ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

Last Updated 18 ಜೂನ್ 2020, 14:43 IST
ಅಕ್ಷರ ಗಾತ್ರ

ಮಂಡ್ಯ: ಸಾರ್ವಜನಿಕ ಸೇವೆ ಸುಧಾರಣೆಯ ಸಾಧನೆಗೆ ಭಾರತ ಸರ್ಕಾರ ನೀಡುವ ದೀನ್‌ ದಯಾಳ್‌ ಉಪಾಧ್ಯಾಯ ಪಂಚಾಯತ್‌ ಸಶಕ್ತೀಕರಣ (ಸಾಮಾನ್ಯ) ರಾಷ್ಟ್ರೀಯ ಪುರಸ್ಕಾರಕ್ಕೆ ಮಂಡ್ಯ ಜಿಲ್ಲಾ ಪಂಚಾಯಿತಿ ಆಯ್ಕೆಯಾಗಿದೆ.

2018–19ನೇ ಸಾಲಿನ ಕಾರ್ಯಕ್ಷಮತೆ ಮತ್ತು ಪ್ರಗತಿಯನ್ನು ಆಧರಿಸಿ ಸರ್ಕಾರ ಈ ಪ್ರಶಸ್ತಿ ಘೋಷಿಸಿದೆ. ಪ್ರಶಸ್ತಿಯು ₹ 50 ಲಕ್ಷ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಅದೇ ರೀತಿ ಜಿಲ್ಲೆಯ ಇತರ ಮೂರು ಗ್ರಾಮ ಪಂಚಾಯಿತಿಗಳಿಗೂ ವಿವಿಧ ಪ್ರಶಸ್ತಿಗೆ ಆಯ್ಕೆಯಾಗಿವೆ.

ದೀನ್‌ ದಯಾಳ್‌ ಉಪಾಧ್ಯಾಯ ಸಶಕ್ತ (ವಿಷಯಾಧಾರಿತ) ಪುರಸ್ಕಾರಕ್ಕೆ ಮದ್ದೂರು ತಾಲ್ಲೂಕು ಅಣ್ಣೂರು ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. ₹ 10 ಲಕ್ಷ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ. ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಪುರಸ್ಕಾರಕ್ಕೆ ಮದ್ದೂರು ತಾಲ್ಲೂಕು ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. ₹ 5 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ನಮ್ಮ ಗ್ರಾಮ ನಮ್ಮ ಯೋಜನೆ ವಿಭಾಗದ ಪ್ರಶಸ್ತಿಗೆ ಶ್ರೀರಂಗಪಟ್ಟಣ ತಾಲ್ಲೂಕು ನಗುವಿನಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ‘ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಶಸ್ತಿ ಪ್ರದಾನ ದಿನಾಂಕವನ್ನು ಮುಂದೂಡಲಾಗಿದೆ. ಶೀಘ್ರ ಸರ್ಕಾರ ದಿನಾಂಕ ನಿಗದಿ ಮಾಡಲಿದೆ’ ಎಂದು ಜಿಪಂ ಸಿಇಒ ಕೆ.ಯಾಲಕ್ಕಿಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT