<p><strong>ಮಂಡ್ಯ:</strong> ‘ಜೀವನಕ್ಕೆ ಆಸರೆಯಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಎಂದಿಗೂ ಜನರ ಮನಸಲ್ಲಿ ಹಸಿರಾಗಿ ಉಳಿಯುತ್ತಾರೆ’ ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಶ್ಲಾಘಿಸಿದರು.</p>.<p>ನಗರದ ಮಹಾವೀರ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ವತಿಯಿಂದ ಭಾನುವಾರ ನಡೆದ ನಾಲ್ವಡಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.</p>.<p>ಏಷ್ಯಾ ಖಂಡದಲ್ಲೇ ಪ್ರಥಮವಾಗಿ ಜಲವಿದ್ಯುತ್ ಯೋಜನೆ ನಿರ್ಮಾಣ, ಕೋಲಾರದ ಚಿನ್ನದ ಗಣಿ ಸ್ಥಾಪನೆ ಸೇರಿ ಜನಪರ ಯೋಜನೆಗಳಿಗೆ ಸಾಕ್ಷಿಯಾದ ನಾಲ್ವಡಿ ಅವರು ಇಂದಿಗೂ ಪ್ರಸ್ತುತವಾಗಿದ್ದಾರೆ. ನಮಗೆ ಜನ್ಮ ಕೊಟ್ಟವರು ತಂದೆ ತಾಯಿ ಆದರೆ, ಜೀವನ ಕೊಟ್ಟವರು ನಾಲ್ವಡಿ ಎನ್ನಬೇಕು ಎಂದು ತಿಳಿಸಿದರು.</p>.<p>ರೈತರ ಕಷ್ಟ ಅರಿತುಕೊಂಡ ನಾಲ್ವಡಿ ಅವರು ಕೆಆರ್ಎಸ್ ಅಣೆಕಟ್ಟೆ ನಿರ್ಮಾಣ ಮಾಡುವ ಮೂಲಕ ಬೆಳಕಾದರು. ಅಣೆಕಟ್ಟೆ ನಿರ್ಮಾಣಕ್ಕೆಂದು ತನ್ನ ಪತ್ನಿಯ ಒಡವೆ ಮಾರಿ ಅಣೆಕಟ್ಟೆ ಪೂರ್ಣಗೊಳಿಸಿ ಮಾದರಿಯಾದ ಮಹಾರಾಜರೆಂದರೆ ಅದು ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದರೆ ಅತಿಶಯೋಕ್ತಿಯಲ್ಲ ಎಂದರು.</p>.<p>ನಂಜಮ್ಮ ಮೋಟೇಗೌಡ ಚಾರಿಟಬಲ್ ಟ್ರಸ್ಟ್ನ ಕೆ.ಟಿ.ಹನುಮಂತು ಮಾತನಾಡಿ, ಪ್ರಸ್ತುತದಲ್ಲಿ ನಾಲ್ವಡಿ ಅವರನ್ನು ಮರೆಯುತ್ತಿರುವ ಸನ್ನಿವೇಶ ಎದುರಾಗಿದೆ, ಇದನ್ನು ತಪ್ಪಿಸಲು ನಾಲ್ವಡಿ ಅವರ ಕೊಡುಗೆಗಳನ್ನು ಪ್ರತಿ ಶಾಲಾ ಮತ್ತು ಕಾಲೇಜು ಹಂತದಲ್ಲಿ ತಿಳಿಸುವ ಕೆಲಸ ಆಗಬೇಕು ಎಂದು ಅಭಿಪ್ರಾಯಪಟ್ಟರು.</p>.<p>ಮುಖಂಡರಾದ ಬೋರ್ವೇಲ್ ಎಸ್.