‘ತೋಟದಲ್ಲಿ ಜನ್ಮದಿನ ಆಚರಣೆ ಮಾಡುತ್ತಿದ್ದರು ಎಂಬ ವಿಷಯ ಗೊತ್ತಾಗಿದೆ. ಯಾರ ಜನ್ಮದಿನ ಎಂಬ ಮಾಹಿತಿ ತಿಳಿಯಬೇಕಾಗಿದೆ, ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಔತಣಕೂಟ ಕುರಿತು ಯಾವುದೇ ಅನುಮತಿ ಪಡೆದಿಲ್ಲ. ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದು ಐವರಿಗಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಆದರೆ ನಿಯಮ ಉಲ್ಲಂಘಿಸಿ ಪಾರ್ಟಿ ನಡೆಸಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದರು.