<p><strong>ಮಂಡ್ಯ: </strong>ನ್ಯಾಷನಲ್ ಇನೋವೇಷನ್ ಫೌಂಡೇಶನ್ ವತಿಯಿಂದ ಪ್ರತಿ ಎರಡು ವರ್ಷಗಳಿಗೊಮ್ಮೆ ಸಾಮಾನ್ಯ ಜನರ ಸಂಶೋಧನೆ ಹಾಗೂ ಸಾಂಪ್ರದಾಯಿಕ ಜ್ಞಾನಕ್ಕಾಗಿ ನಡೆಸುವ 12ನೇ ರಾಷ್ಟ್ರೀಯ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.</p>.<p>ಗ್ರಾಮೀಣ ಮತ್ತು ನಗರ ಪ್ರದೇಶದ ರೈತರು ಕುಶಲಕರ್ಮಿಗಳು, ಮೆಕ್ಯಾನಿಕ್ ಗಳು, ಕೊಳೆಗೇರಿ ನಿವಾಸಿಗಳು, ಮೀನುಗಾರಿಕೆ ಸಂಬಂಧಿತ ಉದ್ಯೋಗದಲ್ಲಿ ತೊಡಗಿರುವವರು ತಮ್ಮ ಆವಿಷ್ಕಾರ, ಅನ್ವೇಷಣೆಗೆ ಸಂಬಂಧಿಸಿದ ಸಂಶೋಧನೆ ಕುರಿತು ಮಾಹಿತಿಯೊಂದಿಗೆ ಈ ವರ್ಷಾಂತ್ಯದೊಳಗೆ ಅರ್ಜಿ ಸಲ್ಲಿಸಬಹುದು.</p>.<p>ಸೃಜನಶೀಲತೆಯಿಂದ ಸಂಶೋಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಸ್ಪರ್ಧೆ ನಡೆಯಲಿದೆ. ಕೃಷಿ ಹಾಗೂ ಕೃಷಿಯೇತರ ಕ್ಷೇತ್ರದಲ್ಲಿ ಉಪಯುಕ್ತವಾಗುವ ಉಪಕರಣಗಳು, ಮಾನವ ಶಕ್ತಿ ಕಡಿಮೆ ಮಾಡುವಂತಹ ಯಂತ್ರಗಳು, ಸಸ್ಯ ಪ್ರಬೇಧಗಳ ಸಂರಕ್ಷಣೆಗೆ ಸಂಬಂಧಿಸಿದ ಸಂಶೋಧನೆ ಮಾಡಿದವರು ಅರ್ಜಿ ಸಲ್ಲಿಸಬಹುದು.</p>.<p>ವಿವಿಧ ವಿಭಾಗಗಳಲ್ಲಿ ₹10 ಸಾವಿರದಿಂದ, ₹7.5 ಲಕ್ಷದವರೆಗೆ ಬಹುಮಾನ ವಿತರಣೆ ಮಾಡಲಾಗುವುದು. ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಪಡೆದವರಿಗೆ ಮಾಸಿಕ ಫೆಲೋಶಿಪ್, ಜೀವಮಾನದ ಸಾಧನೆ ಪ್ರಶಸ್ತಿ ನೀಡಲಾಗುವುದು.</p>.<p>ಹೆಚ್ಚಿನ ಮಾಹಿತಿಗೆ ಮೊ; 9986863337 ಸಂಪರ್ಕಿಸಬಹುದು. ಅರ್ಜಿಗಳನ್ನು ಎನ್ಐಎಫ್ ಕೋಆರ್ಡಿನೇಟರ್, ಸೆಂಟ್ ಥಾಮಸ್ ಮಿಷನ್ ಸೊಸೈಟಿ ಸಾಂಥೋಮ್, ಪಿ.ಬಿ.