<p><strong>ನಾಗಮಂಗಲ</strong>: ‘ಗಲಭೆಯ ಸಿಸಿ ಟಿ.ವಿ ದೃಶ್ಯಾವಳಿ ನೋಡಿಯೋ, ಗುಂಪಿನಲ್ಲಿದ್ದರು ಎಂಬ ಕಾರಣಕ್ಕೋ ಹಲವು ಯುವಕರನ್ನು ಬಂಧಿಸಲಾಗಿದ್ದು, ಯಾರು ಅಮಾಯಕರಿದ್ದಾರೋ ಅವರನ್ನು ಆರೋಪಪಟ್ಟಿಯಿಂದ ಕೈಬಿಡಲಾಗುವುದು. ಕುಟುಂಬದ ಸದಸ್ಯರು ಆತಂಕ ಪಡುವುದು ಬೇಡ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.</p>.<p>ಪಟ್ಟಣದ ಬಿಂಡಿಗನವಿಲೆ ರಸ್ತೆಯಲ್ಲಿರುವ ಕೃಷ್ಣಪ್ಪ ಕಲ್ಯಾಣ ಮಂಟಪದಲ್ಲಿ ಶನಿವಾರ ಬೆಳಿಗ್ಗೆ ಜರುಗಿದ ಶಾಂತಿ ಸಭೆಯ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಶಾಂತಿ ಸಭೆಯಲ್ಲಿ ಹಿಂದೂ ಮುಸ್ಲಿಮರು ಅಣ್ಣ ತಮ್ಮರಂತೆ ಕುಳಿತಿದ್ದರು. ಗಣೇಶ ಉತ್ಸವ, ಮುಸ್ಲಿಂ ಹಬ್ಬಗಳಿಗೂ ಪರಸ್ಪರ ಸಹಕಾರವನ್ನು ಪಡೆಯುತ್ತೇವೆ ಎಂದು ಎರಡು ಸಮುದಾಯಗಳ ಹಿರಿಯರು ಹೇಳಿದ್ದಾರೆ. ಗಲಭೆಯಿಂದ ಹಾನಿಗೊಳಗಾದವರಿಗೆ ಪರಿಹಾರ, ಬಂಧಿತ ಅಮಾಯಕರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಅಗತ್ಯ ಕ್ರಮವಹಿಸುತ್ತೇತೆ ಎಂದರು.</p>.<p> ‘ಈಗ ನಾಗಮಂಗಲ ಪಟ್ಟಣವು ಸಹಜ ಸ್ಥಿತಿಗೆ ಮರಳಿದೆ. ಘಟನೆ ಹಿಂದೆ ಯಾರ ಕೈವಾಡವಿದೆ? ಎಂದು ತಿಳಿಯಲು ವಿಶೇಷ ತನಿಖೆ ನಡೆಸಲು ಕ್ರಮವಹಿಸಲಾಗುವುದು. ಹಾನಿಯ ಪ್ರಮಾಣದ ವರದಿಯನ್ನೂ ಸಿದ್ಧಪಡಿಸಲಿದ್ದು,ಸರ್ಕಾರದಿಂದ ಸಂತ್ರಸ್ತರ ಪರಿಹಾರಕ್ಕೆ ಕ್ರಮವಹಿಸಲಾಗುವುದು’ ಎಂದರು.</p>.<p>ಅಲ್ಲದೇ ಶುಕ್ರವಾರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ್ದಾರೆ. ಗಲಭೆಯಿಂದ ನೊಂದವರಿಗೆ ಪರಿಹಾರ ಕೊಡುವ ಕೆಲಸವನ್ನು ಮಾಡಿದ್ದು, ಅಭಿನಂದನೆ ಸಲ್ಲಿಸುತ್ತೇನೆ. ಇಂತ ಸಮಯದಲ್ಲಿ ರಾಜಕೀಯ ಬೇಡ ಎಂದು ಎಲ್ಲರಲ್ಲೂ ಮನವಿ ಮಾಡುತ್ತೇನೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ</strong>: ‘ಗಲಭೆಯ ಸಿಸಿ ಟಿ.