ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನ ಇನೋವೇಟಿವ್ ಲೈಟಿಂಗ್ ಸಿಸ್ಟಂ ಸಂಸ್ಥೆ ಕಾರ್ಯಕ್ರಮದ ಜವಾಬ್ದಾರಿ ಹೊತ್ತಿದೆ. ಮೈಸೂರು ಮತ್ತು ಶ್ರೀರಂಗಪಟ್ಟಣದ ಗತ ವೈಭವ ತಿಳಿಸುವ ಕಾರ್ಯಕ್ರಮ ಇದಾಗಿದೆ. ಪ್ರತಿ ದಿನ ಸಂಜೆ 7ರಿಂದ 7.40ರ ವರೆಗೆ ಪ್ರದರ್ಶನಗೊಳ್ಳಲಿದೆ. ಮೈಸೂರು, ಮಡಿಕೇರಿಗೆ ಬರುವ ಪ್ರವಾಸಿಗರನ್ನು ಸೆಳೆಯುವ ಪ್ರಯತ್ನ ಮಾಡಲಾಗುವುದು. ಶ್ರೀರಂಗಪಟ್ಟಣ ಪ್ರವಾಸಿ ತಾಣಗಳನ್ನು ಪರಿಚಯಿಸುವ, ಇಲ್ಲಿನ ಪರಂಪರೆಯ ಪ್ರಚಾರ ಮಾಡುವ ಕುರಿತು ಕಾರ್ಯಕ್ರಮ ರೂಪಿಸಲಾಗಿದೆ’ ಎಂದರು.