ನಂ.42, ಪಿಇಎಸ್ ಎಂಜಿನಿಯರಿಂಗ್ ಕಾಲೇಜು ರಸ್ತೆ, ಮಂಡ್ಯ ಇಲ್ಲಿಗೆ ಅರ್ಜಿ ಕಳುಹಿಸಲು ಪ್ರಕಟಣೆ ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ನ್ಯಾಷನಲ್ ಇನೋವೇಷನ್ ಫೌಂಡೇಶನ್ ವತಿಯಿಂದ ಪ್ರತಿ ಎರಡು ವರ್ಷಗಳಿಗೊಮ್ಮೆ ಸಾಮಾನ್ಯ ಜನರ ಸಂಶೋಧನೆ ಹಾಗೂ ಸಾಂಪ್ರದಾಯಿಕ ಜ್ಞಾನಕ್ಕಾಗಿ ನಡೆಸುವ 12ನೇ ರಾಷ್ಟ್ರೀಯ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.</p>.<p>ಗ್ರಾಮೀಣ ಮತ್ತು ನಗರ ಪ್ರದೇಶದ ರೈತರು ಕುಶಲಕರ್ಮಿಗಳು, ಮೆಕ್ಯಾನಿಕ್ ಗಳು, ಕೊಳೆಗೇರಿ ನಿವಾಸಿಗಳು, ಮೀನುಗಾರಿಕೆ ಸಂಬಂಧಿತ ಉದ್ಯೋಗದಲ್ಲಿ ತೊಡಗಿರುವವರು ತಮ್ಮ ಆವಿಷ್ಕಾರ, ಅನ್ವೇಷಣೆಗೆ ಸಂಬಂಧಿಸಿದ ಸಂಶೋಧನೆ ಕುರಿತು ಮಾಹಿತಿಯೊಂದಿಗೆ ಈ ವರ್ಷಾಂತ್ಯದೊಳಗೆ ಅರ್ಜಿ ಸಲ್ಲಿಸಬಹುದು.</p>.<p>ಸೃಜನಶೀಲತೆಯಿಂದ ಸಂಶೋಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಸ್ಪರ್ಧೆ ನಡೆಯಲಿದೆ. ಕೃಷಿ ಹಾಗೂ ಕೃಷಿಯೇತರ ಕ್ಷೇತ್ರದಲ್ಲಿ ಉಪಯುಕ್ತವಾಗುವ ಉಪಕರಣಗಳು, ಮಾನವ ಶಕ್ತಿ ಕಡಿಮೆ ಮಾಡುವಂತಹ ಯಂತ್ರಗಳು, ಸಸ್ಯ ಪ್ರಬೇಧಗಳ ಸಂರಕ್ಷಣೆಗೆ ಸಂಬಂಧಿಸಿದ ಸಂಶೋಧನೆ ಮಾಡಿದವರು ಅರ್ಜಿ ಸಲ್ಲಿಸಬಹುದು.</p>.<p>ವಿವಿಧ ವಿಭಾಗಗಳಲ್ಲಿ ₹10 ಸಾವಿರದಿಂದ, ₹7.5 ಲಕ್ಷದವರೆಗೆ ಬಹುಮಾನ ವಿತರಣೆ ಮಾಡಲಾಗುವುದು. ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಪಡೆದವರಿಗೆ ಮಾಸಿಕ ಫೆಲೋಶಿಪ್, ಜೀವಮಾನದ ಸಾಧನೆ ಪ್ರಶಸ್ತಿ ನೀಡಲಾಗುವುದು.</p>.<p>ಹೆಚ್ಚಿನ ಮಾಹಿತಿಗೆ ಮೊ; 9986863337 ಸಂಪರ್ಕಿಸಬಹುದು. ಅರ್ಜಿಗಳನ್ನು ಎನ್ಐಎಫ್ ಕೋಆರ್ಡಿನೇಟರ್, ಸೆಂಟ್ ಥಾಮಸ್ ಮಿಷನ್ ಸೊಸೈಟಿ ಸಾಂಥೋಮ್, ಪಿ.ಬಿ.ನಂ.42, ಪಿಇಎಸ್ ಎಂಜಿನಿಯರಿಂಗ್ ಕಾಲೇಜು ರಸ್ತೆ, ಮಂಡ್ಯ ಇಲ್ಲಿಗೆ ಅರ್ಜಿ ಕಳುಹಿಸಲು ಪ್ರಕಟಣೆ ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>