ನಾರಾಯಣ್, ಅಪ್ಪಾಜಪ್ಪ, ಸಾತನೂರು ಜಯರಾಂ, ಚಂದಗಾಲು ಲೋಕೇಶ್, ಬೇಲೂರು ಸೋಮಶೇಖರ್, ಶಕುಂತಲಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಜೀವನಕ್ಕೆ ಆಸರೆಯಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಎಂದಿಗೂ ಜನರ ಮನಸಲ್ಲಿ ಹಸಿರಾಗಿ ಉಳಿಯುತ್ತಾರೆ’ ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಶ್ಲಾಘಿಸಿದರು.</p>.<p>ನಗರದ ಮಹಾವೀರ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ವತಿಯಿಂದ ಭಾನುವಾರ ನಡೆದ ನಾಲ್ವಡಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.</p>.<p>ಏಷ್ಯಾ ಖಂಡದಲ್ಲೇ ಪ್ರಥಮವಾಗಿ ಜಲವಿದ್ಯುತ್ ಯೋಜನೆ ನಿರ್ಮಾಣ, ಕೋಲಾರದ ಚಿನ್ನದ ಗಣಿ ಸ್ಥಾಪನೆ ಸೇರಿ ಜನಪರ ಯೋಜನೆಗಳಿಗೆ ಸಾಕ್ಷಿಯಾದ ನಾಲ್ವಡಿ ಅವರು ಇಂದಿಗೂ ಪ್ರಸ್ತುತವಾಗಿದ್ದಾರೆ. ನಮಗೆ ಜನ್ಮ ಕೊಟ್ಟವರು ತಂದೆ ತಾಯಿ ಆದರೆ, ಜೀವನ ಕೊಟ್ಟವರು ನಾಲ್ವಡಿ ಎನ್ನಬೇಕು ಎಂದು ತಿಳಿಸಿದರು.</p>.<p>ರೈತರ ಕಷ್ಟ ಅರಿತುಕೊಂಡ ನಾಲ್ವಡಿ ಅವರು ಕೆಆರ್ಎಸ್ ಅಣೆಕಟ್ಟೆ ನಿರ್ಮಾಣ ಮಾಡುವ ಮೂಲಕ ಬೆಳಕಾದರು. ಅಣೆಕಟ್ಟೆ ನಿರ್ಮಾಣಕ್ಕೆಂದು ತನ್ನ ಪತ್ನಿಯ ಒಡವೆ ಮಾರಿ ಅಣೆಕಟ್ಟೆ ಪೂರ್ಣಗೊಳಿಸಿ ಮಾದರಿಯಾದ ಮಹಾರಾಜರೆಂದರೆ ಅದು ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದರೆ ಅತಿಶಯೋಕ್ತಿಯಲ್ಲ ಎಂದರು.</p>.<p>ನಂಜಮ್ಮ ಮೋಟೇಗೌಡ ಚಾರಿಟಬಲ್ ಟ್ರಸ್ಟ್ನ ಕೆ.ಟಿ.ಹನುಮಂತು ಮಾತನಾಡಿ, ಪ್ರಸ್ತುತದಲ್ಲಿ ನಾಲ್ವಡಿ ಅವರನ್ನು ಮರೆಯುತ್ತಿರುವ ಸನ್ನಿವೇಶ ಎದುರಾಗಿದೆ, ಇದನ್ನು ತಪ್ಪಿಸಲು ನಾಲ್ವಡಿ ಅವರ ಕೊಡುಗೆಗಳನ್ನು ಪ್ರತಿ ಶಾಲಾ ಮತ್ತು ಕಾಲೇಜು ಹಂತದಲ್ಲಿ ತಿಳಿಸುವ ಕೆಲಸ ಆಗಬೇಕು ಎಂದು ಅಭಿಪ್ರಾಯಪಟ್ಟರು.</p>.<p>ಮುಖಂಡರಾದ ಬೋರ್ವೇಲ್ ಎಸ್.ನಾರಾಯಣ್, ಅಪ್ಪಾಜಪ್ಪ, ಸಾತನೂರು ಜಯರಾಂ, ಚಂದಗಾಲು ಲೋಕೇಶ್, ಬೇಲೂರು ಸೋಮಶೇಖರ್, ಶಕುಂತಲಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>