ವಿ ದೃಶ್ಯಾವಳಿ ನೋಡಿಯೋ, ಗುಂಪಿನಲ್ಲಿದ್ದರು ಎಂಬ ಕಾರಣಕ್ಕೋ ಹಲವು ಯುವಕರನ್ನು ಬಂಧಿಸಲಾಗಿದ್ದು, ಯಾರು ಅಮಾಯಕರಿದ್ದಾರೋ ಅವರನ್ನು ಆರೋಪಪಟ್ಟಿಯಿಂದ ಕೈಬಿಡಲಾಗುವುದು. ಕುಟುಂಬದ ಸದಸ್ಯರು ಆತಂಕ ಪಡುವುದು ಬೇಡ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.</p>.<p>ಪಟ್ಟಣದ ಬಿಂಡಿಗನವಿಲೆ ರಸ್ತೆಯಲ್ಲಿರುವ ಕೃಷ್ಣಪ್ಪ ಕಲ್ಯಾಣ ಮಂಟಪದಲ್ಲಿ ಶನಿವಾರ ಬೆಳಿಗ್ಗೆ ಜರುಗಿದ ಶಾಂತಿ ಸಭೆಯ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಶಾಂತಿ ಸಭೆಯಲ್ಲಿ ಹಿಂದೂ ಮುಸ್ಲಿಮರು ಅಣ್ಣ ತಮ್ಮರಂತೆ ಕುಳಿತಿದ್ದರು. ಗಣೇಶ ಉತ್ಸವ, ಮುಸ್ಲಿಂ ಹಬ್ಬಗಳಿಗೂ ಪರಸ್ಪರ ಸಹಕಾರವನ್ನು ಪಡೆಯುತ್ತೇವೆ ಎಂದು ಎರಡು ಸಮುದಾಯಗಳ ಹಿರಿಯರು ಹೇಳಿದ್ದಾರೆ. ಗಲಭೆಯಿಂದ ಹಾನಿಗೊಳಗಾದವರಿಗೆ ಪರಿಹಾರ, ಬಂಧಿತ ಅಮಾಯಕರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಅಗತ್ಯ ಕ್ರಮವಹಿಸುತ್ತೇತೆ ಎಂದರು.</p>.<p> ‘ಈಗ ನಾಗಮಂಗಲ ಪಟ್ಟಣವು ಸಹಜ ಸ್ಥಿತಿಗೆ ಮರಳಿದೆ. ಘಟನೆ ಹಿಂದೆ ಯಾರ ಕೈವಾಡವಿದೆ? ಎಂದು ತಿಳಿಯಲು ವಿಶೇಷ ತನಿಖೆ ನಡೆಸಲು ಕ್ರಮವಹಿಸಲಾಗುವುದು. ಹಾನಿಯ ಪ್ರಮಾಣದ ವರದಿಯನ್ನೂ ಸಿದ್ಧಪಡಿಸಲಿದ್ದು,ಸರ್ಕಾರದಿಂದ ಸಂತ್ರಸ್ತರ ಪರಿಹಾರಕ್ಕೆ ಕ್ರಮವಹಿಸಲಾಗುವುದು’ ಎಂದರು.</p>.<p>ಅಲ್ಲದೇ ಶುಕ್ರವಾರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ್ದಾರೆ. ಗಲಭೆಯಿಂದ ನೊಂದವರಿಗೆ ಪರಿಹಾರ ಕೊಡುವ ಕೆಲಸವನ್ನು ಮಾಡಿದ್ದು, ಅಭಿನಂದನೆ ಸಲ್ಲಿಸುತ್ತೇನೆ. ಇಂತ ಸಮಯದಲ್ಲಿ ರಾಜಕೀಯ ಬೇಡ ಎಂದು ಎಲ್ಲರಲ್ಲೂ ಮನವಿ ಮಾಡುತ್ತೇನೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>