<p><strong>ಮಂಡ್ಯ: </strong>ಸಾರ್ವಜನಿಕ ಸೇವೆ ಸುಧಾರಣೆಯ ಸಾಧನೆಗೆ ಭಾರತ ಸರ್ಕಾರ ನೀಡುವ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ (ಸಾಮಾನ್ಯ) ರಾಷ್ಟ್ರೀಯ ಪುರಸ್ಕಾರಕ್ಕೆ ಮಂಡ್ಯ ಜಿಲ್ಲಾ ಪಂಚಾಯಿತಿ ಆಯ್ಕೆಯಾಗಿದೆ.</p>.<p>2018–19ನೇ ಸಾಲಿನ ಕಾರ್ಯಕ್ಷಮತೆ ಮತ್ತು ಪ್ರಗತಿಯನ್ನು ಆಧರಿಸಿ ಸರ್ಕಾರ ಈ ಪ್ರಶಸ್ತಿ ಘೋಷಿಸಿದೆ. ಪ್ರಶಸ್ತಿಯು ₹ 50 ಲಕ್ಷ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಅದೇ ರೀತಿ ಜಿಲ್ಲೆಯ ಇತರ ಮೂರು ಗ್ರಾಮ ಪಂಚಾಯಿತಿಗಳಿಗೂ ವಿವಿಧ ಪ್ರಶಸ್ತಿಗೆ ಆಯ್ಕೆಯಾಗಿವೆ.</p>.<p>ದೀನ್ ದಯಾಳ್ ಉಪಾಧ್ಯಾಯ ಸಶಕ್ತ (ವಿಷಯಾಧಾರಿತ) ಪುರಸ್ಕಾರಕ್ಕೆ ಮದ್ದೂರು ತಾಲ್ಲೂಕು ಅಣ್ಣೂರು ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. ₹ 10 ಲಕ್ಷ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ. ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಪುರಸ್ಕಾರಕ್ಕೆ ಮದ್ದೂರು ತಾಲ್ಲೂಕು ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. ₹ 5 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.</p>.<p>ನಮ್ಮ ಗ್ರಾಮ ನಮ್ಮ ಯೋಜನೆ ವಿಭಾಗದ ಪ್ರಶಸ್ತಿಗೆ ಶ್ರೀರಂಗಪಟ್ಟಣ ತಾಲ್ಲೂಕು ನಗುವಿನಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ‘ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಶಸ್ತಿ ಪ್ರದಾನ ದಿನಾಂಕವನ್ನು ಮುಂದೂಡಲಾಗಿದೆ. ಶೀಘ್ರ ಸರ್ಕಾರ ದಿನಾಂಕ ನಿಗದಿ ಮಾಡಲಿದೆ’ ಎಂದು ಜಿಪಂ ಸಿಇಒ ಕೆ.ಯಾಲಕ್ಕಿಗೌಡ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಸಾರ್ವಜನಿಕ ಸೇವೆ ಸುಧಾರಣೆಯ ಸಾಧನೆಗೆ ಭಾರತ ಸರ್ಕಾರ ನೀಡುವ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ (ಸಾಮಾನ್ಯ) ರಾಷ್ಟ್ರೀಯ ಪುರಸ್ಕಾರಕ್ಕೆ ಮಂಡ್ಯ ಜಿಲ್ಲಾ ಪಂಚಾಯಿತಿ ಆಯ್ಕೆಯಾಗಿದೆ.</p>.<p>2018–19ನೇ ಸಾಲಿನ ಕಾರ್ಯಕ್ಷಮತೆ ಮತ್ತು ಪ್ರಗತಿಯನ್ನು ಆಧರಿಸಿ ಸರ್ಕಾರ ಈ ಪ್ರಶಸ್ತಿ ಘೋಷಿಸಿದೆ. ಪ್ರಶಸ್ತಿಯು ₹ 50 ಲಕ್ಷ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಅದೇ ರೀತಿ ಜಿಲ್ಲೆಯ ಇತರ ಮೂರು ಗ್ರಾಮ ಪಂಚಾಯಿತಿಗಳಿಗೂ ವಿವಿಧ ಪ್ರಶಸ್ತಿಗೆ ಆಯ್ಕೆಯಾಗಿವೆ.</p>.<p>ದೀನ್ ದಯಾಳ್ ಉಪಾಧ್ಯಾಯ ಸಶಕ್ತ (ವಿಷಯಾಧಾರಿತ) ಪುರಸ್ಕಾರಕ್ಕೆ ಮದ್ದೂರು ತಾಲ್ಲೂಕು ಅಣ್ಣೂರು ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. ₹ 10 ಲಕ್ಷ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ. ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಪುರಸ್ಕಾರಕ್ಕೆ ಮದ್ದೂರು ತಾಲ್ಲೂಕು ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. ₹ 5 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.</p>.<p>ನಮ್ಮ ಗ್ರಾಮ ನಮ್ಮ ಯೋಜನೆ ವಿಭಾಗದ ಪ್ರಶಸ್ತಿಗೆ ಶ್ರೀರಂಗಪಟ್ಟಣ ತಾಲ್ಲೂಕು ನಗುವಿನಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ‘ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಶಸ್ತಿ ಪ್ರದಾನ ದಿನಾಂಕವನ್ನು ಮುಂದೂಡಲಾಗಿದೆ. ಶೀಘ್ರ ಸರ್ಕಾರ ದಿನಾಂಕ ನಿಗದಿ ಮಾಡಲಿದೆ’ ಎಂದು ಜಿಪಂ ಸಿಇಒ ಕೆ.ಯಾಲಕ್ಕಿಗೌಡ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>