<p><strong>ಮಂಡ್ಯ</strong>: ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಕೆಂಪೇಗೌಡರ ಕೊಡುಗೆ ಸಮಾಜಕ್ಕೆ ಅಪಾರ. ಇಬ್ಬರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ನಡೆದ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಜೂನ್ 4ರಂದು ಬೆಳಿಗ್ಗೆ 11ಕ್ಕೆ ಕಲಾಮಂದಿರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜೂನ್ 27ರಂದು ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ಬೆಳಿಗ್ಗೆ 11.30ಕ್ಕೆ ಕೆಂಪೇಗೌಡ ಅವರ ಜಯಂತಿ ಆಚರಿಸಲಾಗುವುದು ಎಂದರು.</p>.<p><strong>ಮೆರವಣಿಗೆ</strong>: ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಕೆಂಪೇಗೌಡ ಮಹನೀಯರ ಜಯಂತಿಯ ಪ್ರಯುಕ್ತ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳ್ಳಿಗೆ 9.30ಕ್ಕೆ ವರ್ಣರಂಜಿತ ರಥದಲ್ಲಿ ಮೆರವಣಿಗೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.</p>.<p>ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸುವ ವ್ಯವಸ್ಥೆ ಮಾಡಿ. ಇದರೊಂದಿಗೆ ಪೂರ್ಣಕುಂಭ ಹೊತ್ತ ಮಹಿಳೆಯರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳಿ ಎಂದರು.</p>.<p>ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಸಂಜಯ ವೃತ್ತದಲ್ಲಿ ಮಹನೀಯರ ಭಾವಚಿತ್ರವನ್ನು ಇರಿಸಿ ಪುಷ್ಪಾರ್ಚನೆ ಸಲ್ಲಿಸಿ ನಂತರ ಮೆರವಣಿಗೆಯು ಕಲಾಮಂದಿರದವರೆಗೆ ವಿಜೃಂಭಣೆಯಿಂದ ಸಾಗುವುದು ಎಂದು ತಿಳಿಸಿದರು.<br> <br>ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಬಿ.ವಿ ನಂದೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲಾ, ವಿವಿಧ ಸಂಘ ಸಂಸ್ಥೆಗಳ ಮುಖಂಡರಾದ ಕೃಷ್ಣ, ಸೌಭಾಗ್ಯ, ರಮೇಶ್ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಕೆಂಪೇಗೌಡರ ಕೊಡುಗೆ ಸಮಾಜಕ್ಕೆ ಅಪಾರ. ಇಬ್ಬರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ನಡೆದ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಜೂನ್ 4ರಂದು ಬೆಳಿಗ್ಗೆ 11ಕ್ಕೆ ಕಲಾಮಂದಿರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜೂನ್ 27ರಂದು ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ಬೆಳಿಗ್ಗೆ 11.30ಕ್ಕೆ ಕೆಂಪೇಗೌಡ ಅವರ ಜಯಂತಿ ಆಚರಿಸಲಾಗುವುದು ಎಂದರು.</p>.<p><strong>ಮೆರವಣಿಗೆ</strong>: ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಕೆಂಪೇಗೌಡ ಮಹನೀಯರ ಜಯಂತಿಯ ಪ್ರಯುಕ್ತ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳ್ಳಿಗೆ 9.30ಕ್ಕೆ ವರ್ಣರಂಜಿತ ರಥದಲ್ಲಿ ಮೆರವಣಿಗೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.</p>.<p>ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸುವ ವ್ಯವಸ್ಥೆ ಮಾಡಿ. ಇದರೊಂದಿಗೆ ಪೂರ್ಣಕುಂಭ ಹೊತ್ತ ಮಹಿಳೆಯರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳಿ ಎಂದರು.</p>.<p>ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಸಂಜಯ ವೃತ್ತದಲ್ಲಿ ಮಹನೀಯರ ಭಾವಚಿತ್ರವನ್ನು ಇರಿಸಿ ಪುಷ್ಪಾರ್ಚನೆ ಸಲ್ಲಿಸಿ ನಂತರ ಮೆರವಣಿಗೆಯು ಕಲಾಮಂದಿರದವರೆಗೆ ವಿಜೃಂಭಣೆಯಿಂದ ಸಾಗುವುದು ಎಂದು ತಿಳಿಸಿದರು.<br> <br>ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಬಿ.ವಿ ನಂದೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲಾ, ವಿವಿಧ ಸಂಘ ಸಂಸ್ಥೆಗಳ ಮುಖಂಡರಾದ ಕೃಷ್ಣ, ಸೌಭಾಗ್ಯ, ರಮೇಶ್ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>