong>: ‘ಜನಸಾಮಾನ್ಯರಿಗೆ ಮೂಲಸೌಕರ್ಯ ಕಲ್ಪಿಸುವುದು ಮೊದಲ ಆದ್ಯತೆಯಾಗಿರುವ ಹಿನ್ನೆಲೆಯಲ್ಲಿ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹೈಟೆಕ್ ಶೌಚಾಲಯ ನಿರ್ಮಿಸಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.</p>.<p>ಪಟ್ಟಣದ ಟಿ.ಮರಿಯಪ್ಪ ವೃತ್ತದ ಪ್ರಯಾಣಿಕರ ತಂಗುದಾಣದ ಹಿಂಭಾಗದಲ್ಲಿ ಸಾರ್ವಜನಿಕ ಖಾಸಗಿ ಪಾಲುದಾರಿಕೆ ಪದ್ಧತಿಯಲ್ಲಿ ಭರವಸೆ ಸಾಮಾಜಿಕ ಸೇವಾ ಸಂಸ್ಥೆ ವತಿಯಿಂದ ₹15 ಲಕ್ಷ ವೆಚ್ಚದ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಶೌಚಾಲಯ ಬಳಸಲು ಜನರು ಎಷ್ಟು ಹಣ ಪಾವತಿಸಬೇಕಾಗುತ್ತದೆ ಎಂಬುದರ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ದರ ನಿಗದಿಪಡಿಸಲಾಗುವುದು ಎಂದರು.</p>.<p>ಪಟ್ಟಣದ ಹೃದಯಭಾಗದಲ್ಲಿ ನಿರ್ಮಾಣಗೊಳ್ಳುವ ಈ ಶೌಚಾಲಯ ಇಡೀ ಪಟ್ಟಣಕ್ಕೆ ಆಕರ್ಷಣೆಯಾಗುವಂತಿರಬೇಕು. ಕಾಮಗಾರಿ ನಿರ್ವಹಿಸುವ ಏಜೆನ್ಸಿಯವರು ಮೂರು ತಿಂಗಳಲ್ಲಿ ಗುಣಮಟ್ಟದಿಂದ ಕೂಡಿರುವ ಹೈಟೆಕ್ ಶೌಚಾಲಯ ನಿರ್ಮಿಸಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಬೇಕು’ ಎಂದು ಗುತ್ತಿಗೆದಾರರಿಗೆ ಸೂಚಿಸಿದರು.</p>.<p>ಈ ಜಾಗದಲ್ಲಿರುವ ಪ್ರಯಾಣಿಕರ ತಂಗುದಾಣವನ್ನು ಸ್ಥಳಾಂತರಿಸುವ ಕುರಿತು ಸ್ಥಳೀಯ ಜನರಿಂದ ಅಭಿಪ್ರಾಯ ಸಂಗ್ರಹಿಸಿದರು.</p>.<p>ಟಿ.ಮರಿಯಪ್ಪ ವೃತ್ತದಲ್ಲಿ ಸಾರಿಗೆ ಮತ್ತು ಕೆಲ ಖಾಸಗಿ ಬಸ್ಗಳು ಬಹಳ ಹೊತ್ತು ನಿಲ್ಲುವುದರಿಂದ ಹೆದ್ದಾರಿಯ ವಾಹನಗಳ ಸಂಚಾರಕ್ಕೆ ಮತ್ತು ಪಾದಾಚಾರಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿರುವ ಬಗ್ಗೆ ವ್ಯಾಪಕವಾಗಿ ದೂರುಗಳು ಕೇಳಿಬರುತ್ತಿವೆ. ಹಾಗಾಗಿ ಈ ವೃತ್ತದಲ್ಲಿ ಯಾವುದೇ ಬಸ್ಗಳು ನಿಲ್ಲಬಾರದು, ಪ್ರಯಾಣಿಕರನ್ನು ಇಳಿಸಿ ಹತ್ತಿಸಿಕೊಂಡ ತಕ್ಷಣ ತೆರಳುವಂತೆ ಕ್ರಮವಹಿಸಬೇಕೆಂದು ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಅವರಿಗೆ ಸೂಚಿಸಿದರು.</p>.<p>ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ತಹಶೀಲ್ದಾರ್ ಜಿ.ಆದರ್ಶ, ತಾ.ಪಂ. ಇಒ ಬಿ.ಎಸ್.ಸತೀಶ್, ಪುರಸಭೆ ಮುಖ್ಯಾಧಿಕಾರಿ ವೀಣಾ, ಹಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್, ಪುರಸಭೆ ಮಾಜಿ ಅಧ್ಯಕ್ಷ ತಿಮ್ಮಪ್ಪ, ಮುಖಂಡರಾದ ಸುನಿಲ್ ಲಕ್ಷ್ಮೀಕಾಂತ್, ಫಣಿಕಿರಣ್, ರವಿಕಾಂತೇಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-40-855082509</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ</strong>: ‘ಜನಸಾಮಾನ್ಯರಿಗೆ ಮೂಲಸೌಕರ್ಯ ಕಲ್ಪಿಸುವುದು ಮೊದಲ ಆದ್ಯತೆಯಾಗಿರುವ ಹಿನ್ನೆಲೆಯಲ್ಲಿ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹೈಟೆಕ್ ಶೌಚಾಲಯ ನಿರ್ಮಿಸಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.