<p><strong>ಮೇಲುಕೋಟೆ</strong>: ಇಲ್ಲಿನ ಚೆಲುವ ನಾರಾಯಣ ಸ್ವಾಮಿ ದೇಗುಲದಲ್ಲಿ ಹೊಸವರ್ಷ, ಧನುರ್ಮಾಸದ ಅಂಗವಾಗಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದರು.</p>.<p>ವಿಶೇಷ ಪುಷ್ಪದ ಹಾರಗಳಿಂದ ಕಂಗೊಳಿಸಿದ ಚೆಲುವನಾರಾಯಣ ಸ್ವಾಮಿ, ರಾಮಾನುಜಾಚಾರ್ಯ, ಯದುಗಿರಿನಾಯಕಿ ಅಮ್ಮನವರ ದರ್ಶನಕ್ಕೆ ಸುಡುಬಿಸಿಲಲ್ಲೂ ನಡೆದು ಬಂದ ಜನರು ದೇಗುಲ ಹೊರಭಾಗದಿಂದ ಸರತಿ ಸಾಲಿನಲ್ಲಿ ನಿಂತ ಭಕ್ತರು ಗೋವಿಂದ– ಗೋವಿಂದ ಎಂಬ ಜಯಘೋಷ ಮೊಳಗಿಸಿ ದರ್ಶನ ಪಡೆದರು.</p>.<p>ಸೂರ್ಯೋದಯಕ್ಕೂ ಮುನ್ನ ದೇವಾಲಯದಲ್ಲಿ ಪಾರಾಯಣದೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಪಂಚಕಲ್ಯಾಣಿ, ಅಕ್ಕ ತಂಗಿಕೊಳ, ರಾಯಗೋಪುರ, ಧನುಷ್ಕೋಟಿ, ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲೂ ಪ್ರವಾಸಿಗರಿಂದ ತುಂಬಿ ಹೋಗಿದ್ದವು. ಮೇಲುಕೋಟೆ ಪ್ರಾಥಮಿಕ ಸರ್ಕಾರಿ ಆಸ್ವತ್ರೆಯ ಎದುರು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ವಾಹನ ಸಂದಣಿ ಹೆಚ್ಚಿದ್ದರಿಂದ ಸಂಚಾರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಟ್ಟರು. ಯೋಗಾನರಸಿಂಹ ಸ್ವಾಮಿ ಬೆಟ್ಟದ ಮಧ್ಯದವರೆಗೂ ಭಕ್ತರು ಸಾಲಿನಲ್ಲಿ ನಿಂತು ನಿಧಾನವಾಗಿ ದೇವರ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೇಲುಕೋಟೆ</strong>: ಇಲ್ಲಿನ ಚೆಲುವ ನಾರಾಯಣ ಸ್ವಾಮಿ ದೇಗುಲದಲ್ಲಿ ಹೊಸವರ್ಷ, ಧನುರ್ಮಾಸದ ಅಂಗವಾಗಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದರು.</p>.<p>ವಿಶೇಷ ಪುಷ್ಪದ ಹಾರಗಳಿಂದ ಕಂಗೊಳಿಸಿದ ಚೆಲುವನಾರಾಯಣ ಸ್ವಾಮಿ, ರಾಮಾನುಜಾಚಾರ್ಯ, ಯದುಗಿರಿನಾಯಕಿ ಅಮ್ಮನವರ ದರ್ಶನಕ್ಕೆ ಸುಡುಬಿಸಿಲಲ್ಲೂ ನಡೆದು ಬಂದ ಜನರು ದೇಗುಲ ಹೊರಭಾಗದಿಂದ ಸರತಿ ಸಾಲಿನಲ್ಲಿ ನಿಂತ ಭಕ್ತರು ಗೋವಿಂದ– ಗೋವಿಂದ ಎಂಬ ಜಯಘೋಷ ಮೊಳಗಿಸಿ ದರ್ಶನ ಪಡೆದರು.</p>.<p>ಸೂರ್ಯೋದಯಕ್ಕೂ ಮುನ್ನ ದೇವಾಲಯದಲ್ಲಿ ಪಾರಾಯಣದೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಪಂಚಕಲ್ಯಾಣಿ, ಅಕ್ಕ ತಂಗಿಕೊಳ, ರಾಯಗೋಪುರ, ಧನುಷ್ಕೋಟಿ, ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲೂ ಪ್ರವಾಸಿಗರಿಂದ ತುಂಬಿ ಹೋಗಿದ್ದವು. ಮೇಲುಕೋಟೆ ಪ್ರಾಥಮಿಕ ಸರ್ಕಾರಿ ಆಸ್ವತ್ರೆಯ ಎದುರು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ವಾಹನ ಸಂದಣಿ ಹೆಚ್ಚಿದ್ದರಿಂದ ಸಂಚಾರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಟ್ಟರು. ಯೋಗಾನರಸಿಂಹ ಸ್ವಾಮಿ ಬೆಟ್ಟದ ಮಧ್ಯದವರೆಗೂ ಭಕ್ತರು ಸಾಲಿನಲ್ಲಿ ನಿಂತು ನಿಧಾನವಾಗಿ ದೇವರ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>