ಮಂಡ್ಯ: ನಾಗಮಂಗಲ ಶಾಸಕ ಕೆ.ಸುರೇಶ್ಗೌಡ ಅವರಿಗೆ ಕೋವಿಡ್–19 ದೃಢಪಟ್ಟಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ತಲೆನೋವು, ಜ್ವರ ಕಾಣಿಸಿಕೊಂಡಿದ್ದರಿಂದ ಸ್ವಯಂ ಪ್ರೇರಿತರಾಗಿ ಗಂಟಲು ದ್ರವ ಪರೀಕ್ಷೆಗೆ ಒಳಗಾಗಿದ್ದರು. ಅವರ ಕಾರು ಚಾಲಕನಿಗೂ ಕೋವಿಡ್ ಖಚಿತವಾಗಿದೆ. ಶಾಸಕರ ಇಂದಿರಾನಗರದ ಮನೆಯನ್ನು ಸೀಲ್ಡೌನ್ ಮಾಡಲಾಗಿದೆ.