</p>.<p>ಪಟ್ಟಣದ ಟಿ.ಮರಿಯಪ್ಪ ವೃತ್ತದ ಪ್ರಯಾಣಿಕರ ತಂಗುದಾಣದ ಹಿಂಭಾಗದಲ್ಲಿ ಸಾರ್ವಜನಿಕ ಖಾಸಗಿ ಪಾಲುದಾರಿಕೆ ಪದ್ಧತಿಯಲ್ಲಿ ಭರವಸೆ ಸಾಮಾಜಿಕ ಸೇವಾ ಸಂಸ್ಥೆ ವತಿಯಿಂದ ₹15 ಲಕ್ಷ ವೆಚ್ಚದ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಶೌಚಾಲಯ ಬಳಸಲು ಜನರು ಎಷ್ಟು ಹಣ ಪಾವತಿಸಬೇಕಾಗುತ್ತದೆ ಎಂಬುದರ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ದರ ನಿಗದಿಪಡಿಸಲಾಗುವುದು ಎಂದರು.</p>.<p>ಪಟ್ಟಣದ ಹೃದಯಭಾಗದಲ್ಲಿ ನಿರ್ಮಾಣಗೊಳ್ಳುವ ಈ ಶೌಚಾಲಯ ಇಡೀ ಪಟ್ಟಣಕ್ಕೆ ಆಕರ್ಷಣೆಯಾಗುವಂತಿರಬೇಕು. ಕಾಮಗಾರಿ ನಿರ್ವಹಿಸುವ ಏಜೆನ್ಸಿಯವರು ಮೂರು ತಿಂಗಳಲ್ಲಿ ಗುಣಮಟ್ಟದಿಂದ ಕೂಡಿರುವ ಹೈಟೆಕ್ ಶೌಚಾಲಯ ನಿರ್ಮಿಸಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಬೇಕು’ ಎಂದು ಗುತ್ತಿಗೆದಾರರಿಗೆ ಸೂಚಿಸಿದರು.</p>.<p>ಈ ಜಾಗದಲ್ಲಿರುವ ಪ್ರಯಾಣಿಕರ ತಂಗುದಾಣವನ್ನು ಸ್ಥಳಾಂತರಿಸುವ ಕುರಿತು ಸ್ಥಳೀಯ ಜನರಿಂದ ಅಭಿಪ್ರಾಯ ಸಂಗ್ರಹಿಸಿದರು.</p>.<p>ಟಿ.ಮರಿಯಪ್ಪ ವೃತ್ತದಲ್ಲಿ ಸಾರಿಗೆ ಮತ್ತು ಕೆಲ ಖಾಸಗಿ ಬಸ್ಗಳು ಬಹಳ ಹೊತ್ತು ನಿಲ್ಲುವುದರಿಂದ ಹೆದ್ದಾರಿಯ ವಾಹನಗಳ ಸಂಚಾರಕ್ಕೆ ಮತ್ತು ಪಾದಾಚಾರಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿರುವ ಬಗ್ಗೆ ವ್ಯಾಪಕವಾಗಿ ದೂರುಗಳು ಕೇಳಿಬರುತ್ತಿವೆ. ಹಾಗಾಗಿ ಈ ವೃತ್ತದಲ್ಲಿ ಯಾವುದೇ ಬಸ್ಗಳು ನಿಲ್ಲಬಾರದು, ಪ್ರಯಾಣಿಕರನ್ನು ಇಳಿಸಿ ಹತ್ತಿಸಿಕೊಂಡ ತಕ್ಷಣ ತೆರಳುವಂತೆ ಕ್ರಮವಹಿಸಬೇಕೆಂದು ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಅವರಿಗೆ ಸೂಚಿಸಿದರು.</p>.<p>ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ತಹಶೀಲ್ದಾರ್ ಜಿ.ಆದರ್ಶ, ತಾ.ಪಂ. ಇಒ ಬಿ.ಎಸ್.ಸತೀಶ್, ಪುರಸಭೆ ಮುಖ್ಯಾಧಿಕಾರಿ ವೀಣಾ, ಹಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್, ಪುರಸಭೆ ಮಾಜಿ ಅಧ್ಯಕ್ಷ ತಿಮ್ಮಪ್ಪ, ಮುಖಂಡರಾದ ಸುನಿಲ್ ಲಕ್ಷ್ಮೀಕಾಂತ್, ಫಣಿಕಿರಣ್, ರವಿಕಾಂತೇಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-40-855082509</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>