<p><strong>ಮಂಡ್ಯ</strong>: ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಜ.25 ರಿಂದ 28ರವರೆಗೆ ರಾಷ್ಟ್ರೀಯ ಸಮ್ಮೇಳನ ಹೈದರಾಬಾದಿನಲ್ಲಿ ನಡೆಯಲಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ‘ಸಾಮ್ರಾಜ್ಯ ಶಾಹಿ ವಿರೋಧಿಸಿ, ಮನುವಾದವನ್ನು ಧಿಕ್ಕರಿಸಿ ಮಹಿಳಾ ಹಕ್ಕುಗಳನ್ನು ಎತ್ತಿ ಹಿಡಿಯೋಣ ಎಂಬ ಘೋಷಣೆಯೊಂದಿಗೆ ಸಮ್ಮೇಳನ ನಡೆಯಲಾಗುತ್ತಿದೆ ಎಂದರು.</p>.<p>ದೇಶದ ಮಹಿಳೆಯರನ್ನು ಎರಡನೇ ದರ್ಜೆ ಪ್ರಜೆಯಾಗಿ ಸಮಾಜದಲ್ಲಿ ಕಾಣಲಾಗುತ್ತಿದೆ. ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ಹೋರಾಟ ಮಾಡುವ ಮೂಲ ಉದ್ದೇಶ ಹೊಂದಲಾಗಿದೆ. ಹಾಗಾಗಿ 14ನೇ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ ಎಂದರು.</p>.<p>ಈ ಸಮ್ಮೇಳನಕ್ಕೆ ಎಲ್ಲ ರಾಜ್ಯಗಳಿಂದ ಸಂಘಟನೆಯ ಪ್ರತಿನಿಧಿಗಳು, ವೀಕ್ಷಕರು ಭಾಗವಹಿಸುವರು. ಜಿಲ್ಲೆಯಿಂದ ಆರು ಜನ ಸೇರಿದಂತೆ ರಾಜ್ಯದಿಂದ ಒಟ್ಟು 25 ಪ್ರತಿನಿಧಿಗಳು ಭಾಗವಹಿಸುವರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಸಂಘಟನೆಯ ಡಿ.ಕೆ.ಲತಾ, ಸುಶೀಲಾ, ಮಂಜುಳಾ, ವಿಶಾಲು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಜ.25 ರಿಂದ 28ರವರೆಗೆ ರಾಷ್ಟ್ರೀಯ ಸಮ್ಮೇಳನ ಹೈದರಾಬಾದಿನಲ್ಲಿ ನಡೆಯಲಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ‘ಸಾಮ್ರಾಜ್ಯ ಶಾಹಿ ವಿರೋಧಿಸಿ, ಮನುವಾದವನ್ನು ಧಿಕ್ಕರಿಸಿ ಮಹಿಳಾ ಹಕ್ಕುಗಳನ್ನು ಎತ್ತಿ ಹಿಡಿಯೋಣ ಎಂಬ ಘೋಷಣೆಯೊಂದಿಗೆ ಸಮ್ಮೇಳನ ನಡೆಯಲಾಗುತ್ತಿದೆ ಎಂದರು.</p>.<p>ದೇಶದ ಮಹಿಳೆಯರನ್ನು ಎರಡನೇ ದರ್ಜೆ ಪ್ರಜೆಯಾಗಿ ಸಮಾಜದಲ್ಲಿ ಕಾಣಲಾಗುತ್ತಿದೆ. ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ಹೋರಾಟ ಮಾಡುವ ಮೂಲ ಉದ್ದೇಶ ಹೊಂದಲಾಗಿದೆ. ಹಾಗಾಗಿ 14ನೇ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ ಎಂದರು.</p>.<p>ಈ ಸಮ್ಮೇಳನಕ್ಕೆ ಎಲ್ಲ ರಾಜ್ಯಗಳಿಂದ ಸಂಘಟನೆಯ ಪ್ರತಿನಿಧಿಗಳು, ವೀಕ್ಷಕರು ಭಾಗವಹಿಸುವರು. ಜಿಲ್ಲೆಯಿಂದ ಆರು ಜನ ಸೇರಿದಂತೆ ರಾಜ್ಯದಿಂದ ಒಟ್ಟು 25 ಪ್ರತಿನಿಧಿಗಳು ಭಾಗವಹಿಸುವರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಸಂಘಟನೆಯ ಡಿ.ಕೆ.ಲತಾ, ಸುಶೀಲಾ, ಮಂಜುಳಾ, ವಿಶಾಲು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>